ಮುರಳಿ ಮನೋಹರ್ ಜೋಶಿ - ಎಲ್.ಕೆ.ಆಡ್ವಾಣಿ 
ಪ್ರಧಾನ ಸುದ್ದಿ

ಡಿಡಿಸಿಎ ಹಗರಣ: ಜೇಟ್ಲಿ ವಿರುದ್ಧ ಆಂತರಿಕ ತನಿಖೆಗೆ ಬಿಜೆಪಿ ಹಿರಿಯ ನಾಯಕರ ಒತ್ತಾಯ ಸಾಧ್ಯತೆ

ಬಿಹಾರ ವಿಧಾನಸಭೆ ಚುನಾವಣೆ ಸೋಲಿನ ಬಗ್ಗೆ ಪಕ್ಷದ ನಾಯಕತ್ವದ ವಿರುದ್ಧ ಧ್ವನಿ ಎತ್ತಿದ್ದ ಬಿಜೆಪಿಯ ಹಿರಿಯ ನಾಯಕರು ಇದೀಗ ಕೇಂದ್ರ ವಿತ್ತ ಸಚಿವ...

ನವದೆಹಲಿ: ಬಿಹಾರ ವಿಧಾನಸಭೆ ಚುನಾವಣೆ ಸೋಲಿನ ಬಗ್ಗೆ ಪಕ್ಷದ ನಾಯಕತ್ವದ ವಿರುದ್ಧ ಧ್ವನಿ ಎತ್ತಿದ್ದ ಬಿಜೆಪಿಯ ಹಿರಿಯ ನಾಯಕರು ಇದೀಗ ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ವಿರುದ್ಧ ಕೇಳಿಬಂದಿರುವ ಭ್ರಷ್ಟಾಚಾರ ಆರೋಪದ ಬಗ್ಗೆ ಆಂತರಿಕ ತನಿಖೆ ನಡೆಸುವಂತೆ ಒತ್ತಾಯಿಸುವ ಸಾಧ್ಯತೆ ಇದೆ.
ಈ ಸಂಬಂಧ ಇಂದು ಬಿಜೆಪಿ ಹಿರಿಯ ನಾಯಕರಾದ ಎಲ್.ಕೆ.ಆಡ್ವಾಣಿ, ಮುರಳಿ ಮನೋಹರ್ ಜೋಶಿ, ಶಾಂತ ಕುಮಾರ್ ಹಾಗೂ ಯಶವಂತ್ ಸಿನ್ಹಾ ಅವರು ಸಭೆ ಸೇರಿ, ಜೇಟ್ಲಿ ವಿರುದ್ಧ ಆರೋಪ ಹಾಗೂ ಬಿಜೆಪಿ ಸಂಸದ ಕೀರ್ತಿ ಆಜಾದ್ ಅಮಾನತು ಕುರಿತು ಚರ್ಚಿಸಿದ್ದಾರೆ. ಅಲ್ಲದೆ ಈ ಎರಡೂ ವಿಷಯಗಳನ್ನು ಪಕ್ಷದ ವೇದಿಕೆಯಲ್ಲಿ ಪ್ರಸ್ತಾಪಿಸಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.
ಇನ್ನು ಬಿಜೆಪಿ ಹಿರಿಯ ನಾಯಕರ ಸಭೆ ನಂತರ ಬಿಜೆಪಿ ಹಿರಿಯ ನಾಯಕ ಹಾಗೂ 'ಮಾರ್ಗದರ್ಶಕ ಮಂಡಳಿ' ಸದಸ್ಯ ಮುರಳಿ ಮನೋಹರ್ ಜೋಶಿ ಅವರನ್ನು ಭೇಟಿ ಮಾಡಿದ ಕೀರ್ತಿ ಆಜಾದ್ ಅವರು, ತಮ್ಮ ಅಮಾನತು ವಿಚಾರ ಹಾಗೂ ಜೇಟ್ಲಿ ಡಿಡಿಸಿಎ ಹಗರಣದಲ್ಲಿ ಮಧ್ಯಪ್ರವೇಶಿಸುವಂತೆ ಮನವಿ ಮಾಡಿದರು.
ಆಡ್ವಾಣಿ, ಜೋಶಿ, ಅಟಲ್ ಬಿಹಾರಿ ವಾಜಪೇಯಿ, ಪ್ರಧಾನಿ ನರೇಂದ್ರ ಮೋದಿ, ಹಾಗೂ ಗೃಹ ಸಚಿವ ರಾಜನಾಥ್ ಸಿಂಗ್ ಅವರು 'ಮಾರ್ಗದರ್ಶಕ ಮಂಡಳಿ'ಯ ಸದಸ್ಯರಾಗಿದ್ದಾರೆ.
ಜೋಶಿ ಅವರ ನಿವಾಸದಲ್ಲಿ ಆಡ್ವಾಣಿ ಸೇರಿದಂತೆ ಬಿಜೆಪಿ ಹಿರಿಯ ನಾಯಕರು ಸುಮಾರು ಒಂದು ಗಂಟೆಗಳ ಕಾಲ ಸಭೆ ನಡೆಸಿದರು. ಈ ವೇಳೆ, ಬಿಹಾರ ಚುನಾವಣೆ ಸೋಲಿನ ನಂತರವೂ ಮೋದಿ ಹಾಗೂ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಪಾಠ ಕಲಿತಿಲ್ಲ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು ಎನ್ನಲಾಗಿದೆ. ಅಲ್ಲದೆ ಆಜಾದ್ ಅಮಾನತು ಬಗ್ಗೆಯೂ ಬಿಜೆಪಿ ಹಿರಿಯ ನಾಯಕರು ಚರ್ಚಿಸಿದರು ಎಂದು ಮೂಲಗಳು ತಿಳಿಸಿವೆ.
ಡಿಡಿಸಿಎ ಹಗರಣ ಸಂಬಂಧ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರ ವಿರುದ್ಧ ಬಹಿರಂಗ ಆರೋಪ ಮಾಡಿದ್ದ ಕೀರ್ತಿ ಆಜಾದ್ ಅವರನ್ನು ಪಕ್ಷ ವಿರೋಧಿ ಚಟುವಟಿಕೆ ಆರೋಪದ ಮೇಲೆ ಅವರನ್ನು ನಿನ್ನೆ ಪಕ್ಷದಿಂದ ಅಮಾನತುಗೊಳಿಸಲಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

AI- ಚಾಲಿತ ಡಿಜಿಟಲೀಕರಣ, SIR ಕುರಿತು CECಗೆ ಐದನೇ ಪತ್ರ ಬರೆದ ಮಮತಾ ಬ್ಯಾನರ್ಜಿ

Vijay Hazare Trophy: ಸೆಮಿಫೈನಲ್‌ಗೆ ಲಗ್ಗೆ ಇಟ್ಟ ಕರ್ನಾಟಕ

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

UP ದಲಿತ ಮಹಿಳೆ ಕೊಲೆ: ಯೋಗಿ ಸರ್ಕಾರ ಜಾತಿ, ಧರ್ಮದ ಆಧಾರದಲ್ಲಿ ದ್ವೇಷಕ್ಕೆ ಪ್ರಚೋದನೆ- ಕಾಂಗ್ರೆಸ್ ಕಿಡಿ!

Indian Stock Market: 5 ದಿನಗಳ ಸತತ ಕುಸಿತಕ್ಕೆ ಕೊನೆಗೂ ಬ್ರೇಕ್, Sensex 301 ಅಂಕ ಏರಿಕೆ!

SCROLL FOR NEXT