ಸಾಂದರ್ಭಿಕ ಚಿತ್ರ 
ಪ್ರಧಾನ ಸುದ್ದಿ

'ಕಾಂಗ್ರೆಸ್ ಬ್ಯೂರೋ ಆಫ್ ಇನ್ವೆಸ್ಟಿಗೇಶನ್' ನಿಂದ 'ಚಡ್ಡಿ ಬ್ಯೂರೋ ಆಫ್ ಇನ್ವೆಸ್ಟಿಗೇಶನ್': ಟ್ವಿಟ್ಟರಾಟಿ ಲೇವಡಿ

ಸೆಂಟ್ರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಶನ್ (ಸಿಬಿಐ) ಸಂಸ್ಥೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಕಚೇರಿ ಮೇಲೆ ದಾಳಿ ನಡೆಸಿದೆ ಎಂಬ ಆರೋಪ ಪ್ರತ್ಯೋರೋಪ

ಸೆಂಟ್ರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಶನ್ (ಸಿಬಿಐ) ಸಂಸ್ಥೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಕಚೇರಿ ಮೇಲೆ ದಾಳಿ ನಡೆಸಿದೆ ಎಂಬ ಆರೋಪ ಪ್ರತ್ಯೋರೋಪ ಮಂಗಳವಾರ ಬೆಳಗ್ಗಿನಿಂದಲೂ ವಿವಾದಕ್ಕೆ ಎಡೆ ಮಾಡಿಕೊಟ್ಟಿದ್ದು ಸಾಮಾಜಿಕ ಅಂತರ್ಜಾಲ ತಾಣ ತನ್ನದೇ ರೀತಿಯಲ್ಲಿ ಇದಕ್ಕೆ ಪ್ರತಿಕ್ರಿಯಿಸಿದೆ.

ಟ್ವಿಟ್ಟರ್ ಮತ್ತು ಫೇಸ್ಬುಕ್ ಗಳಲ್ಲಿ ಹಲವು ಬಳಕೆದಾರರು ಸಿಬಿಐ ಸಂಸ್ಥೆ 'ಕಾಂಗ್ರೆಸ್ ಬ್ಯೂರೋ ಆಫ್ ಇನ್ವೆಸ್ಟಿಗೇಶನ್' ನಿಂದ 'ಚಡ್ಡಿ ಬ್ಯೂರೋ ಆಫ್ ಇನ್ವೆಸ್ಟಿಗೇಶನ್' ಆಗಿದೆ ಎಂದು ಲೇವಡಿ ಮಾಡಿದ್ದಾರೆ. ಹಿಂದೆ ಸಿಬಿಐ ಕಾಂಗ್ರೆಸ್ ಹಿಡಿತದಲ್ಲಿದೆ ಆದುದರಿಂದ ಅದು 'ಸೆಂಟ್ರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಶನ್' ಅಲ್ಲ ಬದಲಾಗಿ 'ಕಾಂಗ್ರೆಸ್ ಬ್ಯೂರೋ ಆಫ್ ಇನ್ವೆಸ್ಟಿಗೇಶನ್' ಎಂದು ಬಿಜೆಪಿ ಪಕ್ಷ ಹಲವಾರು ಬಾರಿ ಕುಟುಕಿರುವುದನ್ನು ಇಲ್ಲಿ ನೆನಪಿಸಿಕೊಳ್ಳಬಹುದು.

ಆದರೆ ಈಗಿನ ಕೇಂದ್ರ ಸರ್ಕಾರ 'ಆರ್ ಎಸ್ ಎಸ್' ಹಿಡಿತದಲ್ಲಿದೆ ಎಂದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಹಲವರು ಆರ್ ಎಸ್ ಎಸ್ ಸಮವಸ್ತ್ರವಾದ ಚಡ್ಡಿಯನ್ನು ಸಿಬಿಐನ ಮೊದಲ ಅಕ್ಷರಕ್ಕೆ ವಿಸ್ತರಣೆಯಾಗಿ ಬಳಸಿ ತನ್ನದೇ ರೀತಿಯಲ್ಲಿ ವಿರೋಧ ವ್ಯಕ್ತಪಡಿಸಿದ್ದಾರೆ.

ಸಿಬಿಐ ಅರವಿಂದ್ ಕೆಜ್ರಿವಾಲ್ ಅವರ ಕಚೇರಿಯ ಮೇಲೆ ದಾಳಿ ನಡೆಸಿಲ್ಲ ಎಂಬ ಸ್ಪಷ್ಟನೆ ನೀಡಿದ್ದರೂ ಇದನ್ನು ಅಲ್ಲಗೆಳೆದಿರುವ ಕೇಜ್ರಿವಾಲ್, ಇದು ಪ್ರಧಾನಿ ಮೋದಿ ಅವರು ರಾಜಕೀಯ ದುರುದ್ದೇಶದಿಂದ ಮಾಡಿಸಿರುವ ಕೃತ್ಯ ಮತ್ತು ಅವರು ಹೇಡಿ, ಸೈಕೋಪಾತ್ ಎಂದು ಬೆಳಗ್ಗೆ ಟ್ವೀಟ್ ಮಾಡಿದ್ದರು. ಇದಕ್ಕೆ ಬಿಜೆಪಿ ಪಕ್ಷದಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!