ನಿರ್ಭಯಾ ಪ್ರಕರಣದ ಸಂತ್ರಸ್ತೆ ಜ್ಯೋತಿ ಸಿಂಗ್ ಪೋಷಕರಿಂದ ಪ್ರತಿಭಟನೆ 
ಪ್ರಧಾನ ಸುದ್ದಿ

ಹುಸಿಯಾಯ್ತು ನಿರೀಕ್ಷೆ: ಅಜ್ಞಾತ ಸ್ಥಳಕ್ಕೆ ಬಾಲಾಪರಾಧಿ

ಬಾಲಾಪರಾಧಿಯ ಬಿಡುಗಡೆ ಮಾಡಕೂಡದು ಎಂದು ದೆಹಲಿಯ ಮಹಿಳಾ ಆಯೋಗ ಸಲ್ಲಿಸಿದ್ದ ತುರ್ತು ಅರ್ಜಿಯ ಕುರಿತಂತೆ ಶನಿವಾರ ಮಧ್ಯರಾತ್ರಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ರಜಾ ಅವಧಿಯ ಪೀಠ...

ನವದೆಹಲಿ: ಬಾಲಾಪರಾಧಿಯ ಬಿಡುಗಡೆ ಮಾಡಕೂಡದು ಎಂದು ದೆಹಲಿಯ ಮಹಿಳಾ ಆಯೋಗ ಸಲ್ಲಿಸಿದ್ದ ತುರ್ತು ಅರ್ಜಿಯ ಕುರಿತಂತೆ ಶನಿವಾರ ಮಧ್ಯರಾತ್ರಿ ವಿಚಾರಣೆ ನಡೆಸಿದ ಸುಪ್ರೀಂ  ಕೋರ್ಟ್ ರಜಾ ಅವಧಿಯ ಪೀಠ ಬಿಡುಗಡೆಗೆ ತಡೆ ನೀಡಲು ನಿರಾಕರಿಸಿದ ಹಿನ್ನೆಲೆಯಲ್ಲಿ ಆತ ಬಿಡುಗಡೆ ಹೊಂದಿದ್ದಾನೆ.

ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿದ್ದರಿಂದ ದೆಹಲಿ ಪೊಲೀಸರು ಆತನನ್ನು ಬಿಡುಗಡೆ ಮಾಡಲಾರರು ಎಂದು ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಲಿವಾಳ್ ಹಾಗೂ ಜ್ಯೋತಿ  ಸಿಂಗ್ ಪೊಷಕರು ನಿರೀಕ್ಷಿಸಿದ್ದರು. ಪೊಷಕರು, ಮಹಿಳಾ ಸಂಘಟನೆಗಳಿಂದ ಭಾರಿ ಪ್ರತಿಭಟನೆ ನಿರ್ಭಯಾ ಪೊಷಕರೊಂದಿಗೆ ಹಲವರು ಶನಿವಾರ ಸಂಜೆಯೇಧರಣಿ ಆರಂಭಿಸಿದ್ದರು. ಧರಣಿ  ನಿರತರನ್ನು ಕೆಲ ಕಾಲ ವಶಕ್ಕೆ ಪಡೆದಿದ್ದ ಪೊಲೀಸರು ಆ ಬಳಿಕ ಬಿಡುಗಡೆ ಮಾಡಿದ್ದರು.

ಭಾನುವಾರ ಬೆಳಗ್ಗೆಯಿಂದಲೇ ಇಂಡಿಯಾ ಗೇಟ್ ಬಳಿ ಮತ್ತೆ ನಿರ್ಭಯಾ ಪೊಷಕರು ಸಾವಿರಾರು ಮಂದಿಯ ಬೆಂಬಲದೊಂದಿಗೆ ಭಾರಿ ಪ್ರತಿಭಟನೆ ಆರಂಭಿಸಿದರು. ಸಂಜೆ 5 ಗಂಟೆಗೆ ಅತ್ತ  ಬಾಲಾಪರಾಧಿ ಬಿಡುಗಡೆಯಾಗುತ್ತಲೇ ಇತ್ತ ಪ್ರತಿಭಟನಾನಿರತರನ್ನು ಪೊಲೀಸರು ವಶಕ್ಕೆ ಪಡೆದರು. ಈ ವೇಳೆ ನಿರ್ಭಯಾ ತಾಯಿಗೆ ಗಾಯಗಳಾದವು.

