ಡಾ.ಝಾಕೀರ್ ನಾಯಕ್ 
ಪ್ರಧಾನ ಸುದ್ದಿ

ಝಾಕೀರ್ ಮಂಗಳೂರು ಪ್ರವೇಶ ನಿರ್ಬಂಧ

ಸೌತ್ ಕರ್ನಾಟಕ ಸಲಾಫಿ ಮೂವ್‍ಮೆಂಟ್ ಸಂಘಟನೆ ಮಂಗಳೂರಿನಲ್ಲಿ ಜ.2ರಂದು ಹಮ್ಮಿಕೊಂಡಿದ್ದ ಡಾ.ಝಾಕೀರ್ ನಾಯಕ್...

ಮಂಗಳೂರು: ಸೌತ್ ಕರ್ನಾಟಕ ಸಲಾಫಿ ಮೂವ್‍ಮೆಂಟ್ ಸಂಘಟನೆ ಮಂಗಳೂರಿನಲ್ಲಿ ಜ.2ರಂದು ಹಮ್ಮಿಕೊಂಡಿದ್ದ ಡಾ.ಝಾಕೀರ್ ನಾಯಕ್  ಸಾರ್ವಜನಿಕ ಭಾಷಣ, ಅವರ ಮಂಗಳೂರು ಪ್ರವೇಶಕ್ಕೆ ನಗರ ಪೊಲೀಸ್ ಕಮಿಷನರ್ ಡಿ.31ರಿಂದ ಜ.6ರವರೆಗೆ ನಿರ್ಬಂಧ ವಿಧಿಸಿ ಭಾನುವಾರ ಆದೇಶ ಹೊರಡಿಸಿದ್ದಾರೆ. 
ಸಮಾಜದ ಶಾಂತಿ ಕಾಪಾಡುವ ಹಿನ್ನೆಲೆಯಲ್ಲಿ ಕೆಲವೊಂದು ಅಂಶಗಳನ್ನು ಪರಿಗಣಿಸಿ ದಂಡಪ್ರಕ್ರಿಯೆ ಸಂಹಿತೆ 144ರನ್ವಯ ಡಾ.ಝಾಕೀರ್ ನಾಯಕ್ ಅವರ ಮಂಗಳೂರು ಪ್ರವೇಶ ಹಾಗೂ ಕಮಿಷನರೇಟ್ ವ್ಯಾಪ್ತಿಯಲ್ಲಿ ಸಾರ್ವಜನಿಕ ಭಾಷಣಕ್ಕೆ ನಿಷೇಧ ಹೇರಲಾಗಿದೆ ಎಂದು ನಗರ ಪೊಲೀಸ್ ಕಮಿಷನರ್ ಪ್ರಕಟಣೆ ತಿಳಿಸಿದೆ. 
ಡಾ.ಝಾಕೀರ್ ಅವರು ಭಾಗವ ಹಿಸುವ ಕಾರ್ಯ ಕ್ರಮದಲ್ಲಿ ಅನ್ಯ ಧರ್ಮೀಯರ ಭಾವನೆಗಳನ್ನು ಕೆರಳಿಸುವ ದುರುದ್ದೇಶವಿದೆ ಎಂದು ಹಿಂದೂ ಜನಜಾಗೃತಿ ಸಮಿತಿ ಆರೋಪಿಸಿದ್ದು, ಮಂಗಳೂರಿನಲ್ಲಿ ಪ್ರತಿಭಟನೆ ನಡೆಸಿತ್ತು. 
ಈ ಕಾರ್ಯಕ್ರಮದ ಆಯೋಜಕರು ಪಾಲಿಕೆಯಿಂದ ಅನುಮತಿ ಪಡೆಯುವಾಗ, ಸಿಎಂ, ಗೃಹ ಸಚಿವರನ್ನು ಆಮಂತ್ರಿಸುತ್ತಿರುವುದಾಗಿ ಹೇಳಿಕೊಂಡಿದ್ದಾರೆ. ಆದರೆ ಬೆಂಗಳೂರಿನಲ್ಲಿ ಸಿಎಂ ಶನಿವಾರ ಭೇಟಿ ಮಾಡಿದಾಗ, ಅವರು ಕಾರ್ಯಕ್ರಮಕ್ಕೆ ಆಗಮಿಸುವುದಿಲ್ಲ ಎಂದಿದ್ದಾರೆ. ಸಂಘಟಕರು ಸುಳ್ಳು ಮಾಹಿತಿ ನೀಡಿ ಕಾರ್ಯಕ್ರಮ ಆಯೋಜಿಸಿದ್ದಾರೆ ಎಂದು ಹಿಂದೂ ಸಮಿತಿ ಆರೋಪಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT