ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲ 
ಪ್ರಧಾನ ಸುದ್ದಿ

ತತ್-ಕ್ಷಣದ ಪ್ರತಿಕ್ರಿಯೆಗಳು ಬೇಡ: ಮೋದಿ ಮತ್ತು ಶರೀಫ್ ಗೆ ಒಮರ್ ಕಿವಿಮಾತು

ಪ್ರಧಾನಿ ನರೇಂದ್ರ ಮೋದಿ ಪಾಕಿಸ್ತಾನಕ್ಕೆ ಭೇಟಿ ನೀಡುತ್ತಿರುವುದು 'ಒಳ್ಳೆಯ ನಡೆ' ಎಂದಿರುವ ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲ, ಭಾರತ ಮತ್ತು

ಶ್ರೀನಗರ: ಪ್ರಧಾನಿ ನರೇಂದ್ರ ಮೋದಿ ಪಾಕಿಸ್ತಾನಕ್ಕೆ ಭೇಟಿ ನೀಡುತ್ತಿರುವುದು 'ಒಳ್ಳೆಯ ನಡೆ' ಎಂದಿರುವ ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲ, ಭಾರತ ಮತ್ತು ಪಾಕಿಸ್ತಾನ ಸಂಬಂಧಗಳ ನಡುವೆ ಸ್ಥಿರತೆ ಮೂಡಬೇಕಿದೆ ಎಂದಿದ್ದಾರೆ.

"ಪಾಕಿಸ್ತಾನದ ಜೊತೆ ಮತ್ತೆ ಮಾತುಕತೆಗಿಳಿದಿರುವುದು ಒಳ್ಳೆಯ ನಡೆ ಮತ್ತು ಸ್ವಾಗಾತಾರ್ಹ ಬೆಳವಣಿಗೆ" ಎಂದು ಕಾಬೂಲ್ ನಿಂದ ಹೊರಟಿದ್ದ ಮೋದಿ ಪೂರ್ವನಿಯೋಜಿತ ಯೋಜನೆಯಿಲ್ಲದ ಪಾಕಿಸ್ತಾನದ ಪ್ರಧಾನಿಯವರನ್ನು ಭೇಟಿ ಮಾಡಲು ಕರಾಚಿ ವಿಮಾನ ನಿಲ್ದಾಣಕ್ಕೆ ತೆರಳಿರುವ ನಡೆಯ ಬಗ್ಗೆ ಟ್ವಿಟ್ಟರ್ ನಲ್ಲಿ ಒಮರ್ ಪ್ರತಿಕ್ರಿಯಿಸಿದ್ದಾರೆ.

"ಆದರೆ ಇಂತಹ ಬರೀ ಭಾವಾಭಿನಯಗಳಿಗಿಂತಲೂ ಸ್ಥಿರ ಬಾಂಧವ್ಯ ಮುಖ್ಯ" ಎಂದು ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಟ್ವೀಟ್ ಮಾಡಿದ್ದಾರೆ.

"ತೀಕ್ಷ್ಣ ತತ್-ಕ್ಷಣದ ಪ್ರತಿಕ್ರಿಯೆಗಳಿಂದ ಭಾರತ ಮತ್ತು ಪಾಕಿಸ್ತಾನದ ಬಾಂಧವ್ಯಕ್ಕೆ ಧಕ್ಕೆ ಆಗಿದೆ ಮತ್ತು ಸ್ಥಿರತೆಯ ಅಭಾವ ಒದಗಿದೆ. ಇದನ್ನು ಈ ಬಾರಿ ಇಬ್ಬರೂ ಪ್ರಧಾನಿಗಳು ಸರಿಪಡಿಸಿಕೊಳ್ಳಲು ಮುನ್ನೋಡುತ್ತಿದ್ದೇನೆ" ಎಂದು ಕೂಡ ಅವರು ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

SCROLL FOR NEXT