ಕಾರ್ಪೋರೇಟರ್ ಮಗ 
ಪ್ರಧಾನ ಸುದ್ದಿ

ಕಾರ್ಪೊರೇಟರ್​ ಪುತ್ರನಿಂದ ಮೂವರಿಗೆ ಚೂರಿ ಇರಿತ

ತನ್ನನ್ನು ಗುರಾಯಿಸಿದರು ಎಂಬ ಕಾರಣಕ್ಕೆ ಶಿವಾಜಿನಗರ ಕಾರ್ಪೋರೇಟರ್ ಫರೀದಾ ಪುತ್ರ ಜಮಾಮ್ ಮೂವರಿಗೆ ಚೂರಿಯಿಂದ ಇರಿದಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ...

ಬೆಂಗಳೂರು: ತನ್ನನ್ನು ಗುರಾಯಿಸಿದರು ಎಂಬ ಕಾರಣಕ್ಕೆ ಶಿವಾಜಿನಗರ ಕಾರ್ಪೋರೇಟರ್ ಫರೀದಾ ಪುತ್ರ ಜಮಾಮ್ ಮೂವರಿಗೆ ಚೂರಿಯಿಂದ ಇರಿದಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ಕಳೆದ ನವೆಂಬರ್ 29 ರಂದು ಶಿವಾಜಿನಗರದ ಸವೇರಾ ಹೋಟೆಲ್ ಬಳಿ ಟೀ ಕುಡಿಯಲು ಬಂದಾಗ ಗುಂಪೊಂದು ಜಮಾಮ್ ನನ್ನ ಗುರಾಯಿಸಿದ್ದಾರೆ. ಇದರಿಂದ ಜಮಾಮ್ ಸ್ನೇಹಿತರ ಜೊತೆಗೂಡಿ ಮೂವರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದಾನೆ.

ಹಲ್ಲೆಗೊಳಗಾದ ರಾಹುಲ್, ದಿಲೀಪ್ ಮತ್ತು ವಿನೋದ್ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪೈಕಿ ರಾಹುಲ್ ಎಂಬಾತನ ಸ್ಥಿತಿ ಗಂಭೀರವಾಗಿದೆ.

ಪ್ರಕರಣ ದಾಖಲಿಸಿಕೊಂಡಿದ್ದ ಶಿವಾಜಿನಗರ ಪೊಲೀಸರು ನೂರ್ ಎಂಬಾತನನ್ನ ಬಂಧಿಸಿ ವಿಚಾರಣೆ ನಡೆಸಿದ್ದಾರೆ. ತಲೆ ಮರೆಸಿಕೊಂಡಿರುವ ಕಾಪೋರೇಟರ್ ಪುತ್ರ ಜಮಾಮ್​ಗಾಗಿ ಹುಡುಕಾಟ ನಡೆಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

SCROLL FOR NEXT