ಪಕ್ಷದಿಂದ ಉಚ್ಛಾಟನೆಗೊಂಡ ಬಿಜೆಪಿ ಸಂಸದ ಕೀರ್ತಿ ಅಜಾದ್ 
ಪ್ರಧಾನ ಸುದ್ದಿ

ಸತ್ಯ ನುಡಿದಿದ್ದಕ್ಕೆ ನನ್ನನು ಬಿಜೆಪಿಯಿಂದ ಹೊರಗೆಸಯಲಾಗಿದೆ: ಅಜಾದ್

ದೆಹಲಿ ಕ್ರಿಕೆಟ್ ಮಂಡಲಿಯಲ್ಲಿ ನಡೆದ ಅವ್ಯವಹಾರದ ಬಗ್ಗೆ "ಸತ್ಯ ನುಡಿದಿದ್ದಕ್ಕೆ" ಪಕ್ಷದಿಂದ ನನ್ನನ್ನು ಉಚ್ಛಾಟಿಸಿರುವುದು ದುರದೃಷ್ಟಕರ ಎಂದು ಬಿಜೆಪಿ ಸಂಸದ ಕೀರ್ತಿ ಅಜಾದ್

ಅಹಮದಾಬಾದ್: ದೆಹಲಿ ಕ್ರಿಕೆಟ್ ಮಂಡಲಿಯಲ್ಲಿ ನಡೆದ ಅವ್ಯವಹಾರದ ಬಗ್ಗೆ "ಸತ್ಯ ನುಡಿದಿದ್ದಕ್ಕೆ" ಪಕ್ಷದಿಂದ ನನ್ನನ್ನು ಉಚ್ಛಾಟಿಸಿರುವುದು ದುರದೃಷ್ಟಕರ ಎಂದು ಬಿಜೆಪಿ ಸಂಸದ ಕೀರ್ತಿ ಅಜಾದ್ ಬುಧವಾರ ಹೇಳಿದ್ದಾರೆ.

"ಪಕ್ಷ ವಿರೋಧಿ ಚಟುವಟಿಕೆ ನಾನೇನು ಮಾಡಿದ್ದೇನೆ?" ಎಂದು ಬಿಹಾರದ ದರ್ಭಂಗಾ ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾಗಿರುವ ಮೂರನೇ ಬಾರಿಯ ಸಂಸದ ಪತ್ರಕರ್ತರೊಂದಿಗೆ ಮಾತನಾಡುವಾಗ ಕೇಳಿದ್ದಾರೆ.

ಅರುಣ್ ಜೇಟ್ಲಿ ದೆಹಲಿ ಮತ್ತು ಜಿಲ್ಲಾ ಕ್ರಿಕೆಟ್ ಮಂಡಲಿ (ಡಿಡಿಸಿಎ) ಅಧ್ಯಕ್ಷರಗಿದ್ದಾಗಲೇ ಹೆಚ್ಚಿನ ಹಗರಣ ನಡೆದಿದ್ದರೂ ನಾನು ಅವರ ವಿರುದ್ಧ ಮಾತನಾಡಿಲ್ಲ ಎಂದು ಕೂಡ ಕೀರ್ತಿ ಹೇಳಿದ್ದಾರೆ.

೨೦೧೩ ರವರೆಗೆ ಡಿಡಿಸಿಎ ಅಧ್ಯಕ್ಷರಾಗಿ ೧೩ ವರ್ಷಗಳ ಕಾಲ ಜೇಟ್ಲಿ ಆಡಳಿತ ನಡೆಸಿದ್ದರು.

ಈ ಪ್ರಕರಣ ಬೆಳಗಿಗೆ ತರಲು ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷದ ಜೊತೆಗೆ ಸೇರಿದ್ದೀರ ಎಂಬ ಪ್ರಶ್ನೆಗೆ ಈ ಊಹಾಪೋಹವನ್ನು ಅಲ್ಲಗೆಳೆದಿರುವ ಕೀರ್ತಿ "ನಾನು ಎತ್ತಿದ ಪ್ರಕರಣವನ್ನು ಅವರು ಮಾತನಾಡುತ್ತಿದ್ದಾರೆ" ಎಂದು ಹೇಳಿದ್ದಾರೆ.

ಮುಂದಿನ ಕಾರ್ಯಕ್ರಮವೇನು ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಕೀರ್ತಿ "ಈಗಷ್ಟೇ ಮನರಂಜನೆ ಪ್ರಾರಂಭವಾಗಿದೆ. ಏನಾಗುತ್ತೋ ನೋಡೋಣ" ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT