ಪ್ರಧಾನಿ ನರೇಂದ್ರ ಮೋದಿ 
ಪ್ರಧಾನ ಸುದ್ದಿ

ನೇತಾಜಿ ಕಡತಗಳನ್ನು ಬಹಿರಂಗಪಡಿಸುವ ಅಧಿಕಾರ ಪ್ರಧಾನಿಗಿಲ್ಲ: ಪ್ರಧಾನಮಂತ್ರಿ ಕಾರ್ಯಾಲಯ

ನೇತಾಜಿ ಸುಭಾಷ್ ಚಂದ್ರ ಬೋಸ್ ಅವರು ನಿಘೂಡವಾಗಿ ಕಾಣೆಯಾದ ಮಾಹಿಗಳನ್ನೊಳಗೊಂಡ ರಹಸ್ಯ ಕಡತಗಳನ್ನು ಬಹಿರಂಗಪಡಿಸುವ ಅಧಿಕಾರ

ಕೋಲ್ಕತ್ತ: ನೇತಾಜಿ ಸುಭಾಷ್ ಚಂದ್ರ ಬೋಸ್ ಅವರು ನಿಘೂಡವಾಗಿ ಕಾಣೆಯಾದ ಮಾಹಿಗಳನ್ನೊಳಗೊಂಡ ರಹಸ್ಯ ಕಡತಗಳನ್ನು ಬಹಿರಂಗಪಡಿಸುವ ಅಧಿಕಾರ ಪ್ರಧಾನಮಂತ್ರಿಗಳಿಗೆ ಇಲ್ಲ ಎಂದು ಮಾಹಿತಿ ಹಕ್ಕು ಕಾಯ್ದೆಯಡಿ ಸಲ್ಲಿಸಿದ್ದ ಅರ್ಜಿಯೊಂದಕ್ಕೆ ಪ್ರಧಾನ ಮಂತ್ರಿ ಕಾರ್ಯಾಲಯ ಉತ್ತರಿಸಿದೆ.

"ಈ ಕಡತಗಳನ್ನು ಬಹಿರಂಗಗೊಳಿಸಿ, ರಾಷ್ಟ್ರೀಯ ಪತ್ರಾಗಾರಗಳಿಗೆ ಸೇರಿಸುವ ವಿಷೇಶ ಅಧಿಕಾರ ಪ್ರಧಾನ ಮಂತ್ರಿಯವರಿಗೆ ಇದೆಯೇ" ಎಂದು ಪ್ರಶ್ನಿಸಿ ತಿರುವನಂತಪುರ ಮೂಲದ ಐಟಿ ತಂತ್ರಜ್ಞ ಶ್ರೀಜಿತ್ ಪಣಿಕ್ಕರ್ ಮಾಹಿತಿ ಹಕ್ಕು ಕಾಯ್ದೆಯಡಿ ಅರ್ಜಿ ಸಲ್ಲಿಸಿದ್ದರು.

ಕಳೆದ ವರ್ಷ ದೆಹಲಿ ಮೂಲದ ಆರ್ ಟಿ ಐ ಕಾರ್ಯಕರ್ತ ಸುಭಾಷ್ ಅಗರವಾಲ್, ನೇತಾಜಿ ಸಂಬಂಧಪಟ್ಟಂತೆ ದಾಖಲೆಗಳನ್ನು ಬಹಿರಂಗಪಡಿಸುವಂತೆ ಅರ್ಜಿ ಸಲ್ಲಿಸಿದ್ದರು. "ಈ ದಾಖಲೆಗಳನ್ನು ಬಹಿರಂಗಪಡಿಸಿದರೆ ಹಲವು ರಾಷ್ಟ್ರಗಳ ಜೊತೆಗಿನ ವಿದೇಶ ಸಂಬಂಧ ಹದಗೆಡುತ್ತದೆ" ಎಂದು ಹೇಳಿ ಪ್ರಧಾನ ಮಂತ್ರಿ ಕಾರ್ಯಾಲಯ ಮನವಿ ತಿರಸ್ಕರಿಸಿತ್ತು.

ಬ್ರಿಟಿಶ್ ಆಳ್ವಿಕೆ ಸಮಯದಲ್ಲಿ ಕೊಲ್ಕಾತ್ತಾದಲ್ಲಿ ಗೃಹಬಂಧನದಲ್ಲಿದ್ದ ನೇತಾಜಿ ತಪ್ಪಿಸಿಕೊಂಡು ಜಪಾನ್ ಸಹಾಯದಿಂದ ಇಂಡಿಯನ್ ನ್ಯಾಷನಲ್ ಆರ್ಮಿ ಸ್ಥಾಪಿಸಿದ್ದರು. ೧೯೪೫ ರಲ್ಲಿ ನೇತಾಜಿ ಕಾಣೆಯಾದ ಮೇಲೆ ಅವರ ಇರುವಿಕೆಯ ಬಗ್ಗೆ ತಿಳಿದದ್ದು ಅತ್ಯಲ್ಪ. ನೇತಾಜಿ ಆಗಸ್ಟ್ ೧೮ ೧೯೪೫ ರಲ್ಲಿ ತೈವಾನ್ ನ ತೈಹೋಕು ವಿಮಾನ ನಿಲ್ದಾಣದಲ್ಲಿ ವಿಮಾನ ಅಪಘಾತದಿಂದ ಸಾವನ್ನಪ್ಪಿದರು ಎಂದು ಹೇಳಲಾಗುತ್ತಿತ್ತು. ಆದರೆ ಇದರ ತನಿಖೆಗೆ ನೇಮಿಸಿದ್ದ ಮುಖರ್ಜು ಕಮಿಷನ್ ಈ ವರದಿಯನ್ನು ಸಾರಾಸಗಟಾಗಿ ತಿರಸ್ಕರಿಸಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

ಡಿ ಕೆ ಶಿವಕುಮಾರ್ ಹಿಂದೂ ಜನರ ಭಾವನೆಗಳಿಗೆ ನೋವುಂಟುಮಾಡಿದ್ದು ಕ್ಷಮೆಯಾಚಿಸಬೇಕು: ಶೋಭಾ ಕರಂದ್ಲಾಜೆ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

SCROLL FOR NEXT