ಸಾಂದರ್ಭಿಕ ಚಿತ್ರ 
ಪ್ರಧಾನ ಸುದ್ದಿ

ನಿರ್ಭಯಾ ಪ್ರಕರಣ: ಟೈಲರ್ ಆಗಿ ಹೊಸಜೀವನ ಆರಂಭಿಸಲಿದ್ದಾನೆ ಬಾಲಾಪರಾಧಿ

ಬಾಲಾಪರಾಧಿಗೆ ಹೊಸ ಜೀವನ ಆರಂಭಿಸಲು ಮಹಿಳಾ ಮತ್ತು ಮಕ್ಕಳ ಇಲಾಖೆ 10 ಸಾವಿರ ರೂಪಾಯಿ ಧನಸಹಾಯ ಹಾಗೂ ಒಂದು ಹೊಲಿಗೆ ಯಂತ್ರ ನೀಡಲಿದೆ...

 ಇಡಿ ದೇನವದೆಹಲಿ;ಶವನ್ನೇ ಬೆಚ್ಚಿ ಬೀಳಿಸಿದ್ದ ನಿರ್ಭಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣ ನಡೆದು ಮೂರು ವರ್ಷಗಳು ಕಳೆಯುತ್ತಿದೆ. ಪ್ರಕರಣದಲ್ಲಿ ಭಾಗಿಯಾಗಿದ್ದ ಬಾಲಾಪರಾಧಿಯನ್ನು ಡಿಸೆಂಬರ್ 20 ರಂದು ಜೈಲಿನಿಂದ ಬಿಡುಗಡೆಗೊಳಿಸಲಾಗುತ್ತದೆ.

ಬಾಲಾಪರಾಧಿ ಬಿಡುಗಡೆಗೊಳಿಸುವ ಕ್ರಮಕ್ಕೆ ಕೇಂದ್ರ ಸರ್ಕಾರ,  ನಿರ್ಭಯಾ ಪೋಷಕರು ವಿರೋಧ ವ್ಯಕ್ತ ಪಡಿಸಿದ್ದಾರೆ. ಜೊತೆಗೆ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಬಾಲಾಪರಾಧಿಯನ್ನು ಬಿಡುಗಡೆಗೊಳಿಸದಂತೆ ನ್ಯಾಯಾಲಯಕ್ಕೆ ಅಪೀಲು ಸಲ್ಲಿಸಿದ್ದಾರೆ.

ಇದೆಲ್ಲದರ ನಡುವೆ 20 ವರ್ಷದ ಬಾಲಾಪರಾಧಿ, ಗರಿಷ್ಠ ಶಿಕ್ಷೆ ಅನುಭವಿಸಿದ್ದು, ಇನ್ನು ಹೆಚ್ಚಿನ ಶಿಕ್ಷೆಯ ಪ್ರಮಾಣಕ್ಕೆ ಬಾಲಾಪರಾಧ ಕಾಯ್ದೆಯಲ್ಲಿ ಅವಕಾಶವಿಲ್ಲ ಎಂದು ಕೋರ್ಟ್ ಹೇಳಿದೆ.

ಬಾಲಾಪರಾಧಿಗೆ ಹೊಸ ಜೀವನ ಆರಂಭಿಸಲು ಮಹಿಳಾ ಮತ್ತು  ಮಕ್ಕಳ ಇಲಾಖೆ 10 ಸಾವಿರ ರೂಪಾಯಿ ಧನಸಹಾಯ ಹಾಗೂ ಒಂದು ಹೊಲಿಗೆ ಯಂತ್ರ ನೀಡಲಿದೆ. ಇದರಿಂದ ಆತ ಟೈಲರ್ ವೃತ್ತಿ ಆರಂಭಿಸಿ ಜೀವನ ನಡೆಸಲಿದ್ದಾನೆ.

ತೀರಾ ಬಡ ಕುಟುಂಬದ ಹಿನ್ನೆಲೆ ಹೊಂದಿರುವ ಬಾಲಾಪರಾಧಿ ತಂದೆ ಮಾನಸಿಕ ರೋಗಿ, ಮಗನ ಕೃತ್ಯದಿಂದ ನೊಂದ ತಾಯಿ ಇನ್ನೂ ಶಾಕ್ ನಿಂದ ಹೊರಬಂದಿಲ್ಲ. ಆತನ ಸಹೋದರರು ಇನ್ನೂ ಚಿಕ್ಕವರಿರುವ ಕಾರಣ ಸಂಸಾರದ ಜವಾಬ್ದಾರಿ ಬಾಲಾಪರಾಧಿಯ ಮೇಲಿದೆ. ಹೀಗಾಗಿ ಆತನ ಕುಟುಂಬಕ್ಕೆ ಸಹಾಯವಾಗಲಿ ಎಂದು ಆತನಿಗೆ ಹಣಕಾಸಿನ ನೆರವು ನೀಡಿ, ಜೀವನ ಕಲ್ಪಿಸಿಕೊಳ್ಳುವುದಕ್ಕೆ ಮಹಿಳಾ ಮತ್ತು ಮಕ್ಕಳ ಇಲಾಖೆ ಅವಕಾಶ ಮಾಡಿಕೊಡಲು ಮುಂದಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT