ಶಂತನು ಸೈಕಿಯಾ 
ಪ್ರಧಾನ ಸುದ್ದಿ

ಮಾಹಿತಿ ಸೋರಿಕೆ: ಇದು ರು.10,000 ಕೋಟಿಯ ಹಗರಣ!

ಪೆಟ್ರೋಲಿಯಂ ಸಚಿವಾಲಯದ ರಹಸ್ಯ ದಾಖಲೆಗಳನ್ನು ಸೋರಿಕೆ ಮಾಡಿದ ಪ್ರಕರಣಗಳಲ್ಲಿ ಬಂಧಿತರಾಗಿರುವ ಶಂತನು ಸೈಕಿಯಾ...

ನವದೆಹಲಿ: ಪೆಟ್ರೋಲಿಯಂ ಸಚಿವಾಲಯದ ರಹಸ್ಯ ದಾಖಲೆಗಳನ್ನು ಸೋರಿಕೆ ಮಾಡಿದ ಪ್ರಕರಣಗಳಲ್ಲಿ ಬಂಧಿತರಾಗಿರುವ ಶಂತನು ಸೈಕಿಯಾ ಎಂಬ ಪತ್ರಕರ್ತ ವಿಚಾರಣೆ ವೇಳೆ ತಾನು ಈ ಹಗರಣದಲ್ಲಿ ಭಾಗಿಯಾಗಿಲ್ಲ. ನನಗೆ ರಹಸ್ಯ ದಾಖಲೆಗಳನ್ನು ಸೋರಿಕೆ ಮಾಡಿ ಏನಾಗಬೇಕಿದೆ? ನಾನು ಅಂಥಾ ಕೆಲಸ ಮಾಡಿಲ್ಲ ಎಂದು ಹೇಳಿದ್ದಾನೆ.

ನಾನು ಈ ಪ್ರಕರಣದ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದೆ ಅಷ್ಟೇ. ಇದು ರು.  10,000 ಕೋಟಿಯ ಹಗರಣ. ಈ ಹಗರಣದ ಬಗ್ಗೆ ನಾನು ತನಿಖೆ ನಡೆಸುತ್ತಿದ್ದೆ ಎಂದು ದೆಹಲಿ ಪೊಲೀಸ್ ಕ್ರೈಂ ಬ್ರಾಂಚ್ ಆಫೀಸಿನ ಹೊರಗೆ ಮಾಧ್ಯಮದವರೊಂದಿಗೆ ಮಾತನಾಡಿದ ಸೈಕಿಯಾ ಹೇಳಿದ್ದಾರೆ.

ಕಾರ್ಪೊರೇಟ್ ಬೇಹುಗಾರಿಕೆ ಹಗರಣದಲ್ಲಿ ಭಾಗಿಯಾಗಿದ್ದು, ಅಪರಾಧ ಸಾಬೀತಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಈ ಹಗರಣದಲ್ಲಿ ಯಾರನ್ನೂ ನಾವು ಬಿಡುವುದಿಲ್ಲ. ಅವರಿಗೆ ಕಠಿಣ ಶಿಕ್ಷೆ ಸಿಗುವಂತೆ ನೋಡಿಕೊಳ್ಳಲಾಗುವುದು ಎಂದು ಕೇಂದ್ರ ಗೃಹ ಸಚಿವ ರಾಜ್‌ನಾಥ್ ಸಿಂಗ್ ಗುಡುಗಿದ ಬೆನ್ನಲ್ಲೇ ಸೈಕಿಯಾ ಈ ಮಾಹಿತಿಯನ್ನು ಮಾಧ್ಯಮದವರಲ್ಲಿ ಬಹಿರಂಗ ಪಡಿಸಿದ್ದಾರೆ.

ಕಾರ್ಪೊರೇಟ್ ಬೇಹುಗಾರಿಕೆ ಹಗರಣದಲ್ಲಿ ತೈಲ ಸಚಿವಾಲಯದ ಇಬ್ಬರು ಅಧಿಕಾರಿಗಳು, ಇಬ್ಬರು ಮಧ್ಯವರ್ತಿಗಳು ಹಾಗೂ ರಿಲಯನ್ಸ್ ಇಂಡಸ್ಟ್ರೀಸ್‌ನ ಒಬ್ಬ ಎಕ್ಸಿಕ್ಯೂಟಿವ್‌ನನ್ನು ಗುರುವಾರ ಬಂಧಿಸಲಾಗಿತ್ತು. ನಾನಾ ಕಂಪನಿಗಳ ಒಟ್ಟು ಐವರು ಎಕ್ಸಿಕ್ಯೂಟಿವ್‌ಗಳ  ವಿರುದ್ಧ ಕ್ರಿಮಿನಲ್ ಸಂಚು, ಕದ್ದ ವಸ್ತುಗಳ ಬಳಕೆ ಮುಂತಾದ ಗುರುತರವಾದ ಆರೋಪಗಳನ್ನು ದಾಖಲಿಸಲಾಗಿದೆ ಎಂದು ದೆಹಲಿ ಪೊಲೀಸ್ ಆಯುಕ್ತ ಬಿ.ಸಿ ಬಸ್ಸಿ ಹೇಳಿದ್ದಾರೆ.

ಪೆಟ್ರೋಲಿಯಂ ಖಾತೆಯ ರಹಸ್ಯ ದಾಖಲೆಗಳನ್ನು ಕದ್ದು ಹಣಕ್ಕಾಗಿ ಮಾರಲಾಗಿರುವ ಪ್ರಕರಣ ಇದಾಗಿದ್ದು, ಈ ಬಗ್ಗೆ ತನಿಖೆ  ನಡೆಸುತ್ತಿರುವ ದೆಹಲಿ ಕ್ರೈಂ ಬ್ರಾಂಚ್ ತನಿಖೆಯನ್ನು ತೀವ್ರಗೊಳಿಸಿದೆ. ಶನಿವಾರ ನೋಯ್ಡಾದಲ್ಲಿರುವ ಪೆಟ್ರೋಕೆಮಿಕಲ್ ಸಂಸ್ಥೆಯೊಂದರ ಮೇಲೆ ದಾಳಿ ನಡೆಸಿದ ಪೊಲೀಸರು ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.

ಇದೀಗ ಪ್ರಸ್ತುತ ಹಗರಣದಲ್ಲಿ ಶಂತನು ಸೈಕಿಯಾ, ಪ್ರಯಾಸ್ ಜೈನ್, ರಿಲಯನ್ಸ್ ಇಂಡಸ್ಟ್ರೀಸ್‌ನ ಕಾರ್ಪೊರೇಟ್ ವ್ಯವಹಾರಗಳ ವ್ಯವಸ್ಥಾಪಕ ಶೈಲೇಶ್ ಸಕ್ಸೇನಾ, ಜುಬಿಲೆಂಟ್ ಎನರ್ಜಿಯ ಸೀನಿಯರ್ ಎಕ್ಸಿಕ್ಯುಟಿವ್ ಸುಭಾಶ್ಚಂದ್ರ, ರಿಲಯನ್ಸ್ ಎಡಿಎಜಿ ರಿಶಿ ಆನಂದ್, ಎಸ್ಸಾರ್ ಡಿಜಿಎಂ ವಿನಯ್ ಮತ್ತು ಕೇರ್ನ್ಸ್ ಇಂಡಿಯಾ ಜಿಎಂ ಕೆ.ಕೆ ನಾಯ್ಕ್ ಬಂಧಿತ ವ್ಯಕ್ತಿಗಳಾಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT