ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಕಾರ್ಯಕರ್ತರ ಮಾರಾಮಾರಿ (ಸಂಗ್ರಹ ಚಿತ್ರ) 
ಪ್ರಧಾನ ಸುದ್ದಿ

ಜೆಡಿಎಸ್​ ಕಾರ್ಯಕರ್ತರ ಮಾರಾಮಾರಿ, ಶಾಸಕ ತಿಪ್ಪಾರೆಡ್ಡಿ ಮತ ಅಸಿಂಧು

ವಿಧಾನ ಪರಿಷತ್ ಚುನಾವಣೆಯಲ್ಲಿ ಅಹಿತಕ ಘಟನೆಯೊಂದು ನಡೆದಿದ್ದು, ತುಮಕೂರಿನಲ್ಲಿ ಬಿಜೆಪಿ - ಜೆಡಿಎಸ್​ ಕಾರ್ಯರ್ತರ ಮಧ್ಯೆ ಘರ್ಷಣೆ ಸಂಭವಿಸಿದೆ...

ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಅಹಿತಕ ಘಟನೆಯೊಂದು ನಡೆದಿದ್ದು, ತುಮಕೂರಿನಲ್ಲಿ ಬಿಜೆಪಿ - ಜೆಡಿಎಸ್​ ಕಾರ್ಯರ್ತರ ಮಧ್ಯೆ ಘರ್ಷಣೆ ಸಂಭವಿಸಿದೆ.

ಮತದಾನದ ವೇಳೆ ತುಮಕೂರು ತಾಲೂಕಿನ ಊರುಕೆರೆ ಗ್ರಾಮ ಪಂಚಾಯ್ತಿಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದ್ದು, ಘಟನೆಯಲ್ಲಿ ಜೆಡಿಎಸ್​  ಸದಸ್ಯ ರಾಜಕುಮಾರ್​ ಗೆ ದುಷ್ಕರ್ಮಿಗಳು ಚಾಕುವಿನಿಂದ ಇರಿದಿದ್ದಾರೆ. ಕ್ಷುಲ್ಲಕ ಕಾರಣಕ್ಕೆ ಜೆಡಿಎಸ್​ ಕಾರ್ಯಕರ್ತರೊಂದಿಗೆ ಬಿಜೆಪಿ ಪಕ್ಷದ ಉಮೇಶ್​ ಮತ್ತು ಬೆಂಬಲಿಗರು ಜಗಳ ಮಾಡಿದ್ದು, ಈ  ವೇಳೆ ಎರಡೂ ಗುಂಪಿನ ಕಾರ್ಯಕರ್ತರು ಪರಸ್ಪರ ಕೈಕೈ ಮಿಲಾಯಿಸಿದ್ದಾರೆ. ಇನ್ನು, ಘಟನೆಯಲ್ಲಿ ಗಾಯಗೊಂಡಿರುವ ರಾಜಕುಮಾರ್​ನನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಬಳಿಕ ತುಮಕೂರು  ಎಸ್​ಪಿ ಕಚೇರಿ ಮುಂದೆ ಜೆಡಿಎಸ್ ಕಾರ್ಯರ್ತರು ಧರಣಿ ನಡೆಸಿ, ಆರೋಪಿಗಳ ಬಂಧನಕ್ಕೆ ಆಗ್ರಹಿಸಿದ್ದಾರೆ.

ಬಹಿರಂಗ ಮತದಾನ ಮಾಡಿದ ಶಾಸಕ ತಿಪ್ಪಾರೆಡ್ಡಿ ಮತ ಅಸಿಂಧು
ಮತ್ತೊಂದೆಡೆ ಬಹಿರಂಗವಾಗಿ ಮತದಾನ ಮಾಡಿದ ಆರೋಪದ ಮೇಲೆ ಬಿಜೆಪಿ ಶಾಸಕ ಜಿ ಎಚ್ ತಿಪ್ಪಾರೆಡ್ಡಿ ಅವರ ಮತವನ್ನು ಅಸಿಂಧುಗೊಳಿಸಿ ಚಿತ್ರದುರ್ಗ ಜಿಲ್ಲಾಧಿಕಾರಿ ಹಾಗೂ  ಚುನಾವಣಾಧಿಕಾರಿ ಶ್ರೀರಂಗಯ್ಯ ಆದೇಶಿಸಿದ್ದಾರೆ. ಬೆಳಗ್ಗೆ ಚಿತ್ರದುರ್ಗದ ಜಿಲ್ಲಾ ಪಂಚಾಯಿತಿ ಮತಗಟ್ಡೆಯಲ್ಲಿ ಮತದಾನ ಮಾಡಲು ಬಂದಿದ್ದ ಶಾಸಕ ತಿಪ್ಪಾರೆಡ್ಡಿ, ಮತಪತ್ರವನ್ನ ಪಡೆದು  ಎಲ್ಲರೆದುರೇ ಬರೆಯುವ ಮೂಲಕ ಮತ ರಹಸ್ಯವನ್ನು ಉಲ್ಲಂಘನೆ ಮಾಡಿದರು. ಈ ಹಿನ್ನಲೆಯಲ್ಲಿ 1961ರ ಸೆಕ್ಷನ್ 132ಎ ಅಡಿಯಲ್ಲಿ ಅವರ ಮತವನ್ನು ಅಸಿಂಧು ಗೊಳಿಸಲಾಯಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT