ಜಿತನ್ ರಾಮ್ ಮಾಂಝಿ 
ಪ್ರಧಾನ ಸುದ್ದಿ

ಬಿಹಾರ ಮಂತ್ರಿಮಂಡಲ ಸಭೆ ಇಂದು, ವಿಧಾನಸಭೆ ವಿಸರ್ಜನೆ ಶಿಫಾರಸ್ಸಿಗೆ ಮಾಂಝಿ ಸಿದ್ಧ

ವಿರುದ್ಧ ಕ್ಯಾಂಪಿನ ಇಬ್ಬರು ಮಂತ್ರಿಗಳನ್ನು ರದ್ದು ಮಾಡಿರುವ ಬಿಹಾರದ ಮುಖ್ಯಮಂತ್ರಿ ಜಿತನ್ ರಾಮ್ ಮಾಂಝಿ

ಅಪ್ಡೇಟ್: ಮುಖ್ಯಮಂತ್ರಿ ಜಿತನ್ ರಾಮ್ ಮಾಂಝಿ ಇಂದು ಕರೆದಿದ್ದ ಮಂತ್ರಿಮಂಡಲದ ಸಭೆಯಲ್ಲಿ ೨೮ ಮಂತ್ರಿಗಳಲ್ಲಿ ೭ ಜನ ವಿಧಾನಸಭೆಯ ವಿಸರ್ಜನೆಯನ್ನು ಬೆಂಬಲಿಸಿದ್ದು ಇನ್ನುಳಿದ ನಿತೀಶ್ ಕುಮಾರ್ ಬಣದ ಬೆಂಬಲಿಗರು ಸಭೆಯಿಂದ ಹೊರನಡೆದಿದ್ದಾರೆ. ಇದರ ಹೊರತಾಗಿಯೂ ಮಾಂಝಿ ರಾಜ್ಯಪಾಲರನ್ನು ಭೇಟಿ ಮಾಡಿ ವಿಧಾನಸಭೆ ವಿಸರ್ಜನೆಗೆ ಶಿಫಾರಸ್ಸು ಮಾಡಲು ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ.

ಪಾಟ್ನಾ
: ವಿರುದ್ಧ ಕ್ಯಾಂಪಿನ ಇಬ್ಬರು ಮಂತ್ರಿಗಳನ್ನು ರದ್ದು ಮಾಡಿರುವ ಬಿಹಾರದ ಮುಖ್ಯಮಂತ್ರಿ ಜಿತನ್ ರಾಮ್ ಮಾಂಝಿ ಇಂದು ಮಂತ್ರಿಮಂಡಲದ ಸಭೆ ಕರೆದಿದ್ದು ರಾಜ್ಯದ ವಿಧಾನಸಭೆಯನ್ನು ವಿಸರ್ಜಿಸಲಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಈ ಸಭೆಯನ್ನು ಮಧ್ಯಾಹ್ನ ೨ ಘಂಟೆಗೆ ಕರೆಯಲಾಗಿದೆ.

ಇದಕ್ಕೂ ಮುಂಚೆ ಜೆಡಿಯು ಪಕ್ಷದ ಅಧ್ಯಕ್ಷ ಶರದ್ ಯಾದವ್ ಎಲ್ಲ ಶಾಸಕರ ಸಭೆಯನ್ನು ೪ ಘಂಟೆಗೆ ನಡೆಸುವುದಾಗಿ ಘೋಷಿಸಿದ್ದರು. ಆ ಸಭೆಯಲ್ಲಿ ಮುಖ್ಯಮಂತ್ರಿಯವರನ್ನು ಬದಲಿಸಬಹುದೆಂದು ಊಹಿಸಲಾಗಿತ್ತು. ಈಗ ಮುಖ್ಯಮಂತ್ರಿಗಳು ಅದಕ್ಕೂ ಮುಂಚಿತವಾಗಿ ಸಭೆ ಕರೆದಿರುವುದು ರಾಜಕೀಯ ಪಂಡಿತರ ಕುತೂಹಲ ಕೆರಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT