ಸಿದ್ದರಾಮಯ್ಯ 
ಪ್ರಧಾನ ಸುದ್ದಿ

ಮೌಢ್ಯಾಚರಣೆ ನಿಷೇಧಿಸಲು ಸರ್ಕಾರ ಬದ್ಧ: ಸಿಎಂ ಸಿದ್ದರಾಮಯ್ಯ

ಜನರಲ್ಲಿ ಭಯ ಹುಟ್ಟಿಸುವ ಹಾಗೂ ಶೋಷಣೆ ಮಾಡುವಂತಹ ಮೌಢ್ಯಾಚರಣೆಗಳನ್ನು ನಿಷೇಧಿಸಲು ಸರ್ಕಾರ ಬದ್ಧವಾಗಿದೆ...

ಬೆಂಗಳೂರು: ಜನರಲ್ಲಿ ಭಯ ಹುಟ್ಟಿಸುವ ಹಾಗೂ ಶೋಷಣೆ ಮಾಡುವಂತಹ ಮೌಢ್ಯಾಚರಣೆ ನಿಷೇಧ ಕಾಯಿದೆ ಜಾರಿಗೆ ತರಲು ಸರ್ಕಾರ ಬದ್ಧವಾಗಿದೆ. ಆದರೆ ಇದಕ್ಕೆ ಕೆಲವು ಪಟ್ಟಭದ್ರ ಹಿತಾಸಕ್ತಿಗಳು ವಿರೋಧ ವ್ಯಕ್ತಪಡಿಸುತ್ತಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಹೇಳಿದ್ದಾರೆ.
ಮಾನವ ಧರ್ಣಪೀಠದ ಬೆಳ್ಳಿ ಹಬ್ಬ ಸಮಾರಂಭದಲ್ಲಿ ಮಾತನಾಡಿದ ಸಿಎಂ, ಜನರಿಗೆ ತೊಂದರೆ ಮಾಡುವಂತ ಮೌಢ್ಯಗಳನ್ನು ನಿಷೇಧಿಸಲು ಸರ್ಕಾರ ಹಿಂಜರಿವುದಿಲ್ಲ. ಆದರೆ ಜನರ ಒಳಿತಿಗಾಗಿ ಇರುವ ಆಚರಣೆಗಳು ಹಾಗೂ ನಂಬಿಕೆಗಳು ಮುಂದುವರೆಯುತ್ತವೆ ಎಂದರು.
ಇದೇ ವೇಳೆ ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಇದಕ್ಕೆ ವಿರೋಧ ವ್ಯಕ್ತಪಡಿಸಿದರೂ ಅದನ್ನು ಸಮರ್ಥವಾಗಿ ಎದುರಿಸುವ ಶಕ್ತಿ ಸರ್ಕಾರಕ್ಕೆ ಇದೆ. ಮೌಢ್ಯಾಚರಣೆಗಳನ್ನು ನಿಷೇಧಿಸಲು ಕೆಲವು ಪ್ರಗತಿಪರ ಸಂಘಟನೆಗಳು ಒತ್ತಾಯಿಸುತ್ತಿದ್ದು, ಅದಕ್ಕೆ ಪೂರಕವಾಗಿ ಸರ್ಕಾರ ಸ್ಪಂದಿಸಲಿದೆ ಎಂದರು.
12ನೇ ಶತಮಾನದಲ್ಲೇ ಬಸವಾದಿ ಶರಣರು ಮೌಢ್ಯಗಳ ವಿರುದ್ಧ ಜಾಗೃತಿ ಮೂಡಿಸಿದ್ದರು. ಆದರೆ ಇಂದಿಗೂ ಮೌಢ್ಯಾಚಾರಣೆಗಳು ಜೀವಂತವಾಗಿವೆ. ಅವುಗಳನ್ನು ತೊಡೆದು ಹಾಕದಂತೆ ಪಟ್ಟಭದ್ರ ಹಿತಾಸಕ್ತಿಗಳು ಯತ್ನಿಸುತ್ತಿವೆ ಎಂದು ಸಿಎಂ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Geneva ಸಭೆಯಲ್ಲಿ ಭಾರತದ ವಿರುದ್ಧ ಟೀಕೆ; ‘ರಾಜಕೀಯ ಪ್ರೇರಿತ ಹೇಳಿಕೆಗಳ ಒಪ್ಪಲ್ಲ’ ಎಂದ MEA, ವಿಶ್ವಸಂಸ್ಥೆ ಸಮಿತಿ ವಿರುದ್ಧ ಕಿಡಿ..!

'ವಿರೋಧವಿದ್ದರೂ ಮೋಹನ್ ಭಾಗವತ್ ಅಮೆರಿಕಕ್ಕೆ ಯಾಕೆ ಹೋದ್ರು? ಮಹಾರಾಷ್ಟ್ರ ಕಾಂಗ್ರೆಸ್ ಶಾಸಕ ನಾನಾ ಪಟೋಲೆ ಪ್ರಶ್ನೆ!

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

'ಟಾಕ್ಸಿಕ್' ಸಿನಿಮಾ ವಿರುದ್ಧ ಸುಳ್ಳು ಮಾಹಿತಿ ಪ್ರಕಟಿಸದಂತೆ ಕೋರ್ಟ್ ತಡೆಯಾಜ್ಞೆ!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!