ತೀಸ್ತಾ ಸೆತಲ್ವಾಡ್ 
ಪ್ರಧಾನ ಸುದ್ದಿ

ತೀಸ್ತಾ ಸೆತಲ್ವಾಡ್ ಬಂಧನಕ್ಕೆ ಸುಪ್ರೀಮ್ ಕೋರ್ಟ್ ತಾತ್ಕಾಲಿಕ ತಡೆ

ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆತಲ್ವಾಡ್ ಅವರನ್ನು ಬಂಧಿಸದಂತೆ ಗುಜರಾತ್ ಪೊಲೀಸರಿಗೆ ಸುಪ್ರೀಮ್ ಕೋರ್ಟ್ ಗುರುವಾರ ತಾತ್ಕಾಲಿಕ ತಡೆ ನೀಡಿದೆ.

ನವದೆಹಲಿ: ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆತಲ್ವಾಡ್ ಅವರನ್ನು ಬಂಧಿಸದಂತೆ ಗುಜರಾತ್ ಪೊಲೀಸರಿಗೆ ಸುಪ್ರೀಮ್ ಕೋರ್ಟ್ ಗುರುವಾರ ತಾತ್ಕಾಲಿಕ ತಡೆ ನೀಡಿದೆ. ೨೦೦೨ ಗುಜರಾತ್ ಗಲಭೆಯ ಸಂಸ್ತ್ರಸ್ತರ ಸಂಗ್ರಹಾಲಯಕ್ಕೆ ಮೀಸಲಿಟ್ಟಿದ್ದ ಹಣದ ದುರುಪಯೋಗ ಪ್ರಕರಣದಲ್ಲಿ ಇದಕ್ಕೂ ಮುಂಚೆ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ನಿರಾಕರಿಸಿತ್ತು.

ಈ ಹಿನ್ನಲೆಯಲ್ಲಿ ತೀಸ್ತಾ ಅವರ ಮುಂಬೈ ಮನೆಗೆ ಪೋಲಿಸರು ಬಂಧನಕ್ಕೆ ತೆರಳಿದ್ದರು.

ತೀಸ್ತಾ ಮತ್ತು ಅವರ ಪತಿ ಜಾವೇದ್ ಆನಂದ್ ಅವರ ಬಂಧನದ ಈ ತಾಕ್ಲಾಲಿಕ ತಡೆ ಶುಕ್ರವಾರದವರೆಗೆ ಮುಂದುವರೆಯಲಿದ್ದು, ಸುಪ್ರೀಮ್ ಕೋರ್ಟ್ ಶುಕ್ರವಾರ ವಿಚಾರಣೆ ಕೈಗೆತ್ತುಕೊಳ್ಳಲಿದೆ ಎಂದಿದ್ದಾರೆ ಮುಖ್ಯ ನ್ಯಾಯಾಧೀಶ ಎಚ್ ಎಲ್ ದತ್ತು.

ತೀಸ್ತಾ ಪರವಾಗಿ ಮಾಜಿ ಕೇಂದ್ರ ಮಂತ್ರಿ ಕಪಿಲ್ ಸಿಬಲ್ ಮತ್ತು ವಕೀಲೆ ಅರ್ಪಣಾ ಭಟ್ ಅವರು ಇದು "ಅಸಾಮಾನ್ಯ ಪರಿಸ್ಥಿತಿ", ಆದುದರಿಂದ ಕೂಡಲೆ ವಿಚಾರಣೆ ಮಾಡಬೇಕೆಂದು ನ್ಯಾಯಾಧೀಶರಾದ ಎಚ್ ಎಲ್ ದತ್ತ, ಎ ಕೆ ಸಿಕ್ರಿ ಮತ್ತು ಅರುಣ್ ಮಿಶ್ರಾ ಇವರುಗಳನ್ನೊಳಗೊಂಡ ನ್ಯಾಯ ಪೀಠವನ್ನು ಮನವಿ ಮಾಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

SCROLL FOR NEXT