ದಿಗ್ವಿಜಯ್ ಸಿಂಗ್ 
ಪ್ರಧಾನ ಸುದ್ದಿ

ಸಿಎಂ ಬದಲಿಸುವ ಯಾವ ಆಲೋಚನೆಯೂ ನಮ್ಮ ಮುಂದೆ ಇಲ್ಲ: ದಿಗ್ವಿಜಯ್ ಸಿಂಗ್

ರಾಜ್ಯದಲ್ಲಿ ದಲಿತರಿಗೆ ಮುಖ್ಯಮಂತ್ರಿ ಪಟ್ಟ ನೀಡಬೇಕು ಎಂಬ ಬೇಡಿಕೆ ಬಗ್ಗೆ ಅಚ್ಚರಿ ವ್ಯಕ್ತಪಡಿಸರುವ ರಾಜ್ಯ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ಅವರು,...

ಬೆಂಗಳೂರು: ರಾಜ್ಯದಲ್ಲಿ ದಲಿತರಿಗೆ ಮುಖ್ಯಮಂತ್ರಿ ಪಟ್ಟ ನೀಡಬೇಕು ಎಂಬ ಬೇಡಿಕೆ ಬಗ್ಗೆ ಅಚ್ಚರಿ ವ್ಯಕ್ತಪಡಿಸರುವ ರಾಜ್ಯ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬದಲಾಯಿಸುವ ಯಾವ ಆಲೋಚನೆಯೂ ನಮ್ಮ ಮುಂದೆ ಇಲ್ಲ ಎಂದು ಭಾನುವಾರ ಸ್ಪಷ್ಟಪಡಿಸಿದ್ದಾರೆ.

ಇಂದು ಸಂಜೆ ದೇವನಹಳ್ಳಿಯ ಖಾಸಗಿ ಹೋಟೆಲ್‌ನಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ದಿಗ್ವಿಜಯ್ ಸಿಂಗ್ ಅವರು, ದಲಿತರಿಗೆ ಸಿಎಂ ಸ್ಥಾನ ನೀಡಬೇಕು ಎಂಬ ಬೇಡಿಕೆ ಕುರಿತು ಮಾಧ್ಯಮಗಳ ವರದಿ ನೋಡಿ ನನಗೆ ಆಶ್ಚರ್ಯವಾಯಿತು ಎಂದಿದ್ದಾರೆ.

ಪ್ರತಿ ಸಮುದಾಯಕ್ಕೂ ಅವರ ರಾಜಕೀಯ ಆಕಾಂಕ್ಷೆ ಸಹಜ. ಆದರೆ ಸದ್ಯಕ್ಕೆ ಸಿಎಂ ಬದಲಿಸುವ ಯಾವ ಆಲೋಚನೆಯೂ ನಮ್ಮ ಮುಂದೆ ಇಲ್ಲ. ಸಿದ್ದರಾಮಯ್ಯ ಅವರನ್ನು ಸರ್ವಾನುಮತದಿಂದ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ. ಅವರು ರಾಜ್ಯದಲ್ಲಿ ಉತ್ತಮ ಆಡಳಿತ ನೀಡುತ್ತಿದ್ದಾರೆ. ಅಲ್ಲದೆ ದಲಿತರ ಹಾಗೂ ಹಿಂದುಳಿದವರಿಗಾಗಿ ಸಿದ್ದರಾಮಯ್ಯ ಶ್ರಮಿಸುತ್ತಿದ್ದಾರೆ ಎಂದು ದಿಗ್ವಿಜಯ್ ಹೇಳಿದರು.

ಇದೇ ವೇಳೆ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರ ಶ್ರಮವನ್ನು ಶ್ಲಾಘಿಸಿದ ದಿಗ್ಗಿ, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಪರಮೇಶ್ವರ ಸಾಕಷ್ಟು ಶ್ರಮಿಸಿದ್ದಾರೆ. ಹಾಗೆಯೇ ಪಕ್ಷಕ್ಕಾಗಿ ದುಡಿದ ಲಕ್ಷಾಂತರ ಕಾರ್ಯಕರ್ತರ ಶ್ರಮವನ್ನು ಮರೆಯಲು ಸಾಧ್ಯವೆ? ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ ಭೀಕರ ಪ್ರವಾಹದಲ್ಲಿ 8 ಮಂದಿ ಸಾವು; 105 ಭಾರತೀಯರು ನಾಪತ್ತೆ: ಬಿಹಾರದಲ್ಲಿ ಕಟ್ಟೆಚ್ಚರ!

'ವಿರೋಧವಿದ್ದರೂ ಮೋಹನ್ ಭಾಗವತ್ ಅಮೆರಿಕಕ್ಕೆ ಯಾಕೆ ಹೋದ್ರು? ಮಹಾರಾಷ್ಟ್ರ ಕಾಂಗ್ರೆಸ್ ಶಾಸಕ ನಾನಾ ಪಟೋಲೆ ಪ್ರಶ್ನೆ!

ದೇಶಾದ್ಯಂತ H1N1 ಪ್ರಕರಣಗಳ ಏರಿಕೆ: ಸೋಂಕಿನ ಲಕ್ಷಣಗಳು, ಸಾರ್ವಜನಿಕರು ಪಾಲಿಸಬೇಕಾದ ಮುನ್ನೆಚ್ಚರಿಕಾ ಕ್ರಮಗಳು, IMA ಸಲಹೆ ಏನು?

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

'ಟಾಕ್ಸಿಕ್' ಸಿನಿಮಾ ವಿರುದ್ಧ ಸುಳ್ಳು ಮಾಹಿತಿ ಪ್ರಕಟಿಸದಂತೆ ಕೋರ್ಟ್ ತಡೆಯಾಜ್ಞೆ!