ಆತ ಬಿಡುಗಡೆಯಾಗುತ್ತಾನೆಂಬುದು ಎಲ್ಲರಿಗೂ ಗೊತ್ತಿತ್ತು. ಅದು ಗೊತ್ತಿದ್ದರೂ ಅದನ್ನು ತಡೆಯಲು ಯಾವುದೇ ಮುಂಜಾಗ್ರತೆ ತೆಗೆದುಕೊಳ್ಳಲಿಲ್ಲ. ನಮ್ಮ ಸರ್ಕಾರಗಳು ನಿರ್ಲಕ್ಷ್ಯ ವಹಿಸಿದವು.
-ಆಶಾ ದೇವಿ
ನಿರ್ಭಯಾ ತಾಯಿ


ನೀವು ಪ್ರತಿಭಟನೆ ಮಾಡಿ, ಲಾಠಿ ಏಟು ತಿಂದಾಗಲೇ ನಮ್ಮ ಸರ್ಕಾರಗಳು ನಿಮ್ಮ ದನಿಗೆ ಕಿವಿಗೊಡುವುದು. ಇಲ್ಲವಾದರೆ ನಿಮ್ಮ ನೋವನ್ನು ಕೇಳಲಾರರು. ಹಾಗಾಗಿ ನಾವು ಈಗ  ಅಸಹಾಯಕರು.
-ಬದ್ರಿ ಸಿಂಗ್ ನಿರ್ಭಯಾ ತಂದೆ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

No friendship only business: ತೈಲ ಬೇಕಾದರೆ..; ಸಂಕಷ್ಟದ ಸಮಯದಲ್ಲಿ ಕೈಹಿಡಿದಿದ್ದ ಭಾರತಕ್ಕೆ ಕೈ ಕೊಟ್ಟ ರಷ್ಯಾ!

ಆತ ಅಪ್ಪಿಕೊಳ್ಳುತ್ತಾರೆ, ಕಣ್ಣು ಹೊಡೆಯುತ್ತಾರೆ; ಪ್ರಿಯಾಂಕಾ ಉತ್ತಮ ವಿಪಕ್ಷ ನಾಯಕಿಯಾಗಬಹುದು: ರಾಹುಲ್ ವಿರುದ್ಧ ಕಿರಣ್ ರಿಜಿಜು ಟೀಕಾ ಪ್ರಹಾರ

ಮಧ್ಯಪ್ರಾಚ್ಯ ಯುದ್ಧ: ಅಡುಗೆ ಅನಿಲ ಕೊರತೆ ಬೆನ್ನಲ್ಲೆ ಏರ್ ಇಂಡಿಯಾ ಸಮೂಹದಿಂದ ಬೆಲೆ ಏರಿಕೆ ಶಾಕ್! Fuel surcharge ಏರಿಕೆ ಘೋಷಣೆ

ಬೇಡಿಕೆ ಈಡೇರಿಕೆಗೆ ರಾಜ್ಯ ಸರ್ಕಾರದ ಭರವಸೆ: ಅನಿರ್ದಿಷ್ಟಾವಧಿ ಮುಷ್ಕರ ಹಿಂಪಡೆದ ಸರ್ಕಾರಿ ವೈದ್ಯರು!

ಕಲ್ಯಾಣ ಕರ್ನಾಟಕಕ್ಕೆ ಹೊಸ ವಿಮಾನ ನಿಲ್ದಾಣ: ರಾಜ್ಯ ಸರ್ಕಾರ ಪ್ರಸ್ತಾಪ

SCROLL FOR NEXT