(ಸಾಂದರ್ಭಿಕ ಚಿತ್ರ) 
ಪ್ರಧಾನ ಸುದ್ದಿ

ನಾಳೆ 2 ಗಂಟೆ ಕೇಬಲ್ ಕಟ್

ಬಿಬಿಎಂಪಿ ಅಧಿಕಾರಿಗಳು ಕೇಬಲ್ ತೆರವುಗೊಳಿಸುತ್ತಿರುವುದನ್ನು ಖಂಡಿಸಿ ಭಾನುವಾರ 2 ಗಂಟೆಗಳ ಕಾಲ ಕೇಬಲ್ ಸಂಪರ್ಕ ಕಡಿತಗೊಳಿಸಲು ಆಪರೇಟರ್ ಗಳು ನಿರ್ಧರಿಸಿದ್ದಾರೆ. ಕೇಬಲ್ ತೆರವು ಕಾರ್ಯಾಚರಣೆ ಮುಂದುವರಿಸಿದರೆ ರಾಜ್ಯ ವ್ಯಾಪ್ತಿ ಕೇಬಲ್ ಸಂಪರ್ಕ...

ಬೆಂಗಳೂರು: ಬಿಬಿಎಂಪಿ ಅಧಿಕಾರಿಗಳು ಕೇಬಲ್ ತೆರವುಗೊಳಿಸುತ್ತಿರುವುದನ್ನು ಖಂಡಿಸಿ ಭಾನುವಾರ 2 ಗಂಟೆಗಳ ಕಾಲ ಕೇಬಲ್ ಸಂಪರ್ಕ ಕಡಿತಗೊಳಿಸಲು ಆಪರೇಟರ್ ಗಳು ನಿರ್ಧರಿಸಿದ್ದಾರೆ. ಕೇಬಲ್ ತೆರವು ಕಾರ್ಯಾಚರಣೆ ಮುಂದುವರಿಸಿದರೆ ರಾಜ್ಯ ವ್ಯಾಪ್ತಿ ಕೇಬಲ್ ಸಂಪರ್ಕ ಕಡಿತಗೊಳಿಸುವುದಾಗಿ ಎಚ್ಚರಿಕೆಯನ್ನೂ ನೀಡಿದ್ದಾರೆ.

ಕೇಬಲ್ ಆಪರೇಟರ್ ಗಳಿಗೆ ಬಿಬಿಎಂಪಿ ಹಲವು ಬಾರಿ ಎಚ್ಚರಿಕೆ ನೀಡಿದರು. ಅಪ್ಟಿಕಲ್ ಫೈಬರ್ ಕೇಬಲ್ (ಒಎಫ್ ಸಿ)ಗಳ ಲೆಕ್ಕ ನೀಡದ ಹಿನ್ನೆಲೆಯಲ್ಲಿ ಬುಧವಾರದಿಂದ ಪಾಲಿಕೆ ಅಧಿಕಾರಿಗಳು ಅನಧಕೃತ ಕೇಬಲ್ ತೆರವು ಕಾರ್ಯಾಚರಣೆ ಆರಂಭಿಸಿದ್ದರು. ಇದನ್ನು ಖಂಡಿಸಿದ ಆಪರೇಟರ್ ಗಳು ಶುಕ್ರವಾರ ಸಭೆ ನಡೆಸಿ, ಭಾನುವಾರ ಎರಡು ಗಂಟೆಗಳ ಕಾಲ ಕೇಬಲ್ ಸ್ಥಗಿತಗೊಳಿಸುವ ಬಗ್ಗೆ ತೀರ್ಮಾನ ಕೈಗೊಂಡರು.

ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಒಎಫ್ ಸಿ ಬಗ್ಗೆ ಲೆಕ್ಕ ನೀಡಿವಂತೆ ಆಪರೇಟರ್ ಗಳಿಗೆ ಸೂಚಿಸಲಾಗಿತ್ತು. ಜೊತೆಗೆ, ಬೆಂಗಳೂರು ಉಸ್ತುವಾರಿ ಸಚಿವರು ಹಾಗೂ ಬಿಬಿಎಂಪಿ ಆಯುಕ್ತರು ಮೂರು ಬಾರಿ ಗಡುವು ನೀಡಿದ್ದರು. ಕೆಲ ದಿನಗಳ ಹಿಂದೆ ಮೇಯರ್ ಬಿ.ಎಸ್.ಮಂಜುನಾಥರೆಡ್ಡಿ ಅವರು ಆಪರೇಟರ್ ಗಳಿಗೆ ಕೇಬಲ್ ಲೆಕ್ಕ ನೀಡುವಂತೆ ಡಿ.16ಕ್ಕೆ ಅಂತಿಮ ಗಡುವು ನೀಡಿದ್ದರು. ಆದರೂ, ಆಪರೇಟರ್ ಗಳು ಮೇಯರ್ ಆದೇಶ ನಿರ್ಲಕ್ಷಿಸಿದ್ದರಿಂದ ಪೂರ್ವ, ಮಹದೇವಪುರ ವಲಯದಲ್ಲಿ ಅನಧಿಕೃತ ಒಎಫ್  ಸಿ ತೆರವು ಕಾರ್ಯಾಚರಣೆ ಆರಂಭಿಸಿದ್ದರು.

ಎಂಜಿ ರಸ್ತೆ, ಹಳೇ ವಿಮಾನ ನಿಲ್ದಾಣ ರಸ್ತೆ, ಕಬ್ಬನ್ ರಸ್ತೆ, ಇನ್ ಫೆಂಟ್ರಿ ರಸ್ತೆಗಳಲ್ಲಿ ಕೇಬಲ್ ಗಳನ್ನು ಅಳವಡಿಸಲಾಗಿತ್ತು. ಈ ಕೇಬಲ್ ಗಳ ಮಾಹಿತಿಯನ್ನು ಬಿಬಿಎಂಪಿಗೆ ನೀಡಿರಲಿಲ್ಲ. ಅಲ್ಲದೆ, ಕೇಬಲ್ ಅಳವಡಿಕೆ ಶುಲ್ಕವನ್ನೂ ಪಾವತಿಸಿರಲಿಲ್ಲ. ಹೀಗಾಗಿ ತೆರವು ಕಾರ್ಯಾಚರಣೆ ನಡೆಸಲಾಗಿದೆ ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT