ಓಮರ್ ಅಬ್ದುಲ್ಲಾ 
ಪ್ರಧಾನ ಸುದ್ದಿ

ಪ್ರಶಸ್ತಿಗಾಗಿ ಆಟಗಾರರು ಲಾಬಿ ನಡೆಸುವುದು ಖೇದಕರ: ಓಮರ್ ಅಬ್ದುಲ್ಲಾ

ಪದ್ಮ ಪ್ರಶಸ್ತಿಗಾಗಿ ಆಟಗಾರರು ಲಾಬಿ ನಡೆಸಬೇಕಾಗಿ ಬರುವುದು ಹಾಗೂ ಪರಸ್ಪರ ಸೆಣಸಾಡುವುದು ಖೇದಕರ ...

ಶ್ರೀನಗರ: ಪದ್ಮ ಪ್ರಶಸ್ತಿಗಾಗಿ ಆಟಗಾರರು ಲಾಬಿ ನಡೆಸಬೇಕಾಗಿ ಬರುವುದು ಹಾಗೂ ಪರಸ್ಪರ ಸೆಣಸಾಡುವುದು ಖೇದಕರ ಎಂದು ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಹೇಳಿದ್ದಾರೆ.

ಬಾಕ್ಸಿಂಗ್ ತಾರೆ ವಿಜೇಂದರ್ ಸಿಂಗ್ ಮಂಗಳವಾರ ನನಗೂ ಪದ್ಮ ವಿಭೂಷಣ ಪ್ರಶಸ್ತಿ ನೀಡುವಂತೆ ಕ್ರೀಡಾ ಸಚಿವಾಲಯಕ್ಕೆ ಶಿಫಾರಸು ಮಾಡಿ ಎಂದು ಬಾಕ್ಸಿಂಗ್ ಫೆಡರೇಷನ್‌ಗೆ ವಿನಂತಿಸಿರುವ ಸುದ್ದಿ ಬಗ್ಗೆ  ಓಮರ್ ಅಬ್ದುಲ್ಲಾ ಈ ಪ್ರತಿಕ್ರಿಯೆ ನೀಡಿದ್ದಾರೆ.

ಎರಡು ದಿನಗಳ ಹಿಂದೆಯಷ್ಟೇ ಪದ್ಮ ಭೂಷಣ ಪ್ರಶಸ್ತಿ ನನಗೂ ನೀಡಿ ಎಂದು ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ದನಿಯೆತ್ತಿದ್ದು, ಕ್ರೀಡಾ ಸಚಿವಾಲಯ ಆಕೆಯ ಹೆಸರನ್ನು ಪ್ರಶಸ್ತಿಗಾಗಿ ಶಿಫಾರಸು ಮಾಡಿತ್ತು.

ಖ್ಯಾತ ಕ್ರೀಡಾಪಟುಗಳು ಪದ್ಮ ಪ್ರಶಸ್ತಿಯ ಸರತಿ ಸಾಲಿನಲ್ಲಿ ನಿಲ್ಲಲು ಪರಸ್ಪರ ಗುದ್ದಾಟ ಮಾಡುತ್ತಿರುವುದು ಖೇದಕರ ಎಂದು ಓಮರ್ ಅಬ್ದುಲ್ಲಾ ಟ್ವೀಟರ್‌ನಲ್ಲಿ ಬರೆದಿದ್ದಾರೆ.

ಇಂಥಾ ಪ್ರಶಸ್ತಿಗಳಿಗೆ ಸಾಧನೆಯೇ ಮಾನದಂಡವಾಗಿರಬೇಕು ಎಂದು ಹೇಳಿದ ಓಮರ್, ಪ್ರಶಸ್ತಿಗಾಗಿ ಲಾಬಿ ನಡೆಸುವುದು ಸರಿಯಲ್ಲ ಎಂದು ಅಭಿಪ್ರಾಯ ಪಟ್ಟಿದ್ದಾರೆ.      

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT