ಓಮರ್ ಅಬ್ದುಲ್ಲಾ 
ಪ್ರಧಾನ ಸುದ್ದಿ

ಪ್ರಶಸ್ತಿಗಾಗಿ ಆಟಗಾರರು ಲಾಬಿ ನಡೆಸುವುದು ಖೇದಕರ: ಓಮರ್ ಅಬ್ದುಲ್ಲಾ

ಪದ್ಮ ಪ್ರಶಸ್ತಿಗಾಗಿ ಆಟಗಾರರು ಲಾಬಿ ನಡೆಸಬೇಕಾಗಿ ಬರುವುದು ಹಾಗೂ ಪರಸ್ಪರ ಸೆಣಸಾಡುವುದು ಖೇದಕರ ...

ಶ್ರೀನಗರ: ಪದ್ಮ ಪ್ರಶಸ್ತಿಗಾಗಿ ಆಟಗಾರರು ಲಾಬಿ ನಡೆಸಬೇಕಾಗಿ ಬರುವುದು ಹಾಗೂ ಪರಸ್ಪರ ಸೆಣಸಾಡುವುದು ಖೇದಕರ ಎಂದು ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಹೇಳಿದ್ದಾರೆ.

ಬಾಕ್ಸಿಂಗ್ ತಾರೆ ವಿಜೇಂದರ್ ಸಿಂಗ್ ಮಂಗಳವಾರ ನನಗೂ ಪದ್ಮ ವಿಭೂಷಣ ಪ್ರಶಸ್ತಿ ನೀಡುವಂತೆ ಕ್ರೀಡಾ ಸಚಿವಾಲಯಕ್ಕೆ ಶಿಫಾರಸು ಮಾಡಿ ಎಂದು ಬಾಕ್ಸಿಂಗ್ ಫೆಡರೇಷನ್‌ಗೆ ವಿನಂತಿಸಿರುವ ಸುದ್ದಿ ಬಗ್ಗೆ  ಓಮರ್ ಅಬ್ದುಲ್ಲಾ ಈ ಪ್ರತಿಕ್ರಿಯೆ ನೀಡಿದ್ದಾರೆ.

ಎರಡು ದಿನಗಳ ಹಿಂದೆಯಷ್ಟೇ ಪದ್ಮ ಭೂಷಣ ಪ್ರಶಸ್ತಿ ನನಗೂ ನೀಡಿ ಎಂದು ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ದನಿಯೆತ್ತಿದ್ದು, ಕ್ರೀಡಾ ಸಚಿವಾಲಯ ಆಕೆಯ ಹೆಸರನ್ನು ಪ್ರಶಸ್ತಿಗಾಗಿ ಶಿಫಾರಸು ಮಾಡಿತ್ತು.

ಖ್ಯಾತ ಕ್ರೀಡಾಪಟುಗಳು ಪದ್ಮ ಪ್ರಶಸ್ತಿಯ ಸರತಿ ಸಾಲಿನಲ್ಲಿ ನಿಲ್ಲಲು ಪರಸ್ಪರ ಗುದ್ದಾಟ ಮಾಡುತ್ತಿರುವುದು ಖೇದಕರ ಎಂದು ಓಮರ್ ಅಬ್ದುಲ್ಲಾ ಟ್ವೀಟರ್‌ನಲ್ಲಿ ಬರೆದಿದ್ದಾರೆ.

ಇಂಥಾ ಪ್ರಶಸ್ತಿಗಳಿಗೆ ಸಾಧನೆಯೇ ಮಾನದಂಡವಾಗಿರಬೇಕು ಎಂದು ಹೇಳಿದ ಓಮರ್, ಪ್ರಶಸ್ತಿಗಾಗಿ ಲಾಬಿ ನಡೆಸುವುದು ಸರಿಯಲ್ಲ ಎಂದು ಅಭಿಪ್ರಾಯ ಪಟ್ಟಿದ್ದಾರೆ.      

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

ಸರ್ಕಾರಿ ಸಂಸ್ಥೆಗಳು, ಸಾರ್ವಜನಿಕ ಸ್ಥಳಗಳಲ್ಲಿ RSS ಚಟುವಟಿಕೆಗಳನ್ನು ನಿಷೇಧಿಸಿ: ಮುಖ್ಯಮಂತ್ರಿಗೆ ಪ್ರಿಯಾಂಕ್ ಖರ್ಗೆ ಪತ್ರ

SCROLL FOR NEXT