ಪ್ರಧಾನ ಸುದ್ದಿ

ವಾಜಪೇಯಿ ಜನ್ಮ ದಿನವನ್ನು 'ಉತ್ತಮ ಆಡಳಿತ ದಿನ'ವಾಗಿ ಆಚರಣೆ

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನವಾದ ಇಂದು ದೇಶದಲ್ಲಿ 'ಉತ್ತಮ ಆಡಳಿತ ದಿನ' ಎಂದು ಆಚರಿಸಲಾಗುತ್ತಿದೆ. ಇದು ಎರಡನೇ ವರ್ಷದ

ನವದೆಹಲಿ: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನವಾದ ಇಂದು ದೇಶದಲ್ಲಿ 'ಉತ್ತಮ ಆಡಳಿತ ದಿನ' ಎಂದು ಆಚರಿಸಲಾಗುತ್ತಿದೆ. ಇದು ಎರಡನೇ ವರ್ಷದ ಆಚರಣೆ.

ದೇಶದಾದ್ಯಂತ ಈ ದಿನದ ನೆನಪಿಗೆ ಬಿಜೆಪಿ ಪಕ್ಷದಿಂದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. 'ಉತ್ತಮ ಆಡಳಿತ ದಿನ'ದ ಸಂಭ್ರಮಾಚರಣೆಗಳಾಗಿ ಕರ್ನಾಟಕ ಬಿಜೆಪಿ ರಾಜ್ಯದಾದ್ಯಂತ ಸ್ವಚ್ಛ ಭಾರತ ಅಭಿಯಾನ ಮತ್ತು ಇತರ ಚಟುವಟಿಕೆಗಳನ್ನು ಹಮ್ಮಿಕೊಂಡಿದೆ.

ಈ ಸಂದರ್ಭದಲ್ಲಿ ಭಾರತೀಯ ಜನತಾ ಪಕ್ಷದ ಸಂಸದರು ಮತ್ತು ಇತರ ಪಕ್ಷದ ಅಧಿಕಾರಿಗಳು ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ದೇಶದ ಬಡ ಜನ ಮತ್ತು ಯುವಕರಿಗಾಗಿ ಎನ್ ಡಿ ಎ ಸರ್ಕಾರ ಮಾಡಿರುವ ಉತ್ತಮ ಕೆಲಸಗಳನ್ನು ಜನಕ್ಕೆ ವಿವರಿಸಲಿದ್ದಾರೆ.

ಏತನ್ಮಧ್ಯೆ ಬಿಜೆಪಿ ಪಕ್ಷದ ಮೇಲೆ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಮುಖಂಡ ಶಶಿ ತರೂರ್ "ಕಳೆದ ವರ್ಷದಂತೆ ಈ ವರ್ಷ 'ಉತ್ತಮ ಆಡಳಿತ ದಿನ'ಕ್ಕೆ ಹೆಚ್ಚು ಮಹತ್ವ ನೀಡಲಾಗಿಲ್ಲ. ಏಕೆಂದರೆ ಕ್ರಿಸ್ಮಸ್ ಎಲ್ಲ ಕಡೆ ಕಾಣಿಸುತ್ತಿದೆ ಆದರೆ ಉತ್ತಮ ಆಡಳಿತ ಎಲ್ಲೂ ಗೋಚರಿಸುತ್ತಿಲ್ಲ" ಎಂದು ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳದಲ್ಲಿ ದಿಢೀರ್ ಪ್ರವಾಹ: ಬಲಿಯಾದವರ ಸಂಖ್ಯೆ 538ಕ್ಕೆ ಏರಿಕೆ; 320 ಭಾರತೀಯ ಪ್ರವಾಸಿಗರು ನಾಪತ್ತೆ!

ನೇಪಾಳದಲ್ಲಿ ಪ್ರವಾಹದ ರೌದ್ರಾವತಾರ: ಮತ್ತೊಂದು ಜಲಪ್ರಳಯದ ಭೀತಿ; ರಕ್ಷಣಾ ಕಾರ್ಯಾಚರಣೆ ಸ್ಥಗಿತಕ್ಕೆ ಆದೇಶ, ಕೂಡಲೇ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೈನಿಕರಿಗೆ ಸೂಚನೆ..!

ಅಂಡರ್-19 ತಂಡದಲ್ಲಿ ದ್ರಾವಿಡ್, ಸೆಹ್ವಾಗ್ ಮಕ್ಕಳಿಗೆ ಚಾನ್ಸ್; ಸ್ಫೋಟಕ ಪ್ರದರ್ಶನ ನೀಡಿದ್ರೂ ವೈಭವ್ ಸೂರ್ಯವಂಶಿ ಕೈಬಿಟ್ಟ BCCI; ಇಲ್ಲಿದೆ ಕಾರಣ...

ಸಿನಿಮಾ ಇಷ್ಟವಾಗಲಿಲ್ಲ ಅಂದ್ರೆ ನಾನು ನಡು ರಸ್ತೆಯಲ್ಲೇ ತಲೆ ಬೋಳಿಸಿಕೊಳ್ಳುತ್ತೇನೆ: ಪ್ರೇಕ್ಷಕರಿಗೆ ನಟಿ ಶ್ವೇತಾ ಚಾಲೆಂಜ್; ವಿಡಿಯೋ ವೈರಲ್!

ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪಡೆದ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ; ಮೂರೂ ವಿಭಾಗಗಳಲ್ಲಿ ಆಯ್ಕೆಯಾದ ಏಕೈಕ ವ್ಯಕ್ತಿ!