ಮಮತಾ ಬ್ಯಾನರ್ಜಿ 
ಪ್ರಧಾನ ಸುದ್ದಿ

ಸೊಕ್ಕಿಗೆ ತಕ್ಕ ಪಾಠ: ಮಮತಾ ಬ್ಯಾನರ್ಜಿ

ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಹರಿಹಾಯ್ದಿರುವ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ಕೊಲ್ಕೊತ್ತ: ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಹರಿಹಾಯ್ದಿರುವ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೆಹಲಿಯಲ್ಲಿ ಎಎಪಿ ಪಕ್ಷದ ಗೆಲುವಿನ ಬಗ್ಗೆ ಪ್ರತಿಕ್ರಿಯಿಸಿ "ಇದು ಸೊಕ್ಕಿಗೆ ದೊರೆತ ಸೋಲಿನ ಪಾಠ" ಎಂದು ಮಂಗಳವಾರ ಬಣ್ಣಿಸಿದ್ದಾರೆ.

"ಇದು ಜನರ ಗೆಲುವು ಹಾಗೂ ಸೊಕ್ಕು ಮತ್ತು ದ್ವೇಷವನ್ನು ಹರಡುತ್ತಿದ್ದವರಿಗೆ ಸಿಕ್ಕ ಸೋಲು" ಎಂದು ಅವರು ಟ್ವೀಟ್ ಮಾಡಿದ್ದಾರೆ.

"ದೆಹಲಿ ಮತದಾರರಿಗೆ ಹಾಗೂ ಎಎಪಿ ಕಾರ್ಯಕರ್ತರು ಮತ್ತು ನಾಯಕರಿಗೆ ನನ್ನ ಅಭಿನಂದನೆಗಳು. ನಮಗೆಲ್ಲಾ ಸಂತಸವಾಗಿದೆ ಎಂದಿದ್ದಾರೆ.

"ದೆಹಲಿ ಚುನಾವಣೆಗಳು ಈಗಿನ ರಾಜಿಕೀಯ ಸ್ಥಿತಿಗೆ ತಿರುವು ನೀಡಿದ ಸಂಗತಿ. ರಾಜಕೀಯ ಪಿತೂರಿಗಳಿಗೆ ಪ್ರಜಾಪ್ರಭುತ್ವದಲ್ಲಿ ಜಾಗವಿಲ್ಲ ಎಂದು ಇದು ತೋರಿಸುತ್ತದೆ. ದೇಶಕ್ಕೆ ಬದಲಾವಣೆಯ ಅಗತ್ಯ ಇತ್ತು" ಎಂದಿದ್ದಾರೆ.

"ದೆಹಲಿ ಚುನಾವಣೆಯನ್ನು ಗೆದ್ದ ಎಎಪಿಗೆ ನನ್ನ ಅಭಿನಂದನೆಗಳು. ಹಾಗು ಹೊಸ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಒಳ್ಳೆಯದಾಗಲಿ" ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT