ದಿಗ್ವಿಜಯ್ ಸಿಂಗ್ 
ಪ್ರಧಾನ ಸುದ್ದಿ

'ಅರವಿಂದ್ ಕೇಜ್ರಿವಾಲ್' ಕಾಂಗ್ರೆಸ್ ಮುಕ್ತ ಭಾರತಕ್ಕಾಗಿ ಮಾಡಿದ ಆರ್ ಎಸ್ ಎಸ್ ಯೋಜನೆಯ ಭಾಗ: ದಿಗ್ವಿಜಯ್ ಸಿಂಗ್

ದೆಹಲಿ ವಿಧಾನಸಭಾ ಚುನಾವಣೆಗಳಲ್ಲಿ ಎಎಪಿ ಪಕ್ಷದ ಅಭೂತಪೂರ್ವ ಗೆಲುವಿಗೆ ಹೊಸ ತಿರುವು ನೀಡಲು ಕಾಂಗ್ರೆಸ್ ಪ್ರಯತ್ನಿಸಿದೆ.

ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆಗಳಲ್ಲಿ ಎಎಪಿ ಪಕ್ಷದ ಅಭೂತಪೂರ್ವ ಗೆಲುವಿಗೆ ಹೊಸ ತಿರುವು ನೀಡಲು ಕಾಂಗ್ರೆಸ್ ಪ್ರಯತ್ನಿಸಿದೆ. ಅರವಿಂದ್ ಕೇಜ್ರಿವಾಲ್ ಕಾಂಗ್ರೆಸ್ ಮುಕ್ತ ಭಾರತಕ್ಕಾಗಿ ಮಾಡಿದ ಆರ್ ಎಸ್ ಎಸ್ ಯೋಜನೆಯ ಭಾಗ ಎಂದಿದ್ದಾರೆ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್.

"ಕಾಂಗ್ರೆಸ್ ಮುಕ್ತ ಭಾರತದ ಆರ್ ಎಸ್ ಎಸ್ ನ ದೊಡ್ಡ ಯೋಜನೆಯಲ್ಲಿ ಅರವಿಂದ್ ಕೇಜ್ರಿವಾಲ್ ಒಂದು ಭಾಗ. ಈಗ ಕೇಜ್ರಿವಾಲ್ ಅಭಿಮಾನಿಗಳು ಮತ್ತು ಆರ್ ಎಸ್ ಎಸ್ ನವರು ನನ್ನನ್ನು ದೂಷಿಸಬಹುದು ಎಂದು ನನಗೆ ತಿಳಿದಿದೆ" ಎಂದು ದಿಗ್ವಿಜಯ್ ಸಿಂಗ್ ಟ್ವೀಟ್ ಮಾಡಿದ್ದಾರೆ.

"ಅಣ್ಣಾ ಚಳವಳಿಯ ಹಿಂದೆ ಆರ್ ಎಸ್ ಎಸ್ ಕೈವಾಡ ಇದೆ ಎಂದು ಹೇಳಿದ್ದಾಗ ನನ್ನನು ಯಾರೂ ನಂಬಲಿಲ್ಲ. ನನ್ನನ್ನು ಹುಚ್ಚ ಎಂದರು. ಆದರೆ ಕೊನೆಗೆ ಅದು ನಿಜ ಎಂದು ಸಾಬೀತಾಯಿತು. ಈ ಬಾರಿಯೂ ನಿಜ ತಿಳಿಯುತ್ತದೆ" ಎಂದು ಕೂಡ ಟ್ವೀಟ್ ಮಾಡಿದ್ದರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT