ಪ್ರಧಾನ ಸುದ್ದಿ

ವಾಜಪೇಯಿ ಜನ್ಮ ದಿನವನ್ನು 'ಉತ್ತಮ ಆಡಳಿತ ದಿನ'ವಾಗಿ ಆಚರಣೆ

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನವಾದ ಇಂದು ದೇಶದಲ್ಲಿ 'ಉತ್ತಮ ಆಡಳಿತ ದಿನ' ಎಂದು ಆಚರಿಸಲಾಗುತ್ತಿದೆ. ಇದು ಎರಡನೇ ವರ್ಷದ

ನವದೆಹಲಿ: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನವಾದ ಇಂದು ದೇಶದಲ್ಲಿ 'ಉತ್ತಮ ಆಡಳಿತ ದಿನ' ಎಂದು ಆಚರಿಸಲಾಗುತ್ತಿದೆ. ಇದು ಎರಡನೇ ವರ್ಷದ ಆಚರಣೆ.

ದೇಶದಾದ್ಯಂತ ಈ ದಿನದ ನೆನಪಿಗೆ ಬಿಜೆಪಿ ಪಕ್ಷದಿಂದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. 'ಉತ್ತಮ ಆಡಳಿತ ದಿನ'ದ ಸಂಭ್ರಮಾಚರಣೆಗಳಾಗಿ ಕರ್ನಾಟಕ ಬಿಜೆಪಿ ರಾಜ್ಯದಾದ್ಯಂತ ಸ್ವಚ್ಛ ಭಾರತ ಅಭಿಯಾನ ಮತ್ತು ಇತರ ಚಟುವಟಿಕೆಗಳನ್ನು ಹಮ್ಮಿಕೊಂಡಿದೆ.

ಈ ಸಂದರ್ಭದಲ್ಲಿ ಭಾರತೀಯ ಜನತಾ ಪಕ್ಷದ ಸಂಸದರು ಮತ್ತು ಇತರ ಪಕ್ಷದ ಅಧಿಕಾರಿಗಳು ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ದೇಶದ ಬಡ ಜನ ಮತ್ತು ಯುವಕರಿಗಾಗಿ ಎನ್ ಡಿ ಎ ಸರ್ಕಾರ ಮಾಡಿರುವ ಉತ್ತಮ ಕೆಲಸಗಳನ್ನು ಜನಕ್ಕೆ ವಿವರಿಸಲಿದ್ದಾರೆ.

ಏತನ್ಮಧ್ಯೆ ಬಿಜೆಪಿ ಪಕ್ಷದ ಮೇಲೆ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಮುಖಂಡ ಶಶಿ ತರೂರ್ "ಕಳೆದ ವರ್ಷದಂತೆ ಈ ವರ್ಷ 'ಉತ್ತಮ ಆಡಳಿತ ದಿನ'ಕ್ಕೆ ಹೆಚ್ಚು ಮಹತ್ವ ನೀಡಲಾಗಿಲ್ಲ. ಏಕೆಂದರೆ ಕ್ರಿಸ್ಮಸ್ ಎಲ್ಲ ಕಡೆ ಕಾಣಿಸುತ್ತಿದೆ ಆದರೆ ಉತ್ತಮ ಆಡಳಿತ ಎಲ್ಲೂ ಗೋಚರಿಸುತ್ತಿಲ್ಲ" ಎಂದು ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 56 ಸಾವಿರ ಹುದ್ದೆ ನೇಮಕಕ್ಕೆ ಸಚಿವ ಸಂಪುಟ ಅಸ್ತು

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

T20 World Cup 2026: ಅಭಿಷೇಕ್, ಹಾರ್ದಿಕ್ ಅಬ್ಬರ; ಜಿಂಬಾಬ್ವೆ ವಿರುದ್ಧ ಟೀಂ ಇಂಡಿಯಾ ಭರ್ಜರಿ ಗೆಲುವು

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

SCROLL FOR NEXT