ಸರ್ಕಾರಿ ಶಾಲೆಗಳು (ಸಂಗ್ರಹ ಚಿತ್ರ) 
ಪ್ರಧಾನ ಸುದ್ದಿ

ಸೀಮೆಸುಣ್ಣಕ್ಕೂ ಕಷ್ಟ: 3 ದಿನ ಶಾಲೆಗಳ ಬಂದ್?

ಸರ್ಕಾರಿ ಶಾಲೆಗಳ ಸಬಲೀಕರಣಕ್ಕೆ ಒತ್ತಾಯಿಸಿ ಜನವರಿ ಮಾಸದಲ್ಲಿ ಮೂರು ದಿನಗಳ ಕಾಲ ಸರ್ಕಾರಿ ಶಾಲೆಗಳನ್ನು ಬಂದ್ ಮಾಡಿ ಸರ್ಕಾರವನ್ನು ಎಚ್ಚರಿಸಲು ಕರ್ನಾಟಕ ರಾಜ್ಯ..

ಬೆಂಗಳೂರು: ಸರ್ಕಾರಿ ಶಾಲೆಗಳ ಸಬಲೀಕರಣಕ್ಕೆ ಒತ್ತಾಯಿಸಿ ಜನವರಿ ಮಾಸದಲ್ಲಿ ಮೂರು ದಿನಗಳ ಕಾಲ ಸರ್ಕಾರಿ ಶಾಲೆಗಳನ್ನು ಬಂದ್ ಮಾಡಿ ಸರ್ಕಾರವನ್ನು ಎಚ್ಚರಿಸಲು ಕರ್ನಾಟಕ ರಾಜ್ಯ  ಶಾಲಾಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿಗಳ ಸಮನ್ವಯ ವೇದಿಕೆ ಉದ್ದೇಶಿಸಿದೆ.

ಕೆಲವೊಂದು ಶಾಲೆಗಳಲ್ಲಿ ಸೀಮೆಸುಣ್ಣ, ಬಿಳಿ ಹಾಳೆ ಖರೀದಿಗೂ ಹಣದ ಕೊರತೆ ಎದುರಿಸುತ್ತಿರುವ ಕುರಿತಂತೆಯೂ ವೇದಿಕೆಯ ಸದಸ್ಯರು ಗಂಭೀರವಾಗಿ ಚರ್ಚಿಸಿದ್ದಾರೆ. ಹೀಗಾಗಿ ಶಾಲೆಗಳ   ಬಂದ್ಗೆ ಮುಂದಾಗಿದ್ದಾರೆ. ಭಾನುವಾರ ಶಿಕ್ಷಕರ ಸದನದಲ್ಲಿ ವೇದಿಕೆಯು ಹಮ್ಮಿಕೊಂಡಿದ್ದ ಸರ್ಕಾರಿ ಶಾಲೆಗಳ ಸಬಲೀಕರಣದಲ್ಲಿ ಮೇಲುಸ್ತುವಾರಿ ಸಮಿತಿಗಳ ಪಾತ್ರ ಕುರಿತಾಗಿನ ಸಭೆಯಲ್ಲಿ ಈ  ವಿಚಾರ ಪ್ರಸ್ತಾಪವಾಗಿದ್ದು, ಶೀಘ್ರವೇ ಅಂತಿಮ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ವೇದಿಕೆಯ ಪ್ರಮುಖರು ತಿಳಿಸಿದ್ದಾರೆ. 30 ಜಿಲ್ಲೆಗಳ 90ಕ್ಕೂ ಹೆಚ್ಚು ಪ್ರತಿನಿಧಿಗಳು ಸಭೆಯಲ್ಲಿ ಹಾಜರಿದ್ದರು.

ಸರ್ಕಾರಿ ಶಾಲೆಗಳು ಹಂತಹಂತವಾಗಿ ಮುಚ್ಚಲ್ಪಡುತ್ತಿರುವುದು, ಸರ್ಕಾರದಿಂದ ಸೂಕ್ತ ಕಾಲದಲ್ಲಿ ಅನುದಾನ ಬಿಡುಗಡೆ ಆಗದೇ ಇರುವುದು, ಏಕೋಪಾಧ್ಯಾಯ ಶಾಲೆಗಳ ಸಂಖ್ಯೆ ದಿನೇ ದಿನೇ  ಹೆಚ್ಚುತ್ತಿರುವುದು, ಶಿಕ್ಷಕರ ಕೊರತೆ ಬಗ್ಗೆ ಸಭೆಯಲ್ಲಿ ಗಂಭೀರ ಚರ್ಚೆಯಾಯಿತು. ಪ್ರಮುಖವಾಗಿ ಶಾಲೆಗಳಿಗೆ ಸರ್ಕಾರ ಅನುದಾನ ಬಿಡುಗಡೆ ಮಾಡದೇ ಇರುವ ವಿಚಾರ ಗಂಭೀರ  ಚರ್ಚೆಯಾಯಿತು. ಅನುದಾನವಿಲ್ಲದೇ ಅನೇಕ ಶಾಲೆಗಳಲ್ಲಿ ಸೀಮೆಸುಣ್ಣ, ಬಿಳಿಹಾಳೆಗೂ ಕಷ್ಟವಾಗಿದೆ. ವಿದ್ಯುತ್ ಸಂಪರ್ಕ ಕಡಿತಗೊಂಡಿದೆ, ಕಟ್ಟಡಗಳ ತುರ್ತು ನಿರ್ವಹಣೆಯಾಗಬೇಕಾಗಿದೆ, ಶಾಲೆಯ ಸಣ್ಣಪುಟ್ಟ ಖರ್ಚನ್ನೂ ಎಸ್‍ಡಿಎಂಸಿ ಭರಿಸುವಂತಾಗಿದೆ. ಇದು ನಿಜಕ್ಕೂ ಹಾಸ್ಯಾಸ್ಪದ ಸಂಗತಿ ಎಂದು ಕೆಲವು ಸದಸ್ಯರು ಸರ್ಕಾರವನ್ನು ಟೀಕಿಸಿದರು.

