ನ್ಯಾ.ಆನಂದ್ 
ಪ್ರಧಾನ ಸುದ್ದಿ

ಉಪ ಲೋಕಾಯುಕ್ತರಾಗಿ ನ್ಯಾ.ಆನಂದ್ ನೇಮಕ

ಹೈಕೋರ್ಟ್ ನಿವೃತ್ತಿ ನ್ಯಾಯಮೂರ್ತಿ ಎನ್. ಆನಂದ್ ಅವರು ಸೋಮವಾರ ನೂತನ ಉಪ ಲೋಕಾಯುಕ್ತರಾಗಿ ನೇಮಕಗೊಂಡಿದ್ದಾರೆ.

ಬೆಂಗಳೂರು: ಹೈಕೋರ್ಟ್ ನಿವೃತ್ತಿ ನ್ಯಾಯಮೂರ್ತಿ ನಾರಾಯಣಪ್ಪ ಆನಂದ್ ಅವರು ಸೋಮವಾರ ನೂತನ ಉಪ ಲೋಕಾಯುಕ್ತರಾಗಿ ನೇಮಕಗೊಂಡಿದ್ದಾರೆ.

ಉಪ ಲೋಕಾಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದ ನ್ಯಾಯಮೂರ್ತಿ ಮಜಗೆ ಅವರ ನಿವೃತ್ತಿಯಿಂದ ತೆರವಾಗಿದ್ದ ಸ್ಥಾನಕ್ಕೆ ರಾಜ್ಯ ಸರ್ಕಾರ ನ್ಯಾ.ಆನಂದ್ ಅವರ ಹೆಸರನ್ನು ಶಿಫಾರಸು ಮಾಡಿತ್ತು. ರಾಜ್ಯ ಸರ್ಕಾರದ ಶಿಫಾರಸಿಗೆ ರಾಜ್ಯಪಾಲ ವಜುಭಾಯಿ ವಾಲಾ ಅವರು ಇಂದು ತಮ್ಮ ಅಂಕಿತ ಹಾಕಿದ್ದಾರೆ.

ನ್ಯಾ. ಕೆ.ಎಲ್. ಮಂಜುನಾಥ್ ಅವರ ನೇಮಕಕ್ಕೆ ಪಟ್ಟು ಹಿಡಿದು, ರಾಜ್ಯಪಾಲರಿಂದ ಮೂರು ಬಾರಿ ಮುಖಭಂಗ ಅನುಭವಿಸಿದ್ದ ರಾಜ್ಯಸರಕಾರ, ಕೊನೆಗೆ ನ್ಯಾ. ಆನಂದ್ ಅವರ ಹೆಸರನ್ನು ಶಿಫಾರಸು ಮಾಡಿತ್ತು.

1953, ಮೇ 8ರಂದು ಕೋಲಾರ ಜಿಲ್ಲೆಯ ಬ್ಯಾದನಹಳ್ಳಿಯಲ್ಲಿ ಜನಿಸಿದ ನ್ಯಾ.ಆನಂದ್ ಅವರು ಕಳೆದ ಜುಲೈನಲ್ಲಿ ಹೈಕೋರ್ಟ್ ನಿಂದ ನಿವೃತ್ತಿಯಾಗಿದ್ದರು. ನೇರ ನಡೆ, ನುಡಿಗೆ ಹೆಸರಾಗಿರುವ ಆನಂದ್ ಅವರು, ರಿಂಗ್ ರೋಡ್ ಶುಭಾ ಹಾಗೂ ಸ್ವಾಮಿ ನಿತ್ಯಾನಂದ ಲೈಂಗಿಕ ಹಗರಣ ಸೇರಿದಂತೆ ಸುಮಾರು 23 ಸಾವಿರಕ್ಕೂ ಹೆಚ್ಚು ಪ್ರಕರಣಗಳಲ್ಲಿ ತೀರ್ಪು ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

2nd Test: ವಿಂಡೀಸ್ ವಿರುದ್ಧ ಕುಲದೀಪ್ ಯಾದವ್ ಭರ್ಜರಿ ಬೌಲಿಂಗ್, ವಿಶ್ವ ದಾಖಲೆ

2nd Test, Day 3: ಮೊದಲ ಇನ್ನಿಂಗ್ಸ್ ನಲ್ಲಿ 248 ರನ್ ಗೆ ವಿಂಡೀಸ್ ಆಲೌಟ್, ಫಾಲೋಆನ್ ಹೇರಿದ ಭಾರತ

SCROLL FOR NEXT