ಸಾಂದರ್ಭಿಕ ಚಿತ್ರ 
ಪ್ರಧಾನ ಸುದ್ದಿ

ಕೇಜ್ರಿವಾಲ್ ಕಾರ್ಯದರ್ಶಿ ನಿವಾಸದಲ್ಲಿ ೨.೪ ಲಕ್ಷ ವಶ: ಸಿಬಿಐ

ಸಿಬಿಐ ಮಂಗಳವಾರ ದೆಹಲಿ ಮತ್ತು ಉತ್ತರಪ್ರದೇಶದಲ್ಲಿ ಸುಮಾರು ೧೪ ಕಡೆ ದಾಳಿ ನಡೆಸಿದ್ದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಕಾರ್ಯದರ್ಶಿಯವರ

ನವದೆಹಲಿ: ಸಿಬಿಐ ಮಂಗಳವಾರ ದೆಹಲಿ ಮತ್ತು ಉತ್ತರಪ್ರದೇಶದಲ್ಲಿ ಸುಮಾರು ೧೪ ಕಡೆ ದಾಳಿ ನಡೆಸಿದ್ದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಕಾರ್ಯದರ್ಶಿಯವರ ಮನೆಯಲ್ಲಿ ೨.೪ ಲಕ್ಷ ರೂ ವಶಪಡಿಸಿಕೊಂಡಿರುವುದಾಗಿ ತಿಳಿಸಿದೆ.

ಕಾರ್ಯದರ್ಶಿ ರಾಜೇಂದ್ರ ಕುಮಾರ್ ಅವರ ನಿವಾಸದಿಂದ ಮೂರು ಸ್ಥಿರಾಸ್ತಿಗಳ ಕಡತಗಳು ಮತ್ತು ನಗದನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಸಿಬಿಐ ವಕ್ತಾರ ತಿಳಿಸಿದ್ದಾರೆ.

ಇದಕ್ಕೂ ಮುಂಚಿತವಾಗಿ ಈ ದಾಳಿಯ ವಿರುದ್ಧ ಹರಿಹಾಯ್ದಿದ್ದ ಕೇಜ್ರಿವಾಲ್ ಇದು ರಾಜಕೀಯ ದ್ವೇಷಕ್ಕಾಗಿ ನಡೆದಿರುವ ಸಂಚು ಎಂದಿದ್ದಲ್ಲದೆ ಮೋದಿ ಅವರು ಹೇಡಿ ಮತ್ತು ಸೈಕೋಪಾತ್ ಎಂದು ಬರೆದಿದ್ದರು.

ತಮ್ಮ ಇಮೇಲ್ ಗಳನ್ನು ತೆರೆದು ತೋರಿಸಲು ಕುಮಾರ್ ಅವರು ಸಹಕರಿಸಿಲ್ಲ ಎಂದು ಕೂಡ ಸಿಬಿಐ ಆರೋಪಿಸಿದೆ.

ಕುಮಾರ್ ಜೊತೆ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಲಾಗಿರುವ ಜಿ ಕೆ ನಂದಾ ಅವರ ಮನೆಯಲ್ಲಿ ೧೦.೫ ಲಕ್ಷ ರೂ ವಶಪಡಿಸಿಕೊಂಡಿರುವುದಾಗಿ ಸಿಬಿಐ ತಿಳಿಸಿದೆ.

ಟೆಲಿಕಮ್ಯುನಿಕೇಶನ್ಸ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ (ಟಿಸಿಐಎಲ್) ನಲ್ಲಿ ನಂದಾ ಕಾರ್ಯಕಾರಿ ವ್ಯವಸ್ಥಾಪಕ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

SCROLL FOR NEXT