ನಿತೀಶ್ ಕುಮಾರ್ 
ಪ್ರಧಾನ ಸುದ್ದಿ

ಚಲೋ ದಿಲ್ಲಿ ಎಂದ ನಿತೀಶ್ ಕುಮಾರ್

ಸರ್ಕಾರ ರಚಿಸಲು ಆಹ್ವಾನ ನೀಡುವಂತೆ ಬಿಹಾರದ ರಾಜ್ಯಪಾಲ ಕೇಸರಿನಾಥ್ ತ್ರಿಪಾಠಿ ಮೇಲೆ ಒತ್ತಡ ಹೇರಲು

ಪಾಟ್ನಾ: ಸರ್ಕಾರ ರಚಿಸಲು ಆಹ್ವಾನ ನೀಡುವಂತೆ ಬಿಹಾರದ ರಾಜ್ಯಪಾಲ ಕೇಸರಿನಾಥ್ ತ್ರಿಪಾಠಿ ಮೇಲೆ ಒತ್ತಡ ಹೇರಲು, ಜನತಾದಳ (ಸಂಯುಕ್ತ) ಅಧ್ಯಕ್ಷ ನಿತೀಶ್ ಕುಮಾರ್ ತಮ್ಮ ಬೆಂಬಲಿಗ ಶಾಸಕರೊಂದಿಗೆ ಬುಧವಾರ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೆ ದೂರು ನೀಡಿ ರಾಷ್ಟ್ರಪತಿ ಭವನದ ಮುಂದೆ ಪೆರೇಡ್ ನಡೆಸಲಿದ್ದಾರೆ.

ತಾವು ಸರ್ಕಾರ ರಚನೆಗೆ ಬೇಡಿಕೆಯಿಟ್ಟು ೨೪ ಘಂಟೆಗಳು ಕಳೆದರೂ ರಾಜ್ಯಪಾಲರು ಯಾವುದೇ ನಿರ್ಧಾರ ತೆಗೆದುಕೊಳ್ಳದೆ ಹೋದದ್ದಕ್ಕೆ ಅಸಮಧಾನಗೊಂದಿರುವ ನಿತೀಶ್ ತಮ್ಮ ೧೩೦ ಬೆಂಬಲಿಗ ಶಾಸಕರೊಂದಿಗೆ ಮಂಗಳವಾರ ಸಂಜೆ ದೆಹಲಿಗೆ ವಿಮಾನ ಹತ್ತಿದ್ದಾರೆ. ಕುದುರೆ ಮಾರಾಟ ನಡೆಯಬಹುದೆಂದು ಆತಂಕ ವ್ಯಕ್ತಪಡಿಸಿರುವ ನಿತೀಶ್ "ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಇತರ ಬಿಜೆಪಿ ನಾಯಕರನ್ನು ಭೇಟಿ ಮಾಡಿದ ನಂತರ ಮಾಂಝಿ ಅವರಿಗೆ ಕುದುರೆ ಮಾರಾಟಕ್ಕೆ ಹಸಿರು ನಿಶಾನೆ ಸಿಕ್ಕಿರುವ ಹಾಗೆ ಕಾಣುತ್ತದೆ" ಎಂದಿದ್ದಾರೆ.

"ನಾನು ೧೩೦ ಶಾಸಕರ ಬೆಂಬಲದ ಪತ್ರವನ್ನು ರಾಜ್ಯಪಾಲರಿಗೆ ಸಲ್ಲಿಸ್ಸಿದ್ದರೂ ಸಹ ಸರ್ಕಾರ ರಚನೆಗೆ ಆಹ್ವಾನ ನೀಡುವುದಕ್ಕೆ ತಡ ಮಾಡುವುದಕ್ಕೆ ಯಾವುದೇ ಕಾರಣಗಳಿಲ್ಲ" ಎಂದು ದೂರಿದ್ದಾರೆ ನಿತೀಶ್.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!