ಬಿಜೆಪಿಯ ತಾರಾ ಪ್ರಚಾರಕಿ ಹೇಮಮಾಲಿನಿ 
ಪ್ರಧಾನ ಸುದ್ದಿ

ದೆಹಲಿಯಲ್ಲಿ ಮತದಾರರನ್ನು ಸೆಳೆಯಲು ತಾರೆಯರನ್ನು ಪ್ರಚಾರಕ್ಕಿಳಿಸಿದ ಬಿಜೆಪಿ

ಮುಂಬರುತ್ತಿರುವ ದೆಹಲಿ ವಿಧಾನಸಭಾ ಚುನಾವಣೆಗಳಲ್ಲಿ ಮತದಾರರನ್ನು

ನವದೆಹಲಿ: ಮುಂಬರುತ್ತಿರುವ ದೆಹಲಿ ವಿಧಾನಸಭಾ ಚುನಾವಣೆಗಳಲ್ಲಿ ಮತದಾರರನ್ನು ಸೆಳೆಯಲು ದೇಶದ ರಾಜಧಾನಿಯಲ್ಲಿ ಪ್ರಚಾರ ಸಭೆಗಳನ್ನು ನಡೆಸಲಿರುವ ಬಿಜೆಪಿ ಪಕ್ಷ ತಾರಾ ಲೋಕಸಭಾ ಸದಸ್ಯರಾದ ಹೇಮ ಮಾಲಿನಿ, ಶತುಘ್ನ ಸಿನ್ಹಾ, ವಿನೋದ್ ಖನ್ನ ಮತ್ತು ಸ್ಮೃತಿ ಇರಾನಿ ಇವರುಗಳಿಗೆ ದೆಹಲಿಯಲ್ಲಿ ಬೀಡುಬಿಟ್ಟು ಹೆಚ್ಚೆಚ್ಚು ಪ್ರಚಾರಸಭೆಗಳನ್ನು ನಡೆಸುವಂತೆ ಸೂಚಿಸಿದೆ.

ಬಿಜೆಪಿ ಹಿರಿಯ ಮುಖಂಡರೊಬ್ಬರ ಪ್ರಕಾರ, ಪಕ್ಷ ಇಲ್ಲಿಯವರೆಗೂ ೧೮ ತಾರಾ ಪ್ರಚಾರಕರನ್ನು ಪಟ್ಟಿ ಮಾಡಿದ್ದು, ಈ ನಡೆ ಮತದಾರರನ್ನು ಸೆಳೆಯಲಿದೆ ಎಂದಿದ್ದಾರೆ. ಈ ಪಟ್ಟಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಪಕ್ಷದ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಕೂಡ ಇದ್ದಾರೆ.

"ಆಮ್ ಆದ್ಮಿ ಪಕ್ಷದ ಮುಖಂಡ ಅರವಿಂದ್ ಖೇಜ್ರಿವಾಲ್ ಅವರ ಪ್ರಚಾರ ಸಭೆಗಳನ್ನು ಮೀರಿಸಲು ಪಕ್ಷ ಸನ್ನದ್ಧವಾಗಿದ್ದು, ನಮ್ಮ ತಾರಾ ಪ್ರಚಾರಕರು ಹೆಚ್ಚಿನ ಸಂಖ್ಯೆಯಲ್ಲಿ ಮತದಾರರನ್ನು ಸೆಳೆಯಲಿದ್ದಾರೆ" ಎಂದು ಬಿಜೆಪಿ ಮುಖಂಡ ತಿಳಿಸಿದ್ದಾರೆ.

ಈಶಾನ್ಯ ದೆಹಲಿಯ ಲೋಕಸಭಾ ಸದಸ್ಯ ಹಾಗೂ ಭೋಜ್ ಪುರಿ ಗಾಯಕ ಮನೋಜ್ ತಿವಾರಿ ಕೂಡ ಈ ಪಟ್ಟಿಯಲ್ಲಿದ್ದಾರೆ ಎಂದು ತಿಳಿದು ಬಂದಿದೆ. ೧೬ ವರ್ಷದ ನಂತರ ಅಧಿಕಾರಕ್ಕೆ ಹಿಂದಿರುಗಲು ಹಾತೊರೆಯುತ್ತಿರುವ ಬಿಜೆಪಿ ಪಕ್ಷ ತನ್ನೆಲ್ಲ ಶಕ್ತಿಯನ್ನು ಈ ಚುನಾವಣೆಗೆ ತೊಡಗಿಸಲಿದೆ. ಜನವರಿ ೧೦ ರಂದು ರಾಮಲೀಲ ಮೈದಾನದಲ್ಲಿ ಪ್ರಧಾನಿ ಮೋದಿ ಅವರು ಬೃಹತ್ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡುವುದರೊಂದಿಗೆ ಪ್ರಚಾರಕ್ಕೆ ಅಧಿಕೃತ ಚಾಲನೆ ಸಿಗಲಿದೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT