ಸಾಂದರ್ಭಿಕ ಚಿತ್ರ 
ಪ್ರಧಾನ ಸುದ್ದಿ

ದೆಹಲಿ-ಕಾಬೂಲ್ ವಿಮಾನ ಅಪಹರಣ ಸಾಧ್ಯತೆ: ರೆಡ್ ಅಲರ್ಟ್

ದೆಹಲಿ ಕಾಬೂಲ್ ಮಾರ್ಗದ ವಿಮಾನ ಅಪಹರಣವಾಗುವ ಸಾಧ್ಯತೆ ಇದೆ ...

ನವದೆಹಲಿ: ದೆಹಲಿ ಕಾಬೂಲ್ ಮಾರ್ಗದ ವಿಮಾನ ಅಪಹರಣವಾಗುವ ಸಾಧ್ಯತೆ ಇದೆ ಎಂದು ಗುಪ್ತಚರ ಇಲಾಖೆ ಎಚ್ಚರಿಸಿದೆ. ಹಾಗೆಯೇ ಏರ್ ಇಂಡಿಯಾ ಉಗ್ರಗಾಮಿಗಳ ಗುರಿ ಎಂದು ಸೂಚನೆ ನೀಡಿವೆ.

ವಿಮಾನನಿಲ್ದಾಣದ ಐ ಜಿ ಐ ಅವರು ಎಲ್ಲ ವಿಮಾನನಿಲ್ದಾಣಗಳನ್ನು ಹೈ ಅಲರ್ಟ್ ನಲ್ಲಿಟ್ಟಿದ್ದು, ತಪಾಸಣೆಯನ್ನು ತೀವ್ರಗೊಳಿಸುವಂತೆ ಭದ್ರತಾ ಸಿಬ್ಬಂದಿಗೆ ಸೂಚಿಸಿದ್ದಾರೆ.

೧೯೯೯ರಲ್ಲಿ ನಡೆದ ಐ ಸಿ ೮೧೪ ಕಂಧಹಾರ ವಿಮಾನ ಅಪಹರಣ ಮಾದರಿಯಲ್ಲೇ ಈ ಅಪಹರಣ ನಡೆಯಬಹುದು ಎಂದು ವರದಿ ಸೂಚಿಸಿದೆ.

ಏರ್ ಇಂಡಿಯಾ ವಿಮಾನವೊಂದು ಅಪಹರಣವಾಗಲಿದೆ ಎಂದು ಕರೆ ಬಂದ ದಿನದ ನಂತರ ಈ ಎಚ್ಚರಿಕೆ ಗುಪ್ತಚರ ಇಲಾಖೆಯಿಂದ ಬಂದಿದೆ.

ಬೆಂಗಾಳಿಯೊಬ್ಬ ಈ ಕರೆ ಮಾಡಿದ್ದು ಎಂದು ಕೊಲ್ಕತ್ತಾದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆದರೆ ಅವರ ನಿರ್ಧಿಷ್ಟ ಗುರಿಯ ಬಗ್ಗೆ ಅಧಿಕಾರಿ ತಿಳಿಸಿಲ್ಲ. ಕೊಲ್ಕತ್ತಾದಲ್ಲಿ ವಿಮಾನಗಳು ಎಂದಿನಂತೆ ಕಾರ್ಯನಿರ್ವಿಹಿಸುತ್ತಿವೆ ಎಂದಿದ್ದಾರೆ.

ನಾಗರಿಕ ವಿಮಾನಯಾನ ಬ್ಯೂರೋ ಎಲ್ಲ ವಿಮಾನ ನಿಲ್ದಾಣಗಳಿಗೆ ತೀವ್ರ ಕಟ್ಟೆಚ್ಚರ ವಹಿಸಲು ತಿಳಿಸಿದ್ದು, ಭದ್ರತಾ ತಪಾಸಣೆಗಳನ್ನು ತೀವ್ರಗೊಳಿಸುವಂತೆ ಸೂಚಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

T20 World Cup, IND vs Pak: ಇಶಾನ್ ಕಿಶಾನ್ ಬ್ಯಾಟಿಂಗ್ ಅಬ್ಬರ; ಸ್ಪಿನ್ ಮೋಡಿಗೆ ಪಾಕ್ ತತ್ತರ, ಭಾರತಕ್ಕೆ 61 ರನ್ ಗೆಲುವು!

T20 World Cup 2026: ಸೂಪರ್ 8 ಹಂತಕ್ಕೆ ಭಾರತ ಲಗ್ಗೆ; ದೇಶಾದ್ಯಂತ ಸಂಭ್ರಮಾಚರಣೆ, ಗಣ್ಯರ ಶುಭಾಶಯ!

'ಈ ಛಲವಾದಿ ನಾರಾಯಣಸ್ವಾಮಿ ನಾಯಿ ಥರ...ಪಾಪ ಬೊಗಳಿದೆ, ಅದಕ್ಕೆ ನಾವೇನೂ ಕಲ್ಲು ಎಸೆಯಲು ಹೋಗೋದಿಲ್ಲ'

4 ಕೋಟಿ ರೂ. ಮೌಲ್ಯದ ಗ್ರಾಹಕರ ಚಿನ್ನಾಭರಣ ಕದ್ದು, ಆನ್‌ಲೈನ್ ಬೆಟ್ಟಿಂಗ್‌: ಬ್ಯಾಂಕ್ ಮ್ಯಾನೇಜರ್ ಬಂಧನ, ಸಿಕ್ಕಿಬಿದ್ದಿದ್ದೇ ರೋಚಕ!

Bengaluru: 'ಮನೆಗೆ ಸೂರ್ಯನ ಬೆಳಕು ಬರುತ್ತದೆ' ಎಂಬ ಒಂದೇ ಕಾರಣಕ್ಕೆ 80 ಸಾವಿರ ಬಾಡಿಗೆ ಕೇಳಿದ ಮಾಲೀಕ!

SCROLL FOR NEXT