ಅನೇಕ ಕಡೆ ಶಿಕ್ಷಕರ ಕೊರತೆ ಗಂಭೀರವಾಗಿ ದ್ದು ಇದನ್ನು ಪರಿಹರಿಸುವ ನಿಟ್ಟಿನಲ್ಲಿ ಪ್ರಯತ್ನಗಳು ನಡೆದಿಲ್ಲ. ಎಸ್‍ಡಿಎಂಗಳು ಹಣಹಾಕಿ ಶಿಕ್ಷಕರನ್ನು ನೇಮಿಸುವಂತಾಗಿದೆ. ಸೂಕ್ತ ಕಾಲದಲ್ಲಿ  ನೇಮಕಾತಿಗಳು ನಡೆಯದ ಕಾರಣ ಗುತ್ತಿಗೆ ಶಿಕ್ಷಕರ ಸಂಖ್ಯೆ ಹೆಚ್ಚಿದ್ದು, ಇದು ಹೊಸ ಸಮಸ್ಯೆಯಾಗುತ್ತಿದೆ ಎಂದು ಸಭೆಯಲ್ಲಿದ್ದವರು ಅಭಿಪ್ರಾಯ ವ್ಯಕ್ತಪಡಿಸಿದರು. ಸರ್ಕಾರದ ನೀತಿ ಖಂಡಿಸಿ  ಜನವರಿಯಲ್ಲಿ 3 ದಿನ ಶಾಲೆಗಳನ್ನು ಮುಚ್ಚುವ ಚರ್ಚೆ ನಡೆದಿದ್ದು ಶೀಘ್ರ ನಿರ್ಧಾರ ಪ್ರಕಟಿಸುವುದಾಗಿ ವೇದಿಕೆಯ ಪ್ರಮುಖರು ತಿಳಿಸಿದರು.

ಈ ಬೆಳವಣಿಗೆ ಕುರಿತು ಪ್ರತಿಕ್ರಿಯಿಸಿದ ಶಿಕ್ಷಣ ತಜ್ಞ  ನಿರಂಜನ ಆರಾಧ್ಯ, ಸರ್ಕಾರಿ ಶಾಲೆಗಳನ್ನು ಸರ್ಕಾರವೇ ಕಡೆಗಣಿಸುವುದು ಸರಿಯಲ್ಲ. ಈ ಬಗ್ಗೆ ಸಭೆಯಲ್ಲಿ ದೀರ್ಘ ಚರ್ಚೆ ನಡೆಯಿತು. ಎಸ್‍ಡಿಎಂಸಿ ಪ್ರಮುಖರು ತಮ್ಮ ಸಮಸ್ಯೆಗಳನ್ನು  ಹೇಳಿಕೊಂಡರು. ಇನ್ನಾದರೂ ಸರ್ಕಾರ ಎಚ್ಚೆತ್ತುಕೊಂಡು ಸಮಸ್ಯೆ ಬಗೆಹರಿಸುವತ್ತ ಕ್ರಮ ಕೈಗೊಳ್ಳಲಿ ಎಂದರು. ಸಾಹಿತಿ ಚಂದ್ರಶೇಖರ ಕಂಬಾರ, ಕರ್ನಾಟಕ ಪ್ರಾಥಮಿಕ ಶಾಲಾ ಶಿಕ್ಷಕರ  ಸಂಘದ ಅಧ್ಯಕ್ಷ ಗುರಿಕಾರ, ಅಖಿಲ ಭಾರತ ಮಹಾ ಕಾರ್ಯದರ್ಶಿ ಕಮಲಾಕರ ತ್ರಿಪಾಠಿ ಇದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವು ಇಲ್ಲಿ ಹುಟ್ಟೋದು ಬೇಡ ನಿಮ್ಮ ಕ್ಷೇತ್ರದ ಶೇ. 75 ರಷ್ಟಾದರೂ ಇಲ್ಲಿ ಅಭಿವೃದ್ಧಿ ಮಾಡಿ: ಡಿಕೆಶಿಗೆ ಖರ್ಗೆ ಟಾಂಗ್; Video

ಸ್ವಾತಂತ್ರ್ಯ ಬಳಿಕ ಇದೇ ಮೊದಲು: ಮಕರ ಸಂಕ್ರಾಂತಿಗೆ ಮತ್ತೊಂದು ಹೊಸ 'ದಾಖಲೆ'ಗೆ ಸಜ್ಜಾದ ಪ್ರಧಾನಿ ಮೋದಿ!

ಡೆಂಟಲ್ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ ಕೇಸ್: ಕೆಲಸದಿಂದ 6 ಪ್ರಾಧ್ಯಾಪಕರ ವಜಾ

ಯಶ್ 'ಟಾಕ್ಸಿಕ್' ಟೀಸರ್ ವಿರುದ್ಧ ಮಹಿಳಾ ಆಯೋಗಕ್ಕೆ ಎಎಪಿ ದೂರು; 'ಆ' ದೃಶ್ಯಕ್ಕೆ ಆಕ್ಷೇಪ!

ಟ್ರಂಪ್ ಗೆ 'ಮರೆಯಲಾಗದ ಪಾಠ' ಕಲಿಸುತ್ತೇವೆ: ಇರಾನ್ ಸಂಸತ್ ಸ್ಪೀಕರ್ ಖಡಕ್ ವಾರ್ನಿಂಗ್!

SCROLL FOR NEXT