ಅರುಣ್ ಜೇಟ್ಲಿ 
ಪ್ರಧಾನ ಸುದ್ದಿ

ಕೇಜ್ರಿ ವಿರುದ್ಧ ಜೇಟ್ಲಿ ಮಾನಹಾನಿ ಕೇಸ್

ಡಿಡಿಸಿಎ ಅವ್ಯವಹಾರ ಆರೋಪಕ್ಕೆ ಸಂಬಂಧಿಸಿ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ವಿರುದ್ಧ ಸಿವಿಲ್ ಹಾಗೂ ಕ್ರಿಮಿನಲ್...

ನವದೆಹಲಿ: ಡಿಡಿಸಿಎ ಅವ್ಯವಹಾರ ಆರೋಪಕ್ಕೆ ಸಂಬಂಧಿಸಿ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ವಿರುದ್ಧ ಸಿವಿಲ್ ಹಾಗೂ ಕ್ರಿಮಿನಲ್ ಮಾನಹಾನಿ ಮೊಕದ್ದಮೆ ಹೂಡಲು ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ನಿರ್ಧರಿಸಿದ್ದಾರೆ. 
ಕೇಜ್ರಿವಾಲ್ ಅವರಿಗೆ ಯಾವುದೇ ಕಾನೂನು ನೋಟಿಸ್ ಕಳುಹಿಸದೇ, ನೇರವಾಗಿ ಮಾನಹಾನಿ ಮೊಕದ್ದಮೆ ಹೂಡುವುದಾಗಿ ವಿತ್ತ ಸಚಿವಾಲಯದ ಮೂಲಗಳು ತಿಳಿಸಿವೆ. ದೆಹಲಿ ಹೈಕೋಟ್ರ್ ನಲ್ಲಿ ಸಿವಿಲ್ ಕೇಸ್, ಪಟಿಯಾಲಾ ಹೌಸ್ ಕೋರ್ಟ್‍ನಲ್ಲಿ ಕ್ರಿಮಿನಲ್ ಕೇಸು ದಾಖಲಿಸಲು ನಿರ್ಧರಿಸಿರುವುದಾಗಿ ಮೂಲಗಳು ಹೇಳಿವೆ. 
ಆರೋಪದಲ್ಲಿ ಹೊಸದೇನೂ ಇಲ್ಲ ಎಂದ ಡಿಡಿಸಿಎ: ಕೀರ್ತಿ ಆಜಾದ್ ಅವರ ಆರೋಪದಲ್ಲಿ ಹೊಸದೇನೂ ಇಲ್ಲ ಎಂದು ಡಿಡಿಸಿಎ ಹೇಳಿದೆ. ಆಜಾದ್ ಸುದ್ದಿಗೋಷ್ಠಿ ಬಗ್ಗೆ ಪ್ರತಿಕ್ರಿಯಿಸಿದ ಡಿಡಿಸಿಎ ಉಪಾಧ್ಯಕ್ಷ ಚೇತನ್ ಚೌಹಾಣ್, ಈ ಹಿಂದಿನ ತನಿಖೆಯಿಂದ ಗೊತ್ತಾದ ಅಂಶಗಳನ್ನೇ ಆಜಾದ್ ಮತ್ತೆ ಎತ್ತಿದ್ದಾರೆ. 
ಆದರೆ, ಇವೇ ಆರೋಪಗಳ ಆಧಾರದಲ್ಲಿ ಎಸ್ ಪಿ ಬನ್ಸಲ್ ಅವರನ್ನು ಡಿಡಿಸಿಎ ಅಧ್ಯಕ್ಷ ಸ್ಥಾನದಿಂದ ತೆಗೆದುಹಾಕಲಾಗಿತ್ತು ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

SCROLL FOR NEXT