ಮೈತ್ರಿಪಾಲ ಸಿರಿಸೇನ ಮತ್ತು ನರೇಂದ್ರ ಮೋದಿ 
ಪ್ರಧಾನ ಸುದ್ದಿ

ನಾಗರಿಕ ಅಣು ಒಪ್ಪಂದ, ರಕ್ಷಣಾ ಸಂಬಂಧದ ವೃದ್ಧಿಗೆ ಭಾರತ-ಲಂಕಾ ಹೊಸ ಮುನ್ನುಡಿ

ಭಾರತ ಮತ್ತು ಶ್ರೀಲಂಕಾದ ಸಂಬಂಧಗಳನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ಯಲು ನಾಗರಿಕ ಅಣುಒಪ್ಪಂದಕ್ಕೆ ಸಹಿ ಹಾಕಿದ್ದಲ್ಲದೆ ರಕ್ಷಣೆ

ನವದೆಹಲಿ: ಭಾರತ ಮತ್ತು ಶ್ರೀಲಂಕಾದ ಸಂಬಂಧಗಳನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ಯಲು ನಾಗರಿಕ ಅಣುಒಪ್ಪಂದಕ್ಕೆ ಸಹಿ ಹಾಕಿದ್ದಲ್ಲದೆ ರಕ್ಷಣೆ ಮತ್ತು ಭದ್ರತಾ ಸಂಬಂಧವನ್ನು ವೃದ್ಧಿಸಿಕೊಳ್ಳಲು ಎರಡೂ ದೇಶಗಳು ನಿರ್ಧರಿಸಿವೆ.

ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಶ್ರೀಲಂಕಾದ ಅಧ್ಯಕ್ಷ ಮೈತ್ರಿಪಾಲ ಸಿರಿಸೇನ ಅವರ ಮಾತುಕತೆಯ ನಂತರ ಈ ಘೋಷಣೆಯನ್ನು ಮಾಡಲಾಯಿತು. ಮೀನುಗಾಗರ ಸಮಸ್ಯೆಯನ್ನು ಮಾನವೀಯತೆಯ ನಡೆಯಿಂದ ಬಗೆಹರಿಸಿಕೊಳ್ಳಲು ಎರಡೂ ದೇಶದ ನಾಯಕರು ತಮ್ಮ ಬದ್ಧತೆಯನ್ನು ಚರ್ಚಿಸಿದರು.

"ನಾಗರಿಕ ಅಣು ಒಪ್ಪಂದದಲ್ಲಿನ ದ್ವಿಪಕ್ಷೀಯ ಸಂಬಂಧ ಎರಡೂ ದೇಶಗಳ ಪರಸ್ಪರ ನಂಬಿಕೆಯನ್ನು ವ್ಯಕ್ತಪಡಿಸುತ್ತದೆ. ಶ್ರೀಲಂಕಾ ಸಹಿ ಮಾಡಿರುವ ಈ ಮಟ್ಟದ ಮೊದಲ ಒಪ್ಪಂದ ಇದು. ಇದು ಕೃಷಿ, ಆರೋಗ್ಯ ಸೇರಿದಂತೆ ದ್ವಿಪಕ್ಷೀಯ ಸಂಬಂಧಗಳಲ್ಲಿ ಹೊಸ ಭರವಸೆ ಹುಟ್ಟಿಸುತ್ತದೆ" ಎಂದು ಪ್ರಧಾನಿ ಮೋದಿ ಚರ್ಚೆಯ ನಂತರ ವರದಿಗಾರರಿಗೆ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT