ಅಮರ್ತ್ಯ ಸೇನ್ 
ಪ್ರಧಾನ ಸುದ್ದಿ

ಎರಡನೇ ಅವಧಿಗೆ ನಳಂದಾ ವಿವಿ ಕುಲಪತಿಯಾಗಲ್ಲ: ಅಮರ್ತ್ಯ ಸೇನ್

ನಳಂದಾ ವಿಶ್ವವಿದ್ಯಾನಿಲಯದ ಕುಲಪತಿಯಾಗಿ ನಾನು ಮುಂದುವರಿಯುವುದು ನರೇಂದ್ರ ಮೋದಿ ಸರ್ಕಾರಕ್ಕೆ ಇಷ್ಟವಿಲ್ಲ ಎಂದು ...

ನವದೆಹಲಿ: ನಳಂದಾ ವಿಶ್ವವಿದ್ಯಾನಿಲಯದ ಕುಲಪತಿಯಾಗಿ ನಾನು ಮುಂದುವರಿಯುವುದು ನರೇಂದ್ರ ಮೋದಿ ಸರ್ಕಾರಕ್ಕೆ ಇಷ್ಟವಿಲ್ಲ ಎಂದು ನೋಬೆಲ್ ಪ್ರಶಸ್ತಿ ವಿಜೇತ ಅಮರ್ತ್ಯ ಸೇನ್ ಹೇಳಿದ್ದಾರೆ.

ನಳಂದಾ ವಿವಿಯ ಕುಲಪತಿಯಾಗಿ ಎರಡನೇ ಅವಧಿಯಲ್ಲಿ ಮುಂದುವರಿಯಲು ಇಚ್ಛಿಸದ ಸೇನ್ ಇದೀಗ ಕುಲಪತಿಯ ಉಮೇದುವಾರಿಕೆ ವಾಪಸ್ ತೆಗೆದುಕೊಂಡಿದ್ದಾರೆ.

ಮೋದಿಯವರನ್ನು ಟೀಕಿಸುತ್ತಲೇ ಬರುತ್ತಿದ್ದ ಅಮರ್ತ್ಯ ಸೇನ್ ಎರಡನೇ ಅವಧಿಗೆ ಹುದ್ದೆಗೆ ಅಪೇಕ್ಷೆ ಸಲ್ಲಿಸದಂತೆ ಕೇಂದ್ರದಲ್ಲಿನ ಬಿಜೆಪಿ ಸರ್ಕಾರ ಒತ್ತಡ ಹೇರುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.

ಜನವರಿ 13ರಂದು ನಳಂದಾ ವಿವಿಯ ಆಡಳಿತ ಮಂಡಳಿಯ ಸಭೆಯಲ್ಲಿ ತಾನು ಎರಡನೇ ಅವಧಿಗೆ ವಿವಿಯ ಕುಲಪತಿಯಾಗಿ ಮುಂದುವರಿಯುವಂತೆ ನಡೆದಿರುವ ಸರ್ವಾನುಮತದ ಆಯ್ಕೆಯ ಹೊರತಾಗಿಯೂ ತಾನು ಎರಡನೇ ಅವಧಿಗೆ ಹುದ್ದೆಯಲ್ಲಿ ಮುಂದುವರಿಯಲು ಬಯಸುವುದಿಲ್ಲ ಎಂದು ಸೇನ್ ವಿವಿಯ ಆಡಳಿತ ಮಂಡಳಿಗೆ ಬರೆದಿರುವ 5 ಪುಟಗಳ ಪತ್ರದಲ್ಲಿ ಹೇಳಿದ್ದಾರೆ.

ಸರ್ಕಾರದ ಅನುಮೋದನೆ ಇಲ್ಲದಿರುವ ಕಾರಣಕ್ಕೆ ಸಂದರ್ಶಕ, ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರಿಗೆ ಕೂಡಾ ನಾನು ಎರಡನೇ ಅವಧಿಗೆ ಕುಲಪತಿಯಾಗಿ ಮುಂದುವರಿಯುವುದಕ್ಕೆ ತಮ್ಮ ಒಪ್ಪಿಗೆಯನ್ನು ನೀಡಲು ಸಾಧ್ಯವಾಗಿಲ್ಲ ಎಂದು ಸೇನ್  ತಮ್ಮ ಪತ್ರದಲ್ಲಿ ಆರೋಪಿಸಿದ್ದಾರೆ.

ಆಡಳಿತ ಮಂಡಳಿಯ ಸರ್ವಾನುಮತದ ನಿರ್ಣಯಕ್ಕೆ ಅನುಮೋದನೆ ನೀಡುವ ಅಥವಾ ನೀಡದಿರುವ ಅಧಿಕಾರ ಕೇಂದ್ರ ಸರ್ಕಾರದ ಕೈಯಲ್ಲಿದ್ದರೂ ಅದು ವಿಳಂಬ ನೀತಿಯನ್ನು ಅನುಸರಿಸುತ್ತಿರುವುದು ವಿವಿಯ ಆಡಳಿತದ ಮಂಡಳಿಯ ನಿರ್ಧಾರವನ್ನು ನಿರಸನಗೊಳಿಸುವ ತಂತ್ರವೇ ಆಗಿಗೆ ಎಂದು ಸೇನ್ ಟೀಕಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT