ಸಾಂದರ್ಭಿಕ ಚಿತ್ರ 
ಪ್ರಧಾನ ಸುದ್ದಿ

ಸಿಎಂ ಪುತ್ರನ ಆಪ್ತ, ಕಾಂಗ್ರೆಸ್ ನಾಯಕ ರಮೇಶ್ ಮನೆ ಮೇಲೆ ಐಟಿ ದಾಳಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ರಾಕೇಶ್ ಅವರ ಆಪ್ತ ಹಾಗೂ ಕಾಂಗ್ರೆಸ್‌ ನಾಯಕ ಪಿ.ರಮೇಶ್‌ ಅವರ ಮನೆಯ ಮೇಲೆ...

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ರಾಕೇಶ್ ಅವರ ಆಪ್ತ ಹಾಗೂ ಕಾಂಗ್ರೆಸ್‌ ನಾಯಕ ಪಿ.ರಮೇಶ್‌ ಅವರ ಮನೆಯ ಮೇಲೆ ಮಂಗಳವಾರ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿ, ಹಲವು ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ.

ಇಂದು ಬೆಳಗ್ಗೆ ರಮೇಶ್‌ ಅವರ ಜೋಗುಪಾಳ್ಯದಲ್ಲಿರುವ ಮನೆಯ ಮೇಲೆ ದಾಳಿ ನಡೆಸಿದ ಅಧಿಕಾರಿಗಳು, ಹಲವು ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದು, ಪರಿಶೀಲಿಸುತ್ತಿದ್ದಾರೆ ಎನ್ನಲಾಗಿದೆ.

ದಾಳಿ ವೇಳೆ ನಿವಾಸದಲ್ಲಿದ್ದ 3 ಲಕ್ಷ ರೂಪಾಯಿ ಮೌಲ್ಯದ ವಿದೇಶಿ ಕರೆನ್ಸಿಯನ್ನು ಅಧಿಕಾರಿಗಳು ಜಪ್ತಿ ಮಾಡಿದ್ದು, ಸಿಎಂ ಪುತ್ರ ರಾಕೇಶ್‌ ಅವರಿಗೆ ಸೇರಿರುವ ಹಲವು ದಾಖಲೆಗಳು ,ಹಲವು ಗುತ್ತಿಗೆದಾರರ ಮೊಬೈಲ್‌ ನಂಬರ್‌ಗಳನ್ನು ಪರಿಶೀಲನೆ ನಡೆಸಿದ್ದಾರೆ ಎಂದು ವರದಿಯಾಗಿದೆ.

ದೆಹಲಿ ಮತ್ತು ಕೋಲ್ಕತಾದಿಂದ ಆಗಮಿಸಿದ್ದ 45 ಕ್ಕೂ ಹೆಚ್ಚು ಅಧಿಕಾರಿಗಳು ದಾಳಿ ನಡೆಸಿದ್ದು, ಇನ್ನೂ ಕೆಲವರ ನಿವಾಸಗಳ ಮೇಲೆ ದಾಳಿ ಮಾಡುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ.

ಪಿ.ರಮೇಶ್‌ ಅವರು ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಬೆಂಗಳೂರಿನ ಸಿ.ವಿ.ರಾಮನ್‌ ನಗರ ಕ್ಷೇತ್ರದಲ್ಲಿ ಪರಾಭವಗೊಂಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT