ಸಲ್ಮಾನ್ ಖಾನ್ 
ಪ್ರಧಾನ ಸುದ್ದಿ

ಸಲ್ಮಾನ್ ಅಪರಾಧ ಸಾಬೀತು ಮಾಡಲು ಕಾನೂನು ವಿಫಲ?

ಗುದ್ದೋಡು ಪ್ರಕರಣದ ಆರೋಪಿ ಬಾಲಿವುಡ್ ನಟ ಸಲ್ಮಾನ್‍ಖಾನ್ ಪಾಲಿಗೆ ಕೊಂಚ ನಿರಾಳ ಒದಗುವ ಸೂಚನೆ...

ಮುಂಬೈ: ಗುದ್ದೋಡು ಪ್ರಕರಣದ ಆರೋಪಿ ಬಾಲಿವುಡ್ ನಟ ಸಲ್ಮಾನ್‍ಖಾನ್ ಪಾಲಿಗೆ ಕೊಂಚ ನಿರಾಳ ಒದಗುವ ಸೂಚನೆ ಸಿಕ್ಕಿದೆ. 
ಸಲ್ಮಾನ್‍ಖಾನ್ ಮದ್ಯಪಾನ ಮಾಡಿದ್ದನ್ನು ಹಾಗೂ ಕುಡಿದು ವಾಹನ ಚಾಲನೆ ಮಾಡಿದ್ದನ್ನು ಸಾಬೀತು ಪಡಿಸಲು ಬೇಕಾಗಿರುವ ಬಲವಾದ ಸಾಕ್ಷಿಗಳು ಇಲ್ಲದಿರುವುದನ್ನು ವಿಚಾರಣೆಯ ಸಮಯದಲ್ಲಿ ಎಂದು ಮುಂಬೈ ಹೈಕೋರ್ಟ್ ಗಮನಿಸಿರುವುದರಿಂದ ಗುರುವಾರ ಹೊರಬರಲಿರುವ ತೀರ್ಪಿನ ಬಗ್ಗೆ ಕುತೂಹಲ ಹೆಚ್ಚಾಗಿದೆ. 
ಸತತ ಮೂರನೇ ದಿನಕ್ಕೆ ಕಾಲಿಟ್ಟ ಸಲ್ಮಾನ್ ಖಾನ್ ಮನವಿ ಅರ್ಜಿಯ ವಿಚಾರಣೆ ಗುರುವಾರ ಕೊನೆಗೊಳ್ಳಲಿದ್ದು, ಸಲ್ಮಾನ್ ಹಣೆಬರಹ ಸಂಜೆಯ ಹೊತ್ತಿಗೆ ನಿರ್ಧಾರವಾಗಲಿದೆ. 2002ರ ಈ ಪ್ರಕರಣದಲ್ಲಿ ಐದುವರ್ಷ ಜೈಲುಶಿಕ್ಷೆಯ ವಿರುದ್ಧ ಸಲ್ಮಾನ್ ಸಲ್ಲಿಸಿರುವ ಮನವಿ ಅರ್ಜಿಯ ವಿಚಾರಣೆ ನಡೆಸುತ್ತಿರುವ ನ್ಯಾ.ಎ .ಆರ್ ಜೋಷಿ, ಪ್ರತ್ಯಕ್ಷ ಸಾಕ್ಷಿ ರವೀಂದ್ರ ಪಾಟೀಲ್ ರ ಹೇಳಿಕೆಗಳ ಬಗ್ಗೆಯೂ ಅನುಮಾನ ವ್ಯಕ್ತಪಡಿಸಿದ್ದಾರೆ. 
ಮೂಲ ಎಫ್ ಐಆರ್‍ಗೂ ನಂತರದ ಹೇಳಿಕೆಗಳಿಗೂ ವ್ಯತ್ಯಾಸವಿದೆ ಎಂದಿದ್ದಾರೆ. ಏತನ್ಮಧ್ಯೆ ಅಂದು ಕಾರ್‍ನಲ್ಲಿದ್ದ ಗಾಯಕ ಕಮಾಲ್ ಖಾನ್ ರನ್ನೂ ಪರೀಕ್ಷೆಗೆ ಒಳಪಡಿಸಬೇಕಿತ್ತೆಂದು ಅಭಿಪ್ರಾಯಪಟ್ಟಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT