ಸತೀಶ್ ಜಾರಕಿಹೊಳಿ 
ಪ್ರಧಾನ ಸುದ್ದಿ

ಜಾರಕಿಹೊಳಿಗೆ ಹೆಚ್ಚುವರಿ ಖಾತೆ ನೀಡಲು ಸಿಎಂ ನಿರ್ಧಾರ

ಖಾತೆ ಬದಲಾವಣೆ ಬಯಸಿ ರಾಜಿನಾಮೆ ನೀಡಿದ್ದ ಅಬಕಾರಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಕೊನೆಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...

ಬೆಂಗಳೂರು: ಖಾತೆ ಬದಲಾವಣೆ ಬಯಸಿ ರಾಜಿನಾಮೆ ನೀಡಿದ್ದ ಅಬಕಾರಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಕೊನೆಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೆಚ್ಚುವರಿ ಖಾತೆ 'ಭಾಗ್ಯ' ದಯಪಾಲಿಸಲು ಮುಂದಾಗಿದ್ದಾರೆ.

ಈ ಸಿಎಂ ಅಧಿಕೃತವಾಗಿ ತಮ್ಮ ಕಚೇರಿಯಿಂದ ರಾಜಭವನಕ್ಕೆ ಇಂದು ಪತ್ರ ರವಾನಿಸಲು ನಿರ್ಧರಿಸಿದ್ದು, ಈ ಸಂಬಂಧ ಸಿಎಂ ನಿನ್ನೆ ತಮ್ಮ ಆಪ್ತರ ಜತೆ ಚರ್ಚಿಸಿ, ಅಂತಿಮ ನಿರ್ಧಾರ ತೆಗೆದುಕೊಂಡಿದ್ದಾರೆ.

ಸಮಾಜ ಕಲ್ಯಾ ಖಾತೆ ಕೋರಿ ಜಾರಕಿಹೊಳಿ ಅವರು ರಾಜಿನಾಮೆ ನೀಡಿದ್ದರು. ಆದರೆ ಅದು ಸಿದ್ದು ಆಪ್ತರಾದ ಆಂಜನೇಯ ಅವರ ಬಳಿ ಇದೆ. ರಾಜಿನಾಮೆ ಪ್ರಹಸನ ಮುಕ್ತಾಯಗೊಳಿಸುವಾಗ ಜಾರಕಿಹೊಳಿ ಅವರಿಗೆ ತಮ್ಮ ಬಳಿ ಇರುವ ಸಣ್ಣ ಕೈಗಾರಿಕೆ ಖಾತೆ ನೀಡುವುದಾಗಿ ಸಿದ್ದು ಭರವಸೆ ನೀಡಿದ್ದರು. ಆದರೆ ಸಮಯ ಕೂಡಿ ಬಂದಿರಲಿಲ್ಲ. ದಲಿತ ಸಿಎಂ ವಾದ ತಾರಕಕ್ಕೇರಿದ ಸಂದರ್ಭದಲ್ಲಿ ಜಾತಿ ಲೆಕ್ಕಾಚಾರ ನಡೆಸಿರುವ ಸಿದ್ದು ಬಣ ತಕ್ಷಣ ಜಾರಕಿಹೊಳಿ ಅವರಿಗೆ ಹೆಚ್ಚುವರಿ ಖಾತೆ ನೀಡಲು ಮುಂದಾಗಿದ್ದಾರೆ ಎನ್ನಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

ಅಯೋಧ್ಯೆ ಧರ್ಮಧ್ವಜದಲ್ಲಿರುವ ಕೋವಿದಾರ ಮರ: ರಾಜವೃಕ್ಷಕ್ಕೂ, ಶ್ರೀರಾಮಚಂದ್ರನಿಗೂ ಅದೆಂಥ ನಂಟು? ತ್ರೇತಾಯುಗದಲ್ಲಿದ್ದ ದೈವಿಕ ಮರದ ವಿಶೇಷತೆ ಏನು?

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

SCROLL FOR NEXT