ಕಡತ ಸೋರಿಕೆ (ಸಾಂದರ್ಭಿಕ ಚಿತ್ರ) 
ಪ್ರಧಾನ ಸುದ್ದಿ

ಪೆಟ್ರೋಲಿಯಂ ಸಚಿವಾಲಯದ ನೌಕರರಿಂದ ಸರ್ಕಾರಿ ಕಡತಗಳ ಸೋರಿಕೆ!

ಸರ್ಕಾರದ ಗೋಪ್ಯವಾದ ಕಡತಗಳನ್ನು ಸೋರಿಕೆ ಮಾಡಿದ ಆರೋಪದಲ್ಲಿ ಪೆಟ್ರೋಲಿಯಂ ಸಚಿವಾಲಯದ ಇಬ್ಬರು ನೌಕರರು...

ನವದೆಹಲಿ: ಸರ್ಕಾರದ ಗೋಪ್ಯವಾದ ಕಡತಗಳನ್ನು ಸೋರಿಕೆ ಮಾಡಿದ ಆರೋಪದಲ್ಲಿ ಪೆಟ್ರೋಲಿಯಂ ಸಚಿವಾಲಯದ ಇಬ್ಬರು ನೌಕರರು ಸೇರಿದಂತೆ ಇತರ ಮೂವರನ್ನು ದೆಹಲಿ ಪೊಲೀಸರು ಬಂಧಿಸಿರುವ ಬಗ್ಗೆ ವರದಿಯಾಗಿದೆ.

ವರದಿಗಳ ಪ್ರಕಾರ ದೆಹಲಿ ಪೊಲೀಸರು ಗುರುವಾರ ಶಾಸ್ತ್ರೀ ಭವನಕ್ಕೆ ದಾಳಿ ಮಾಡಿದ್ದು, ಆರೋಪದ ಆಧಾರದ ಮೇರೆಗೆ ಕಚೇರಿಯ ಜವಾನ ಮತ್ತು ಗುಮಾಸ್ತನನ್ನು ಬಂಧಿಸಿದ್ದಾರೆ.

ಆದಾಗ್ಯೂ, ಪೆಟ್ರೋಲಿಯಂ ಸಚಿವಾಲಯದ ಉನ್ನತ ಅಧಿಕಾರಿಗಳು ಕೂಡಾ ಈ ಕೃತ್ಯದಲ್ಲಿ ಭಾಗಿಯಾಗಿದ್ದಾರೆ ಎಂದು ಬಂಧಿತ ನೌಕರರು ಆರೋಪಿಸಿದ್ದಾರೆ. ಇವರ ಹೊರತಾಗಿ ಬಂಧಿತರಾದ ಮೂವರು ವ್ಯಕ್ತಿಗಳು ಪತ್ರಕರ್ತರೆಂದು ಹೇಳಲಾಗುತ್ತಿದೆ.

ಬಂಧಿತ ವ್ಯಕ್ತಿಗಳನ್ನು ಶೀಘ್ರವೇ ವಿಚಾರಣೆಗೊಳಪಡಿಸಲಾಗುವುದು.

ವಾಣಿಜ್ಯ ವ್ಯವಹಾರ ಕೇಂದ್ರಗಳಿಗೆ ಈ ಗೋಪ್ಯ ಕಡತಗಳ ಮಾಹಿತಿಯನ್ನು ಸೋರಿಕೆ ಮಾಡಲಾಗಿತ್ತು ಎಂದು ಹೇಳಲಾಗುತ್ತಿದೆ. ಇಷ್ಟೆಲ್ಲಾ ಬೆಳವಣಿಗೆ ನಡೆಯುತ್ತಿದ್ದರೂ ಪೆಟ್ರೋಲಿಯಂ ಸಚಿವಾಲಯ ಇಲ್ಲಿಯವರೆಗೆ ಯಾವುದೇ ರೀತಿಯ ಪ್ರತಿಕ್ರಿಯೆ ನೀಡಿಲ್ಲ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಕಾವೇರಿ ನಿವಾಸದಲ್ಲಿ ಬ್ರೇಕ್‌ಫಾಸ್ಟ್ ಮೀಟಿಂಗ್ ಆರಂಭ, ಡಿಕೆಶಿ ಎದುರೇ ‘5 ವರ್ಷ ಸಿದ್ದರಾಮಯ್ಯ ಸಿಎಂ’ ಘೋಷಣೆ ಕೂಗಿದ ಅಭಿಮಾನಿಗಳು..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

ಕರ್ನಾಟಕ ಕಾಂಗ್ರೆಸ್‌ನಲ್ಲಿ ಮತ್ತೊಂದು ಪವರ್ ಶಿಫ್ಟ್: ಅಹಿಂದ ಸಮೀಕರಣಕ್ಕೆ ಮಾಸ್ಟರ್‌ಪ್ಲ್ಯಾನ್, ಸತೀಶ್‌ ಜಾರಕಿಹೊಳಿಗೆ KPCC ಜವಾಬ್ದಾರಿ?

SCROLL FOR NEXT