ಪ್ರಧಾನ ಸುದ್ದಿ

ವಾಜಪೇಯಿ ಜನ್ಮ ದಿನವನ್ನು 'ಉತ್ತಮ ಆಡಳಿತ ದಿನ'ವಾಗಿ ಆಚರಣೆ

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನವಾದ ಇಂದು ದೇಶದಲ್ಲಿ 'ಉತ್ತಮ ಆಡಳಿತ ದಿನ' ಎಂದು ಆಚರಿಸಲಾಗುತ್ತಿದೆ. ಇದು ಎರಡನೇ ವರ್ಷದ

ನವದೆಹಲಿ: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನವಾದ ಇಂದು ದೇಶದಲ್ಲಿ 'ಉತ್ತಮ ಆಡಳಿತ ದಿನ' ಎಂದು ಆಚರಿಸಲಾಗುತ್ತಿದೆ. ಇದು ಎರಡನೇ ವರ್ಷದ ಆಚರಣೆ.

ದೇಶದಾದ್ಯಂತ ಈ ದಿನದ ನೆನಪಿಗೆ ಬಿಜೆಪಿ ಪಕ್ಷದಿಂದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. 'ಉತ್ತಮ ಆಡಳಿತ ದಿನ'ದ ಸಂಭ್ರಮಾಚರಣೆಗಳಾಗಿ ಕರ್ನಾಟಕ ಬಿಜೆಪಿ ರಾಜ್ಯದಾದ್ಯಂತ ಸ್ವಚ್ಛ ಭಾರತ ಅಭಿಯಾನ ಮತ್ತು ಇತರ ಚಟುವಟಿಕೆಗಳನ್ನು ಹಮ್ಮಿಕೊಂಡಿದೆ.

ಈ ಸಂದರ್ಭದಲ್ಲಿ ಭಾರತೀಯ ಜನತಾ ಪಕ್ಷದ ಸಂಸದರು ಮತ್ತು ಇತರ ಪಕ್ಷದ ಅಧಿಕಾರಿಗಳು ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ದೇಶದ ಬಡ ಜನ ಮತ್ತು ಯುವಕರಿಗಾಗಿ ಎನ್ ಡಿ ಎ ಸರ್ಕಾರ ಮಾಡಿರುವ ಉತ್ತಮ ಕೆಲಸಗಳನ್ನು ಜನಕ್ಕೆ ವಿವರಿಸಲಿದ್ದಾರೆ.

ಏತನ್ಮಧ್ಯೆ ಬಿಜೆಪಿ ಪಕ್ಷದ ಮೇಲೆ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಮುಖಂಡ ಶಶಿ ತರೂರ್ "ಕಳೆದ ವರ್ಷದಂತೆ ಈ ವರ್ಷ 'ಉತ್ತಮ ಆಡಳಿತ ದಿನ'ಕ್ಕೆ ಹೆಚ್ಚು ಮಹತ್ವ ನೀಡಲಾಗಿಲ್ಲ. ಏಕೆಂದರೆ ಕ್ರಿಸ್ಮಸ್ ಎಲ್ಲ ಕಡೆ ಕಾಣಿಸುತ್ತಿದೆ ಆದರೆ ಉತ್ತಮ ಆಡಳಿತ ಎಲ್ಲೂ ಗೋಚರಿಸುತ್ತಿಲ್ಲ" ಎಂದು ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT