ಶ್ರೀ ಪದ್ಮನಾಭಾಸ್ವಾಮಿ ದೇವಾಲಯ 
ಪ್ರಧಾನ ಸುದ್ದಿ

ತಿರುವನಂತಪುರಮ್ ಪದ್ಮನಾಭಸ್ವಾಮಿ ದೇವಾಲಯದಿಂದ ೨೬೬ಕೆಜಿ ಚಿನ್ನ ನಾಪತ್ತೆ

ಶ್ರೀ ಪದ್ಮನಾಭಾಸ್ವಾಮಿ ದೇವಾಲಯದಿಂದ ೨೬೬ಕೆಜಿ ಚಿನ್ನ ನಾಪತ್ತೆಯಾಗಿದೆ ಎಂದು ಕೇಂದ್ರದ ಮಾಜಿ ಆಡಿಟರ್ ಜನರಲ್ ವಿನೋದ್ ರಾಯ್

ತಿರುವನಂತಪುರಮ್: ಶ್ರೀ ಪದ್ಮನಾಭಾಸ್ವಾಮಿ ದೇವಾಲಯದಿಂದ ೨೬೬ಕೆಜಿ ಚಿನ್ನ ನಾಪತ್ತೆಯಾಗಿದೆ ಎಂದು ಕೇಂದ್ರದ ಮಾಜಿ ಆಡಿಟರ್ ಜನರಲ್ ವಿನೋದ್ ರಾಯ್ ಸುಪ್ರೀಮ್ ಕೋರ್ಟ್ ಗೆ ತಿಳಿಸಿದ್ದಾರೆ.

ದೇವಾಲಯದ ಆಸ್ತಿ-ಪಾಸ್ತಿಯನ್ನು ಆಡಿಟ್ ಮಾಡಲು ಸುಪ್ರೀಮ್ ಕೋರ್ಟ್ ರಾಯ್ ಅವರನ್ನು ನೇಮಿಸಿತ್ತು. ಈಗ ರಾಯ್ ಅವರು ಸಲ್ಲಿಸಿರುವ ೧೮೦೦ ಪುಟದ ವರದಿಯಲ್ಲಿ ಈ ವಿಷಯ ಬಹಿರಂಗಪಡಿಸಿದ್ದಾರೆ.

ದೇವಸ್ಥಾನಕ್ಕೆ ಚಿನ್ನದ ಲೇಪನದ ಕೆಲಸದ ಸಲುವಾಗಿ ದೇವಾಲಯದ ದಾಸ್ತಾನಿನಿಂದ ೮೯೩.೪೪ ಕೆಜಿ ಚಿನ್ನವನ್ನು "ಕರಗಿಸಲು ಮತ್ತು ಶುದ್ಧೀಕರಿಸಲು" ಖಾಸಗಿ ಗುತ್ತಿಗೆದಾರನಿಗೆ ನೀಡಲಾಗಿತ್ತು.  ಆದರೆ ಹಿಂದಿರುಗಿದ್ದು ಕೆಲವ ೬೩೭ ಕೆಜಿ ಎನ್ನುತ್ತಾರೆ ದೇವಾಲಯದ ಅಧಿಕಾರಿಗಳು.

ಈ ಇಡೀ ಪ್ರಕರಣದಲ್ಲಿ ಏನೋ ತಪ್ಪು ನಡೆದಿದ್ದು, ಖಾಸಗಿ ಗುತ್ತಿಗೆದಾರನಿಗೆ ಚಿನ್ನ ನೀಡುವಾಗ ಅದರ ಗುಣಮಟ್ಟ ಪರೀಕ್ಷಿಸದೆ ಕೊಟ್ಟದ್ದೇಕೆ ಎಂದು ಪ್ರಶ್ನಿಸುತ್ತದೆ ವರದಿ.

ಆಸ್ತಿಪತ್ರದ ಪೂರಕವಾದ ದಾಖಲೆಗಳನ್ನು ಒದಗಿಸದಿದ್ದಕ್ಕೆ, ದೇವಾಲಯದ ಆಡಳಿತ ಮಂಡಳಿಯಾದ ಟ್ರ್ಯಾವಂಕೋರ್ ರಾಜವಂಶವನ್ನು ಈ ವರದಿ ದೂರಿದೆ.

ಹಣಕಾಸಿನ ದಾಖಲೆಗಳು ತಿರುಚಲಾಗಿದೆ ಹಾಗೂ ೨೦೦೮-೨೦೦೯ ರಲ್ಲಿ ದೇವಾಲಯ ಪಡೆದ ಚಿನ್ನ ಮತ್ತು ಬೆಳ್ಳಿಯ ದಾನದ ವಿವರವನ್ನು ದಾಖಲಿಸಿಲ್ಲ ಎಂದು ದೂರಿದೆ ವರದಿ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

'sir' ವಿವಾದ ಕೊನೆಗೂ ಅಂತ್ಯ: 'ಸರ್.. ನೀವು ನನ್ನ ಹಿರಿಯರು': ಕಿಚ್ಚಾ ಸುದೀಪ್ ಗೆ ಧನ್ಯವಾದ ಹೇಳಿದ ನಟ ಯಶ್!

SCROLL FOR NEXT