ಬೆಂಗಳೂರು: ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ಹಿರಿಯ ಐಎಎಸ್ ಅಧಿಕಾರಿ ಅರವಿಂದ್ ಜಾಧವ್ ಅವರನ್ನು ನೇಮಕ ಮಾಡಿ ಬುಧವಾರ ಸರ್ಕಾರ ಆದೇಶ ಹೊರಡಿಸಿದೆ.
ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿರುವ ಕೌಶಿಕ್ ಮುಖರ್ಜಿ ಅವರು ನಾಳೆ ನಿವೃತ್ತಿಯಾಗುತ್ತಿರುವ ಹಿನ್ನೆಲೆಯಲ್ಲಿ ಅವರ ಸ್ಥಾನಕ್ಕೆ ಉತ್ತರ ಪ್ರದೇಶ ಮೂಲದ 1978ರ ಕರ್ನಾಟಕ ವೃಂದದ ಅಧಿಕಾರಿ ಅರವಿಂದ್ ಜಾಧವ್ ಅವರನ್ನು ನೇಮಕ ಮಾಡಲಾಗಿದೆ.
ಪ್ರಸ್ತುತ ಕರ್ನಾಟಕ ಮೇಲ್ಮನವಿ ಪ್ರಾಧಿಕಾರದ ಅಧ್ಯಕ್ಷರಾಗಿರುವ ಜಾಧವ್ ಅವರನ್ನು ರಾಜ್ಯ ಸರ್ಕಾರ ಸೇವಾ ಹಿರಿತನದ ಆಧಾರದ ಮೇಲೆ ಮುಖ್ಯ ಕಾರ್ಯದರ್ಶಿ ಹುದ್ದೆಗೆ ನೇಮಕ ಮಾಡಿದೆ.
ಈ ಸಂಬಂಧ ನಿನ್ನೆ ವರದಿಗಾರರ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ನಾಳೆಯ ಒಳಗಾಗಿ ನೂತನ ಮುಖ್ಯ ಕಾರ್ಯದರ್ಶಿಯನ್ನು ನೇಮಕ ಮಾಡುವುದಾಗಿ ಹೇಳಿದ್ದರು.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos