ಉಮಾಭಾರತಿ 
ಪ್ರಧಾನ ಸುದ್ದಿ

ನದಿ ಜೋಡಣೆ: ಮುಖ್ಯಮಂತ್ರಿಗಳನ್ನು ಭೇಟಿ ಮಾಡಲಿರುವ ಉಮಾ ಭಾರತಿ

ಹಿಂದಿನ ಎನ್ ಡಿ ಎ ಸರ್ಕಾರದ ನದಿಗಳ ಜೋಡಣೆ ಯೋಜನೆಯನ್ನು ಮುಂದುವರೆಸಲು ನೀರು ಸಂಪನ್ಮೂಲಗಳ ಸಚಿವೆ

ನವದೆಹಲಿ: ಹಿಂದಿನ ಎನ್ ಡಿ ಎ ಸರ್ಕಾರದ ನದಿಗಳ ಜೋಡಣೆ ಯೋಜನೆಯನ್ನು ಮುಂದುವರೆಸಲು ನೀರು ಸಂಪನ್ಮೂಲಗಳ ಸಚಿವೆ ಉಮಾಭಾರತಿ ಏಳು ಈಶಾನ್ಯ ರಾಜ್ಯಗಳು, ಸಿಕ್ಕಿಂ ಮತ್ತು ಪಶ್ಚಿಮ ಬಂಗಾಳದ ಮುಖ್ಯಮಂತ್ರಿಗಳು ಹಾಗೂ ಹಿರಿಯ ಅಧಿಕಾರಿಗಳನ್ನು ಭೇಟಿ ಮಾಡಲಿದ್ದಾರೆ.

ಈಶಾನ್ಯ ರಾಜ್ಯಗಳ ಪ್ರವಾಸ ಮಾಡುತ್ತಿರುವ ಸಚಿವೆ ಉಮಾ ಭಾರತಿ ಈಗಾಗಲೇ ಸಿಕ್ಕಿಂ ಮುಖ್ಯಮಂತ್ರಿ ಪವನ್ ಕುಮಾರ್ ಚಾಮ್ಲಿಂಗ್, ಅಸ್ಸಾಂ ಮುಖ್ಯಮಂತ್ರಿ ತರುಣ್ ಗೊಗಾಯ್ ಮತ್ತು ಅರುಣಾಚಲ್ ಪ್ರದೇಶದ ಮುಖ್ಯಮಂತ್ರಿ ನಬಂ ತೂಕಿ ಅವರನ್ನು ಈಗಾಗಲೇ ಭೇಟಿ ಮಾಡಿದ್ದಾರೆ.

ಈಶಾನ್ಯ ರಾಜ್ಯಗಳ ನದಿಗಳ ನೀರನ್ನು ಕೇಂದ್ರ ಸರ್ಕಾರ ಇತರ ರಾಜ್ಯಗಳಿಗೆ ಹರಿಸುವ ಯೋಜನೆ ಹೊಂದಿದೆ ಎಂದು ಅವರು ಮುಖ್ಯಮಂತ್ರಿಗಳಿಗೆ ತಿಳಿಸಿದ್ದಾರೆ. ಇದಕ್ಕಾಗಿ ನದಿಗಳ ಅಧ್ಯಯನ ನಡೆಯುತ್ತಿದೆ. ಅಭಿವೃದ್ಧಿಯ ಹಾದಿಯಲ್ಲಿ ಯಾವುದೇ ರಾಜಕೀಯ ಭಿನ್ನಾಭಿಪ್ರಾಯಗಳು ಅಡೆತಡೆಯಾಗಬಾರದು ಎಂಬುದು ಪ್ರಧಾನಿ ನರೇಂದ್ರ ಮೋದಿ ಅವರ ನಿಲುವು ಎಂದು ಕೂಡ ಅವರು ಸ್ಪಷ್ಟಪಡಿಸಿದ್ದಾರೆ ಎನ್ನಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT