ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋದಿಯಾ 
ಪ್ರಧಾನ ಸುದ್ದಿ

ಎಎಪಿ ಮೊದಲ ದಿನ: ದೆಹಲಿ ಸೆಕ್ರೆಟರಿಯಟ್ ಗೆ ಮಾಧ್ಯಮ ಪ್ರವೇಶ ನಿರಾಕರಣೆ

ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಮೊದಲ ದಿನವಾದ ಇಂದು ದೆಹಲಿ ಸೆಕ್ರೆಟರಿಯಟ್ ಗೆ ಮಾಧ್ಯಮ ಪ್ರವೇಶವನ್ನು ನಿರಾಕರಿಸಲಾಗಿದೆ.

ನವದೆಹಲಿ: ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಮೊದಲ ದಿನವಾದ ಇಂದು ದೆಹಲಿ ಸೆಕ್ರೆಟರಿಯಟ್ ಗೆ ಮಾಧ್ಯಮ ಪ್ರವೇಶವನ್ನು ನಿರಾಕರಿಸಲಾಗಿದೆ.

ದಿನಪತ್ರಿಕೆ ಮತ್ತು ಟಿ ವಿ ಮಾಧ್ಯಮದ ಪತ್ರಕರ್ತರಿಬ್ಬರಿಗೂ ಪ್ರವೇಶ ನಿರಾಕರಿಸಲಾಯಿತು.

"ಪತ್ರಕರ್ತರನ್ನು ಒಳಗೆ ಬಿಡದಂತೆ ನಮಗೆ ಸರ್ಕಾರದ ಹಿರಿಯ ಅಧಿಕಾರಿಗಳಿಂದ ಆದೇಶವಿದೆ" ಎಂದು ಭದ್ರತಾ ಸಿಬ್ಬಂದಿ ಪ್ರವೇಶ ನಿರಾಕರಿಸಿದ್ದಾರೆ. ಈ ಆದೇಶ ಮಾತಿನ ಆದೇಶ ಎಂದು ಅವರು ತಿಳಿಸಿದ್ದಾರೆ.

ಇದರ ಪ್ರತಿಕ್ರಿಯೆಗಾಗಿ ಹಿರಿಯ ಅಧಿಕಾರಿಗಳನ್ನು ಸಂಪರ್ಕಿಸಲು ಸಾಧ್ಯವಾಗಿಲ್ಲ.

ಸರ್ಕಾರ ಸುಮಾರು ೪:೩೦ ಘಂಟೆಗೆ ಸಭೆ ಸೇರಲಿದ್ದು ಕೂಡಲೆ ಮಾಡಬೇಕಾದ ಕೆಲಸಗಳ ಬಗ್ಗೆ ಸಂಪುಟ ಸದಸ್ಯರು ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ.

ಸಭೆಯ ನಂತರ ಉಪಮುಖ್ಯಮಂತ್ರಿ ಮನೀಶ್ ಸಿಸೋದಿಯಾ ಪತ್ರಿಕಾ ಗೋಷ್ಠಿ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.

ಈ ಮಧ್ಯೆ ದೆಹಲಿ ಪೊಲೀಸ್ ಆಯುಕ್ತ ಬಿ ಎಸ್ ಬಸ್ಸಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಸೆಕ್ರೆಟರಿಯಟ್ ನಲ್ಲಿ ೧೧:೪೫ಕ್ಕೆ ಭೇಟಿ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

SCROLL FOR NEXT