ರಾಜ್ಯಸಭೆ 
ಪ್ರಧಾನ ಸುದ್ದಿ

ರಾಜ್ಯಸಭೆಯಲ್ಲಿ ಬಾಲ ನ್ಯಾಯ ತಿದ್ದುಪಡಿ ಕಾಯ್ದೆ ಅಂಗೀಕಾರ, ಚರ್ಚೆ ವೀಕ್ಷಿಸಿದ ನಿರ್ಭಯಾ ಪೋಷಕರು

ದೆಹಲಿ ಸಾಮೂಹಿಕ ಅತ್ಯಾಚಾರ ಪ್ರಕರಣದ ಬಾಲಪರಾಧಿ ಬಂಧಮುಕ್ತನಾದ ಬಳಿಕ ಎಚ್ಚೆತ್ತುಕೊಂಡ ನಮ್ಮ ಜನಪ್ರತಿನಿಧಿಗಳು...

ಬೆಂಗಳೂರು: ದೆಹಲಿ ಸಾಮೂಹಿಕ ಅತ್ಯಾಚಾರ ಪ್ರಕರಣದ ಬಾಲಪರಾಧಿ ಬಂಧಮುಕ್ತನಾದ ಬಳಿಕ ಎಚ್ಚೆತ್ತುಕೊಂಡ ನಮ್ಮ ಜನಪ್ರತಿನಿಧಿಗಳು ಕಡೆಗೂ ಬಾಲಪರಾಧ ನ್ಯಾಯ ತಿದ್ದುಪಡಿ ಕಾಯ್ದೆಯನ್ನು ಮಂಗಳವಾರ ರಾಜ್ಯಸಭೆಯಲ್ಲಿ ಅಂಗೀಕರಿಸಲಾಗಿದೆ. ಇದರೊಂದಿಗೆ ಬಾಲಪರಾಧಿಗಳ ವಯೋಮಿತಿಯನ್ನು 18ರಿಂದ 16ಕ್ಕೆ ಇಳಿಸಲಾಗಿದೆ.
ಇಂದು ರಾಜ್ಯಸಭೆಯಲ್ಲಿ ಸುದೀರ್ಘ ಚರ್ಚೆ ಬಳಿಕ ತಿದ್ದುಪಡಿ ವಿಧೇಯಕವನ್ನು ಮತಕ್ಕೆ ಹಾಕಲಾಯಿತು. ಬಳಿಕ ಧ್ವನಿಮತದ ಮೂಲಕ ವಿಧೇಯಕವನ್ನು ಅಂಗೀಕರಿಸಲಾತು. ಈ ವೇಳೆ ಸಿಪಿಐಎಂ, ಜೆಡಿಯು ಹಾಗೂ ಎಐಎಡಿಎಂಕೆ ಸದಸ್ಯರು ತಿದ್ದುಪಡಿ ವಿಧೇಯಕಕ್ಕೆ ವಿರೋಧ ವ್ಯಕ್ತಪಡಿಸಿ ಸಭಾತ್ಯಾಗ ಮಾಡಿದರು. ಕಲಾಪದಲ್ಲಿ ನಿರ್ಭಯಾ ಪೋಷಕರು ಸಹ ಉಪಸ್ಥಿತರಿದ್ದರು.
ತಿದ್ದುಡಿ ವಿಧೇಯಕದಂತೆ 16 ವರ್ಷ ದಾಟಿದ ಅಪರಾಧಿಗಳನ್ನು ವಸ್ಕರಂತೆ ಪರಿಗಣಿಸಲಾಗುವುದು ಮತ್ತು 16 ವರ್ಷದೊಳಗಿನ ಬಾಲಪರಾಧಿಗಳು ಅತ್ಯಂತ ಘೋರ ಅಪರಾಧ ಮಾಡಿದರೆ ಗರಿಷ್ಠ 7 ವರ್ಷ, ಗಂಭೀರ ಅಪರಾಧಗಳಲ್ಲಿ 3ರಿಂದ 7 ವರ್ಷ ಹಾಗೂ ಸಾಮಾನ್ಯ ಅಪರಾಧಗಳಲ್ಲಿ ಗರಿಷ್ಠ ಮೂರು ವರ್ಷ ಜೈಲು ಶಿಕ್ಷೆ ವಿಧಿಸಬಹುದಾಗಿದೆ. ಆದರೆ ಬಾಲಪರಾಧಿಗಳಿಗೆ ಗಲ್ಲು ಶಿಕ್ಷೆ ಮತ್ತು ಜೀವಾವಧಿ ಶಿಕ್ಷೆ ನೀಡುವಂತಿಲ್ಲ.
ಬಾಲಾಪರಾಧಿಯ ವಯಸ್ಸನ್ನು 16 ವರ್ಷಕ್ಕೆ ಇಳಿಸುವ ಬಗ್ಗೆ ಜೆಡಿಯು, ಎಐಎಡಿಎಂಕೆ ಸದಸ್ಯರು ವಿರೋಧ ವ್ಯಕ್ತಪಡಿಸಿದ್ದರೆ, ಬಾಲನ್ಯಾಯ ಕಾಯ್ದೆ ತಿದ್ದುಪಡಿ ಮಸೂದೆಗೆ ಕಾಂಗ್ರೆಸ್, ಟಿಎಂಸಿ ಸದಸ್ಯರು ಬೆಂಬಲ ವ್ಯಕ್ತಪಡಿಸಿದವು. ಆದರೆ ಮಸೂದೆಯನ್ನು ಸೆಲೆಕ್ಟ್ ಕಮಿಟಿಗೆ ಕಳುಹಿಸುವಂತೆ ಸಿಪಿಐಎಂ ಒತ್ತಾಯಿಸಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕುರ್ಚಿ ಕಾಳಗ: ಸಿದ್ದರಾಮಯ್ಯ, ಡಿಕೆಸಿ ಜತೆ ರಾಹಲ್ ಗಾಂಧಿ ಪ್ರತ್ಯೇಕ ಚರ್ಚೆ; ಕುತೂಹಲ ಮೂಡಿಸಿದೆ ಚುಟುಕು ಮಾತುಕತೆ! Video

ಇರಾನ್ ಪ್ರತಿಭಟನೆಯಲ್ಲಿ 2000 ಜನ ಸಾವು; ಇದಕ್ಕೆ ಉಗ್ರರು ಕಾರಣ ಎಂದ ಅಧಿಕಾರಿಗಳು

Toxic Teaserನಲ್ಲಿ 'ಟೂ ಮಚ್ ಸೆಕ್ಸ್' ಇದೆಯೇ? CBFCಗೆ ಮತ್ತೊಂದು ದೂರು!

ಮೈಸೂರಿನಲ್ಲಿ ರಾಹುಲ್ ಗಾಂಧಿ ಜತೆ ಸಿದ್ದರಾಮಯ್ಯ, ಡಿಕೆಸಿ ಮಹತ್ವದ ಚರ್ಚೆ; ಬಳಿಕ ಸಿಎಂ ಹೇಳಿದ್ದೇನು? Video

IPL 2026: RCB ತವರು ಮೈದಾನ ಕೊನೆಗೂ ಬಹುತೇಕ ಫಿಕ್ಸ್, ಈ ಎರಡು ಮೈದಾನಗಳಲ್ಲೇ ಪಂದ್ಯ!

SCROLL FOR NEXT