ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಕಿರಣ್ ಬೇಡಿ - ಪ್ರಧಾನಿ ನರೇಂದ್ರ ಮೋದಿ 
ಪ್ರಧಾನ ಸುದ್ದಿ

ದೆಹಲಿ ಚುನಾವಣೆ ಫಲಿತಾಂಶ: ಬಿಜೆಪಿಗೆ ಆಘಾತ; ಉತ್ತರಕ್ಕಾಗಿ ಹುಡುಕಾಟ

ಆಮ್ ಆದ್ಮಿ ಪಕ್ಷದ ಅಬ್ಬರಕ್ಕೆ ಧೂಳಿಪಟವಾಗಿರುವ ಭಾರತೀಯ ಜನತಾ ಪಕ್ಷಕ್ಕೆ ತೀವ್ರ ಆಘಾತವಾಗಿದ್ದು, ಉತ್ತರಕ್ಕಾಗಿ ಹುಡುಕಾಟ ನಡೆಸಿದೆ.

ನವದೆಹಲಿ: ಆಮ್ ಆದ್ಮಿ ಪಕ್ಷದ ಅಬ್ಬರಕ್ಕೆ ಧೂಳಿಪಟವಾಗಿರುವ ಭಾರತೀಯ ಜನತಾ ಪಕ್ಷಕ್ಕೆ ತೀವ್ರ ಆಘಾತವಾಗಿದ್ದು, ಉತ್ತರಕ್ಕಾಗಿ ಹುಡುಕಾಟ ನಡೆಸಿದೆ.

ಆಮ್ ಆದ್ಮಿ ಪಕ್ಷದ ಐತಿಹಾಸಿಕ ಗೆಲುವಿನ ಬಗ್ಗೆ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಬಿಸಿ ಬಿಸಿ ಚರ್ಚೆ ನಡೆಯುತ್ತಿದ್ದು, ಎಎಪಿ ಕ್ಲೀನ್ ಸ್ವೀಪ್‌ಗೆ ಕಾಂಗ್ರೆಸ್‌ನ ದಶಕಗಳ ದುರಾಡಳಿತವೇ ಕಾರಣ ಎಂದು ಬಿಜೆಪಿ ಆರೋಪಿಸಿದೆ.

ಇನ್ನು ಕೊನೆ ಕ್ಷಣದಲ್ಲಿ ಕಿರಣ್ ಬೇಡಿ ಅವರನ್ನು ಪಕ್ಷಕ್ಕೆ ಕರೆತಂದು, ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿ ಮಾಡಿದ್ದೇ ದೊಡ್ಡ ತಪ್ಪು ಎಂದು ಹೆಸರು ಹೇಳಲಿಚ್ಚಸದ ರಾಜ್ಯ ಬಿಜೆಪಿ ನಾಯಕರು ಆರೋಪಿಸಿದ್ದಾರೆ.

ಎಎಪಿ ಚಂದ್ರನನ್ನೇ ಧರೆಗಿಳಿಸುವುದಾಗಿ ಭರವಸೆ ನೀಡಿತ್ತು. ಆದರೂ ನಾವು ಎಚ್ಚೆತ್ತುಕೊಂಡು ಉತ್ತಮ ಭರವಸೆಗಳನ್ನು ನೀಡಲಿಲ್ಲ ಎಂದು ರಾಜ್ಯ ನಾಯಕರು ತಿಳಿಸಿದ್ದಾರೆ. ನಾವು ಸಹ ಉಚಿತ ವೈಫೈ, ಉಚಿತ ನೀರು ಹಾಗೂ ವಿದ್ಯುತ್‌ನಂತಹ ದೊಡ್ಡ ದೊಡ್ಡ ಭರವಸೆಗಳನ್ನು ಕೊಡಬೇಕಿತ್ತು ಎಂದು ಅವರು ಹೇಳಿದ್ದಾರೆ.

ನಾವು ಚುನಾವಣೆ ಫಲಿತಾಂಶದ ಕುರಿತು ಆತ್ಮಾವಲೋಕನ ಮಾಡಿಕೊಳ್ಳುತ್ತೇವೆ. ಕಾಂಗ್ರೆಸ್ ಮತ ಎಎಪಿ ಮತವಾಗಿ ಪರಿವರ್ತನೆಯಾಗಿದೆ ಎಂದು ಕೇಂದ್ರ ಪರಿಸರ ಸಚಿವ ಪ್ರಕಾಶ್ ಜಾವೇಡ್ಕರ್ ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel