ಬಾಲಚಂದ್ರ ನೆಮಾಡೆ 
ಪ್ರಧಾನ ಸುದ್ದಿ

ಬಾಲಚಂದ್ರ ನೆಮಾಡೆ ಪ್ರತಿಕ್ರಿಯೆಗೆ ರಶ್ದಿ ಕೆಂಡಾಮಂಡಲ

ಸದರಿ ಜ್ಞಾನಪೀಠ ಪ್ರಶಸ್ತಿ ವಿಜೇತ ಮಹಾರಾಷ್ಟ್ರದ ಲೇಖಕ ಬಾಲಚಂದ್ರ ನೆಮಾಡೆ ಅವರು ಕಾರ್ಯಕ್ರಮವೊಂದರಲ್ಲಿ

ಮುಂಬೈ: ಸದರಿ ಜ್ಞಾನಪೀಠ ಪ್ರಶಸ್ತಿ ವಿಜೇತ ಮಹಾರಾಷ್ಟ್ರದ ಲೇಖಕ ಬಾಲಚಂದ್ರ ನೆಮಾಡೆ ಅವರು ಕಾರ್ಯಕ್ರಮವೊಂದರಲ್ಲಿ ಬೂಕರ್ ಪ್ರಶಸ್ತಿ ವಿಜೇತ ಸಲ್ಮಾನ್ ರಶ್ದಿ, 'ಮಿಡ್ ನೈಟ್ ಚಿಲ್ಡ್ರನ್ಸ್' ನಂತರ ಬರೆದಿದ್ದು ಯಾವುದೂ ಸಾಹಿತ್ಯಿಕವಾಗಿ ಉತ್ತಮವಾದ ಕೃತಿಯಲ್ಲ ಎಂದಿದ್ದಾರೆ ಅಲ್ಲದೆ ನೊಬೆಲ್ ಪ್ರಶಸ್ತಿ ವಿಜೇತ ವಿ ಎಸ್ ನಾಯ್ಪಾಲ್ ಅವರ ಕೃತಿಗಳು ಪಶ್ಚಿಮದ ದೇಶಗಳಿಗೆ ಬರೆದವು ಎಂದು ಟೀಕಿಸಿದ್ದಾರೆ.

ಇದರಿಂದ ಕುಪಿತಗೊಂಡಿರುವ ಸಲ್ಮಾನ್ ರಶ್ದಿ, ತಮ್ಮ ಟ್ವಿಟ್ಟರ್ ಖಾತೆಯಲ್ಲಿ ನೇಮಾಡೆ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ನೆಮಾಡೆ ಅವರನ್ನು ಮುದುಕ ಬಾಸ್ಟರ್ಡ್ ಎಂದಿರುವ ರಶ್ದಿ, ನನ್ನ ಯಾವುದೇ ಕೃತಿಗಳನ್ನು ಓದದೆ ನನ್ನ ಮೇಲೆ ದಾಳಿ ನಡೆಸಿದ್ದಾರೆ ಎಂದು ದೂರಿದ್ದಾರೆ.


ಇಂಗ್ಲಿಶ್ ಭಾಷೆಗೆ ಅನಗತ್ಯ ಪ್ರಾಮುಖ್ಯತೆ ಕೊಡುವುದನ್ನು ಟೀಕಿಸಿರುವ ನೆಮಾಡೆ, ಇಂಗ್ಲಿಶ್ ಭಾಷೆಯಲ್ಲಿ ಇಲ್ಲಿಯವರೆಗೂ ಒಂದು ಮಹಾಕಾವ್ಯ ರಚನೆಯಾಗಿಲ್ಲ. ನಮ್ಮ ಮರಾಠಿಯಲ್ಲೇ ಕನಿಷ್ಟ ೧೦ ಮಹಾಭಾರತದ ಮಹಾಕಾವ್ಯಗಳಿವೆ. ಇಂಗ್ಲಿಷನ್ನು ಕಡ್ಡಾಯ ಮಾಡಬೇಡಿ. ಇಂಗ್ಲಿಷ್ ನಿರ್ಮೂಲನೆಯನ್ನು ಕಡ್ಡಾಯ ಮಾಡಿ ಎಂದಿದ್ದಾರೆ.

ನೇಮಾಡೆ ಲೇಖಕರಾಗಿರುವುದಲ್ಲದೆ, ವಿವಿಧ ವಿಶ್ವವಿದ್ಯಾಲಯಗಳಲ್ಲಿ ಇಂಗ್ಲಿಶ್ ಮತ್ತು ತುಲನಾತ್ಮಕ ಭಾಷಾಶಾಸ್ತ್ರದ ಅಧ್ಯಾಪಕರಾಗಿ ಕೆಲಸ ಮಾಡಿದ್ದಾರೆ. ಇವರಿಗೆ ಕೆಲವು ದಿನಗಳ ಹಿಂದೆಯಷ್ಟೇ ೧೧ ಲಕ್ಷ ಮೊತ್ತ ಒಳಗೊಂಡ ಜ್ಞಾನಪೀಠ ಪ್ರಶಸ್ತಿ ಘೋಷಣೆಯಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT