ಸಿದ್ದರಾಮಯ್ಯ 
ಪ್ರಧಾನ ಸುದ್ದಿ

ಮೌಢ್ಯಾಚರಣೆ ನಿಷೇಧಿಸಲು ಸರ್ಕಾರ ಬದ್ಧ: ಸಿಎಂ ಸಿದ್ದರಾಮಯ್ಯ

ಜನರಲ್ಲಿ ಭಯ ಹುಟ್ಟಿಸುವ ಹಾಗೂ ಶೋಷಣೆ ಮಾಡುವಂತಹ ಮೌಢ್ಯಾಚರಣೆಗಳನ್ನು ನಿಷೇಧಿಸಲು ಸರ್ಕಾರ ಬದ್ಧವಾಗಿದೆ...

ಬೆಂಗಳೂರು: ಜನರಲ್ಲಿ ಭಯ ಹುಟ್ಟಿಸುವ ಹಾಗೂ ಶೋಷಣೆ ಮಾಡುವಂತಹ ಮೌಢ್ಯಾಚರಣೆ ನಿಷೇಧ ಕಾಯಿದೆ ಜಾರಿಗೆ ತರಲು ಸರ್ಕಾರ ಬದ್ಧವಾಗಿದೆ. ಆದರೆ ಇದಕ್ಕೆ ಕೆಲವು ಪಟ್ಟಭದ್ರ ಹಿತಾಸಕ್ತಿಗಳು ವಿರೋಧ ವ್ಯಕ್ತಪಡಿಸುತ್ತಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಹೇಳಿದ್ದಾರೆ.
ಮಾನವ ಧರ್ಣಪೀಠದ ಬೆಳ್ಳಿ ಹಬ್ಬ ಸಮಾರಂಭದಲ್ಲಿ ಮಾತನಾಡಿದ ಸಿಎಂ, ಜನರಿಗೆ ತೊಂದರೆ ಮಾಡುವಂತ ಮೌಢ್ಯಗಳನ್ನು ನಿಷೇಧಿಸಲು ಸರ್ಕಾರ ಹಿಂಜರಿವುದಿಲ್ಲ. ಆದರೆ ಜನರ ಒಳಿತಿಗಾಗಿ ಇರುವ ಆಚರಣೆಗಳು ಹಾಗೂ ನಂಬಿಕೆಗಳು ಮುಂದುವರೆಯುತ್ತವೆ ಎಂದರು.
ಇದೇ ವೇಳೆ ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಇದಕ್ಕೆ ವಿರೋಧ ವ್ಯಕ್ತಪಡಿಸಿದರೂ ಅದನ್ನು ಸಮರ್ಥವಾಗಿ ಎದುರಿಸುವ ಶಕ್ತಿ ಸರ್ಕಾರಕ್ಕೆ ಇದೆ. ಮೌಢ್ಯಾಚರಣೆಗಳನ್ನು ನಿಷೇಧಿಸಲು ಕೆಲವು ಪ್ರಗತಿಪರ ಸಂಘಟನೆಗಳು ಒತ್ತಾಯಿಸುತ್ತಿದ್ದು, ಅದಕ್ಕೆ ಪೂರಕವಾಗಿ ಸರ್ಕಾರ ಸ್ಪಂದಿಸಲಿದೆ ಎಂದರು.
12ನೇ ಶತಮಾನದಲ್ಲೇ ಬಸವಾದಿ ಶರಣರು ಮೌಢ್ಯಗಳ ವಿರುದ್ಧ ಜಾಗೃತಿ ಮೂಡಿಸಿದ್ದರು. ಆದರೆ ಇಂದಿಗೂ ಮೌಢ್ಯಾಚಾರಣೆಗಳು ಜೀವಂತವಾಗಿವೆ. ಅವುಗಳನ್ನು ತೊಡೆದು ಹಾಕದಂತೆ ಪಟ್ಟಭದ್ರ ಹಿತಾಸಕ್ತಿಗಳು ಯತ್ನಿಸುತ್ತಿವೆ ಎಂದು ಸಿಎಂ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT