ಸುಬ್ರಮಣ್ಯನ್ ಸ್ವಾಮಿ 
ಪ್ರಧಾನ ಸುದ್ದಿ

ಅಮಾನತುಗೊಂಡ ಕೀರ್ತಿ ಆಜಾದ್‌ಗೆ ಸುಬ್ರಮಣ್ಯಯನ್ ಸ್ವಾಮಿ ಬೆಂಬಲ

ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿ ಪಕ್ಷದಿಂದ ಅಮಾನತುಗೊಂಡಿರುವ ಮಾಜಿ ಕ್ರಿಕೆಟಿಗ...

ನವದೆಹಲಿ: ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿ ಪಕ್ಷದಿಂದ ಅಮಾನತುಗೊಂಡಿರುವ ಮಾಜಿ ಕ್ರಿಕೆಟಿಗ ಹಾಗೂ ಬಿಜೆಪಿ ಸಂಸದ ಕೀರ್ತಿ ಆಜಾದ್ ಅವರಿಗೆ ಬಿಜೆಪಿ ನಾಯಕ ಸುಬ್ರಮಣ್ಯಯನ್ ಸ್ವಾಮಿ ಬೆಂಬಲ ನೀಡಿದ್ದಾರೆ.
'ನನಗೆ ಅಮಾನತು ನೋಟಿಸ್ ಬಂದಿದ್ದು, ಅದಕ್ಕೆ ಪ್ರತಿಕ್ರಿಯಿಸುತ್ತೇನೆ. ಈ ಕುರಿತು ಯಾವ ರೀತಿ ಪ್ರತಿಕ್ರಿಯೆ ನೀಡಬೇಕು ಎಂಬುದರ ಬಗ್ಗೆ ಸುಬ್ರಮಣ್ಯಯನ್ ಸ್ವಾಮಿ ನನಗೆ ಸಹಾಯ ಮಾಡುವುದಾಗಿ ಭರವಸೆ ನೀಡಿದ್ದಾರೆ' ಎಂದು ಕೀರ್ತಿ ಆಜಾದ್ ಮಾಧ್ಯಮಕ್ಕೆ ತಿಳಿಸಿದ್ದಾರೆ.
ಸತ್ಯ ಹೇಳುವುದೇ ತಪ್ಪು ಎನ್ನುವಾದದರೆ ನಾನು ಪದೇಪದೆ ಅದೇ ತಪ್ಪನ್ನು ಮಾಡುತ್ತೇನೆ ಎಂದಿರುವ ಕೀರ್ತಿ ಆಜಾದ್, ಪ್ರಧಾನಿ ಮೋದಿ ಇದನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಮನವಿ ಮಾಡಿದ್ದಾರೆ.
ಡಿಡಿಸಿಎ ಹಗರಣ ಸಂಬಂಧ ಅರುಣ್ ಜೇಟ್ಲಿ ಅವರ ವಿರುದ್ಧ ಬಹಿರಂಗ ಆರೋಪ ಮಾಡಿದ್ದ ಕೀರ್ತಿ ಆಜಾದ್ ಅವರನ್ನು ಪಕ್ಷ ವಿರೋಧಿ ಚಟುವಟಿಕೆ ಆರೋಪದ ಮೇಲೆ ನಿನ್ನೆ ಅವರನ್ನು ಪಕ್ಷದಿಂದ ಅಮಾನತುಗೊಳಿಸಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT