ಅರವಿಂದ್ ಕೇಜ್ರಿವಾಲ್ ಸಚಿವ ಸಂಪುಟ 
ಪ್ರಧಾನ ಸುದ್ದಿ

ವಾಸದ ಮತ್ತು ಸ್ಲಂ ಪ್ರದೇಶಗಳ ಮನೆಗಳನ್ನು ಕೆಡವುವುದಿಲ್ಲ: ಎಎಪಿ ಸರ್ಕಾರ

ಆಮ್ ಆದ್ಮಿ ಪಕ್ಷದ ಸರ್ಕಾರ ಅಧಿಕಾರ ಸ್ವೀಕರಿಸಿದ ನಂತರದ ಮೊದಲ ಆದೇಶದಲ್ಲಿ ದೆಹಲಿಯಲ್ಲಿ ವಾಸವಿರುವ ಮನೆಗಳನ್ನು ಕೆಡುವುವುದನ್ನು ನಿಷೇಧಿಸಿದೆ.

ನವದೆಹಲಿ: ಆಮ್ ಆದ್ಮಿ ಪಕ್ಷದ ಸರ್ಕಾರ ಅಧಿಕಾರ ಸ್ವೀಕರಿಸಿದ ನಂತರದ ಮೊದಲ ಆದೇಶದಲ್ಲಿ ದೆಹಲಿಯಲ್ಲಿ ವಾಸವಿರುವ ಮನೆಗಳನ್ನು ಕೆಡುವುವುದನ್ನು ನಿಷೇಧಿಸಿದೆ.

ಶನಿವಾರ ಮುಖ್ಯಮಂತ್ರಿ ಆಗಿ ಪ್ರಮಾಣ ಸ್ವೀಕರಿಸಿದ ಅರವಿಂದ ಕೇಜ್ರಿವಾಲ್ ಚುನಾವಣಾ ಪ್ರಚಾರ ವೇಳೆ ಒಂದು ಮನೆಯನ್ನು ಕೂಡ  ಉರುಳಿಸುವುದಿಲ್ಲ ಎಂದು ಭರವಸೆ ನೀಡಿದ್ದರು. ಶಾಶ್ವತ ಕಟ್ಟಡಗಳಲ್ಲಿ ಸ್ಥಳಾಂತರ ಮಾಡುತ್ತೇವೆ ಎಂಬ ಭರವಸೆಯನ್ನೂ ನೀಡಿದ್ದರು.

ಪೂರ್ವ ದೆಹಲಿಯ ಶಾರಾದ ಪ್ರದೇಶದಲಿನ ಸ್ಲಂಗಳ ಧ್ವಂಸದ ವಿರುದ್ದ ಅರವಿಂದ ಕೇಜ್ರಿವಾಲ್ ಮನೆಯ ಎದುರು ನಡೆದ ಪ್ರತಿಭಟನೆಯ ಹಿನ್ನಲೆಯಲ್ಲಿ ಈ ಆದೇಶವನ್ನು ಎಎಪಿ ಸರ್ಕಾರ ಹೊರಡಿಸಿದೆ.

ರಾಮಲೀಲಾ ಮೈದಾನದಲ್ಲಿ ಅರವಿಂದ್ ಕೇಜ್ರಿವಾಲ್ ಪ್ರಮಾಣ ವಚನ ಸ್ವೀಕರಿಸುತ್ತಿದ್ದ ಸಂದರ್ಭದಲ್ಲಿ ಈ ಸ್ಲಂಗಳ ತೆರವು ಕಾರ್ಯ ನಡೆದಿತ್ತು ಎಂದು ವರದಿಯಾಗಿತ್ತು. ಈ ಕಾರ್ಯದಲ್ಲಿ ಸ್ಲಂ ನಿವಾಸಿಗಳು ಗಾಯಗೊಂಡರು ಎಂದು ಪ್ರತಿಭಟನಕಾರರು ದೂರಿದ್ದಾರೆ.

ಸರ್ಕಾರಿ ಜಾಗಗಳಲ್ಲಿ ಈ ಸ್ಲಂಗಳು ತಲೆ ಎತ್ತಿರುವುದರಿಂದ ಅವುಗಳ ತೆರವಿಗೆ ಸಹಕರಿಸುವಂತೆ ನಮಗೆ ಆದೇಶವಿತ್ತು ಎಂದು ಪೊಲೀಸರು ದೂರಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT