ಸಲ್ಮಾನ್ ಮುಂಬೈ ನಿವಾಸದ ಎದುರು ತಮಿಳು ಸಂಘಟನೆಗಳ ಪ್ರತಿಭಟನೆ (ಸಂಗ್ರಹ ಚಿತ್ರ) 
ಪ್ರಧಾನ ಸುದ್ದಿ

ನಟ ಸಲ್ಮಾನ್ ವಿರುದ್ಧ ತಮಿಳು ಸಂಘಟನೆಗಳ ಪ್ರತಿಭಟನೆ

ಇತ್ತೀಚೆಗಷ್ಟೆ ಶ್ರೀಲಂಕಾ ಅಧ್ಯಕ್ಷ ರಾಜಪಕ್ಸೆ ಪರ ಚುನಾವಣಾ ಪ್ರಚಾರದಲ್ಲಿ ಕಾಣಿಸಿಕೊಂಡಿದ್ದ ಸಲ್ಮಾನ್ ಖಾನ್ ವಿರುದ್ದ ತಮಿಳು ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ.

ಮುಂಬೈ: ಇತ್ತೀಚೆಗಷ್ಟೆ ಶ್ರೀಲಂಕಾ ಅಧ್ಯಕ್ಷ ರಾಜಪಕ್ಸೆ ಪರ ಚುನಾವಣಾ ಪ್ರಚಾರದಲ್ಲಿ ಕಾಣಿಸಿಕೊಂಡಿದ್ದ ಸಲ್ಮಾನ್ ಖಾನ್ ವಿರುದ್ದ ತಮಿಳು ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ.

ಸಲ್ಮಾನ್ ಖಾನ್ ಅವರ ಮುಂಬೈ ನಿವಾಸದ ಎದುರು ತಮಿಳು ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದ್ದು, ನಟ ಸಲ್ಮಾನ್ ವಿರುದ್ಧ ಘೋಷಣೆಗಳನ್ನು ಕೂಗುತ್ತಿವೆ. ಇನ್ನು ತಮಿಳು ನಾಡಿನಾದ್ಯಂತ ಸಲ್ಮಾನ್ ಖಾನ್ ಚಿತ್ರವನ್ನು ನಿಷೇಧಿಸುವಂತೆಯೂ ಕೂಡ ತಮಿಳು ಸಂಘಟನೆಗಳು ಆಗ್ರಹಿಸುತ್ತಿವೆ.

ಶ್ರೀಲಂಕಾದಲ್ಲಿದ್ದ ಎಲ್ ಟಿಟಿಇ ಸಂಘಟನೆಯ ವಿರುದ್ಧ ಯುದ್ಧ ಸಾರಿದ್ದ ರಾಜಪಕ್ಸೆ ಸರ್ಕಾರ ಅದರಲ್ಲಿ ಯಶಸ್ವಿ ಕೂಡ ಆಗಿತ್ತು. ಈ ಕಾರ್ಯಾಚರಣೆಯನ್ನು ತೀವ್ರವಾಗಿ ವಿರೋಧಿಸುತ್ತಿದ್ದ ಭಾರತದ ತಮಿಳು ಸಂಘಟನೆಗಳು ಲಂಕಾ ತಮಿಳರಿಗೆ ರಾಜಪಕ್ಸೆ ಸರ್ಕಾರವು ಅನ್ಯಾಯವೆಸುಗುತ್ತಿದೆ ಎಂದು ಆರೋಪ ಮಾಡುತ್ತಾ ಬಂದಿವೆ.

ಇನ್ನು ತಮಿಳು ಚಿತ್ರರಂಗದ ಯಾವ ನಟರು  ಕೂಡ ಶ್ರೀಲಂಕಾದಲ್ಲಿ ಚಿತ್ರೀಕರಣವನ್ನು ಮಾಡಬಾರದಂತೆಯೂ ಮತ್ತು ಯಾವುದೇ ಕಾರ್ಯಕ್ರಮದಲ್ಲಿ ಭಾಗವಹಿಸದಂತೆ ತಾಕೀತು ಮಾಡಲಾಗಿತ್ತು. ಸ್ವತಃ ತಮಿಳು ಚಿತ್ರರಂಗವೇ ಶ್ರೀಲಂಕಾದಲ್ಲಿ ಚಿತ್ರೀಕರಣ ನಡೆಸುವ ಮತ್ತು ಲಂಕಾಗೆ ಹೋಗಿ ನಟಿಸುವ ನಟರ ವಿರುದ್ಧ ಕ್ರಮಕ್ಕೆ ಮುಂದಾಗಿತ್ತು.

ಸಲ್ಮಾನ್ ಖಾನ್ ಜೊತೆಯಲ್ಲಿ ರೆಡಿ ಚಿತ್ರದಲ್ಲಿ ಶ್ರೀಲಂಕಾಗೆ ಹೋಗಿ ನಟಿಸಿದ್ದ ನಟಿ ಆಸಿನ್ ರ ಮೇಲೆ ಕೂಡ ತಮಿಳು ಚಿತ್ರರಂಗ ನಿಷೇಧ ಹೇರಿತ್ತು. ಇದೀಗ ನಟ ಸಲ್ಮಾನ್ ಖಾನ್ ವಿರುದ್ಧ ತಮಿಳು ಸಂಘಟನೆಗಳು ಕೆಂಗಣ್ಣು ಬೀರಿದ್ದು, ತಮಿಳುನಾಡಿನಾಧ್ಯಂತ ಸಲ್ಮಾನ್ ಅವರ ಚಿತ್ರಗಳನ್ನು ನಿಷೇಧಿಸುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT