ಸಾಂದರ್ಭಿಕ ಚಿತ್ರ 
ಪ್ರಧಾನ ಸುದ್ದಿ

ವಿಮಾನ ತಪ್ಪಿಸಿಕೊಂಡದ್ದಕ್ಕೆ ಹುಸಿ ಬಾಂಬ್ ಕರೆ ಮಾಡಿದ ಈಜು ತರಬೇತುದಾರ

ಹುಸಿ ಬಾಂಬ್ ಕರೆಯಿಂದ, ರಾಂಚಿಯಿಂದ ದೆಹಲಿಗೆ ತೆರಳಬೇಕಿದ್ದ ವಿಮಾನ ತಡವಾಗಿದ್ದಲ್ಲದೆ,

ರಾಂಚಿ: ಹುಸಿ ಬಾಂಬ್ ಕರೆಯಿಂದ, ರಾಂಚಿಯಿಂದ ದೆಹಲಿಗೆ ತೆರಳಬೇಕಿದ್ದ ವಿಮಾನ ತಡವಾಗಿದ್ದಲ್ಲದೆ, ಭದ್ರತಾ ಪಡೆಗಳಿಗೆ ತಲೆನೋವಾದ ಘಟನೆ ಸೋಮವಾರ ನಡೆದಿದೆ.

ರಾಂಚಿಯಿಂದ ದೆಹಲಿಗೆ ತೆರಳಬೇಕಿದ್ದ ವಿಮಾನಕ್ಕೆ ಸರಿಯಾದ ಸಮಯಕ್ಕೆ ಬರದೆ ತಪ್ಪಿ ಹೋದದ್ದಕ್ಕೆ, ಪ್ರಯಾಣಿಕನೊಬ್ಬ ಈ ಹುಸಿ ಕರೆ ಮಾಡಿದ್ದು ಎಂದು ತಿಳಿದುಬಂದ ನಂತರ ವಿಮಾನ ನಿಲ್ದಾಣದಿಂದ ಬಂಧನಕ್ಕೊಳಗಾಗಿದ್ದಾನೆ.

ಮೂಲಗಳ ಪ್ರಕಾರ ಈ ಪ್ರಯಾಣಿಕ ಈಜು ತರಬೇತುದಾರ. ತಡವಾಗಿ ಬಂದು ಪ್ರಯಾಣ ತಪ್ಪಿಸಿಕೊಂಡದ್ದರಿಂದ ಮುಂಬೈನ ಕಾಲ್ ಸೆಂಟರ್ ಗೆ ಕರೆ ಮಾಡಿ ತಾನು ತೆರಳಬೇಕಿದ್ದ ವಿಮಾನದಲ್ಲಿ ಬಾಂಬ್ ಇದೆ ಎಂದು ಸಂಜೆ ೩ :೦೫ ಘಂಟೆಗೆ ತಿಳಿಸಿದ್ದಾನೆ.

ಆಗಲೇ ಮೇಲಕ್ಕೆ ಹಾರಿದ್ದ ವಿಮಾನವನ್ನು ರಾಂಚಿ ವಿಮಾನ ನಿಲ್ದಾಣಕ್ಕೆ ಇಳಿಸಿ ಪ್ರತ್ಯೇಕಗೊಳಿಸಿದ್ದಾರೆ. ಕೂಡಲೆ ಕಾರ್ಯಾಚರಣೆಗಿಳಿದ ಭದ್ರತಾ ಸಿಬ್ಬಂದಿ, ತಪಾಸಣೆಯ ನಂತರ ಇದು ಹುಸಿ ಕರೆ ಎಂದು ಧೃಢೀಕರಿಸಿ, ಕರೆಗಳ ತನಿಖೆ ನಡೆಸಿ ಪ್ರಯಾಣಿಕನನ್ನು ಬಂಧಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT