ದೇವೇಂದ್ರ ಫಡ್ನವಿಸ್ ಮತ್ತು ಉದ್ಧವ್ ಠಾಕ್ರೆ 
ಪ್ರಧಾನ ಸುದ್ದಿ

ಬಿಗಡಾಯಿಸಿದ ಸಂಬಂಧದ ನಡುವೆ ಫೆಬ್ರವರಿ ೧೭ ರಂದು ಬಿಜೆಪಿ-ಸೇನಾ ಭೇಟಿ

ಮಹಾರಾಷ್ಟ್ರದಲ್ಲಿ ಆಡಳಿತ ನಡೆಸುತ್ತಿರುವ ಮಿತ್ರ ಪಕ್ಷಗಳಾದ ಬಿಜೆಪಿ ಮತ್ತು ಶಿವಸೇನಾ ಪಕ್ಷಗಳ ನಡುವೆ ಬೆಳೆಯುತ್ತಿರುವ ಉದ್ವೇಗದ ನಡುವೆ ಎರಡೂ

ಮುಂಬೈ: ಮಹಾರಾಷ್ಟ್ರದಲ್ಲಿ ಆಡಳಿತ ನಡೆಸುತ್ತಿರುವ ಮಿತ್ರ ಪಕ್ಷಗಳಾದ ಬಿಜೆಪಿ ಮತ್ತು ಶಿವಸೇನಾ ಪಕ್ಷಗಳ ನಡುವೆ ಬೆಳೆಯುತ್ತಿರುವ ಉದ್ವೇಗದ ನಡುವೆ ಎರಡೂ ಪಕ್ಷಗಳ ಸಮನ್ವಯ ಸಮಿತಿ ಸಭೆ ಫೆಬ್ರವರಿ ೧೭ರಂದು ನಡೆಯಲಿದೆ.

ಈ ಸಭೆ ಮಧ್ಯಾಹ್ನ ನಡೆಯಲಿದೆ ಎಂದು ಶಿವಸೇನಾ ವಕ್ತಾರ ತಿಳಿಸಿದ್ದಾರೆ.

ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್, ರಾಜ್ಯದ ಬಿಜೆಪಿ ಅಧ್ಯಕ್ಷ ರಾವ್ ಸಾಹೇಬ್ ದಾನ್ವೆ   ಮತ್ತು ಸಹಕಾರಿ ಸಚಿವ ಚಂದ್ರಕಾಂತ್ ಪಾಟೀಲ್ ಬಿಜೆಪಿ ಪಕ್ಷವನ್ನು ಪ್ರತಿನಿಧಿಸುತ್ತಿದ್ದು, ಕೈಗಾರಿಕಾ ಸಚಿವ ಸುಭಾಶ್ ದೇಸಾಯಿ, ಸಾರಿಗೆ ಸಚಿವ ದಿವಾಕರ್ ರಾವೋಟೆ ಮತ್ತು ರಾಜ್ಯ ಸಭಾ ಸದಸ್ಯ ಅನಿಲ್ ದೇಸಾಯಿ ಶಿವಸೇನೆಯನ್ನು ಪ್ರತಿನಿಧಿಸಲಿದ್ದಾರೆ.

ಮೈತ್ರಿ ಸರ್ಕಾರದ ಸರಾಗ ಆಡಳಿತಕ್ಕಾಗಿ ಆ ಸಮನ್ವಯ ಸಮಿತಿಯನ್ನು ರಚಿಸಲಾಗಿತ್ತು. ೧೯೯೫-೧೯೯೯ ರ ನಡುವಿನ, ಈ ಹಿಂದಿನ ಶಿವಸೇನಾ-ಬಿಜೆಪಿ ಸರ್ಕಾರ ಕೂಡ ಸಮನ್ವಯ ಸಮಿತಿ ಹೊಂದಿತ್ತು. ದಿವಂಗತ ಶಿವಸೇನೆಯ ಅಧ್ಯಕ್ಷ ಭಾಳಾ ಠಾಕ್ರೆ ಹಾಗೂ ದಿವಂಗತ ಬಿಜೆಪಿ ನಾಯಕ ಪ್ರಮೋದ್ ಮಹಾಜನ್ ಈ ಸಮಿತಿಯಲ್ಲಿದ್ದರು.

ಈ ಕ್ಷಣದಲ್ಲಿ ಈ ಕೇಸರಿ ಪಕ್ಷಗಳ ಸಂಬಂಧ ಬಿಗಡಾಯಿಸಿದೆ. ದೆಹಲಿ ಚುನಾವಣೆಗಳಲ್ಲಿ ಬಿಜೆಪಿ ಸೋತ ನಂತರ ಶಿವಸೇನ ಬಿಜೆಪಿ ಪಕ್ಷವನ್ನು ತೀವ್ರವಾಗಿ ಟೀಕಿಸಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬೆಳಗಾವಿ: ಬೀದಿ ನಾಯಿಗಳ ಅಟ್ಟಹಾಸ, 2 ವರ್ಷದ ಬಾಲಕಿ ಮೇಲೆ ಭೀಕರ ದಾಳಿ

SCROLL FOR NEXT