ಡಾ.ಝಾಕೀರ್ ನಾಯಕ್ 
ಪ್ರಧಾನ ಸುದ್ದಿ

ಝಾಕೀರ್ ಮಂಗಳೂರು ಪ್ರವೇಶ ನಿರ್ಬಂಧ

ಸೌತ್ ಕರ್ನಾಟಕ ಸಲಾಫಿ ಮೂವ್‍ಮೆಂಟ್ ಸಂಘಟನೆ ಮಂಗಳೂರಿನಲ್ಲಿ ಜ.2ರಂದು ಹಮ್ಮಿಕೊಂಡಿದ್ದ ಡಾ.ಝಾಕೀರ್ ನಾಯಕ್...

ಮಂಗಳೂರು: ಸೌತ್ ಕರ್ನಾಟಕ ಸಲಾಫಿ ಮೂವ್‍ಮೆಂಟ್ ಸಂಘಟನೆ ಮಂಗಳೂರಿನಲ್ಲಿ ಜ.2ರಂದು ಹಮ್ಮಿಕೊಂಡಿದ್ದ ಡಾ.ಝಾಕೀರ್ ನಾಯಕ್  ಸಾರ್ವಜನಿಕ ಭಾಷಣ, ಅವರ ಮಂಗಳೂರು ಪ್ರವೇಶಕ್ಕೆ ನಗರ ಪೊಲೀಸ್ ಕಮಿಷನರ್ ಡಿ.31ರಿಂದ ಜ.6ರವರೆಗೆ ನಿರ್ಬಂಧ ವಿಧಿಸಿ ಭಾನುವಾರ ಆದೇಶ ಹೊರಡಿಸಿದ್ದಾರೆ. 
ಸಮಾಜದ ಶಾಂತಿ ಕಾಪಾಡುವ ಹಿನ್ನೆಲೆಯಲ್ಲಿ ಕೆಲವೊಂದು ಅಂಶಗಳನ್ನು ಪರಿಗಣಿಸಿ ದಂಡಪ್ರಕ್ರಿಯೆ ಸಂಹಿತೆ 144ರನ್ವಯ ಡಾ.ಝಾಕೀರ್ ನಾಯಕ್ ಅವರ ಮಂಗಳೂರು ಪ್ರವೇಶ ಹಾಗೂ ಕಮಿಷನರೇಟ್ ವ್ಯಾಪ್ತಿಯಲ್ಲಿ ಸಾರ್ವಜನಿಕ ಭಾಷಣಕ್ಕೆ ನಿಷೇಧ ಹೇರಲಾಗಿದೆ ಎಂದು ನಗರ ಪೊಲೀಸ್ ಕಮಿಷನರ್ ಪ್ರಕಟಣೆ ತಿಳಿಸಿದೆ. 
ಡಾ.ಝಾಕೀರ್ ಅವರು ಭಾಗವ ಹಿಸುವ ಕಾರ್ಯ ಕ್ರಮದಲ್ಲಿ ಅನ್ಯ ಧರ್ಮೀಯರ ಭಾವನೆಗಳನ್ನು ಕೆರಳಿಸುವ ದುರುದ್ದೇಶವಿದೆ ಎಂದು ಹಿಂದೂ ಜನಜಾಗೃತಿ ಸಮಿತಿ ಆರೋಪಿಸಿದ್ದು, ಮಂಗಳೂರಿನಲ್ಲಿ ಪ್ರತಿಭಟನೆ ನಡೆಸಿತ್ತು. 
ಈ ಕಾರ್ಯಕ್ರಮದ ಆಯೋಜಕರು ಪಾಲಿಕೆಯಿಂದ ಅನುಮತಿ ಪಡೆಯುವಾಗ, ಸಿಎಂ, ಗೃಹ ಸಚಿವರನ್ನು ಆಮಂತ್ರಿಸುತ್ತಿರುವುದಾಗಿ ಹೇಳಿಕೊಂಡಿದ್ದಾರೆ. ಆದರೆ ಬೆಂಗಳೂರಿನಲ್ಲಿ ಸಿಎಂ ಶನಿವಾರ ಭೇಟಿ ಮಾಡಿದಾಗ, ಅವರು ಕಾರ್ಯಕ್ರಮಕ್ಕೆ ಆಗಮಿಸುವುದಿಲ್ಲ ಎಂದಿದ್ದಾರೆ. ಸಂಘಟಕರು ಸುಳ್ಳು ಮಾಹಿತಿ ನೀಡಿ ಕಾರ್ಯಕ್ರಮ ಆಯೋಜಿಸಿದ್ದಾರೆ ಎಂದು ಹಿಂದೂ ಸಮಿತಿ ಆರೋಪಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT